Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ
ಅಬ್ದುಲ್ ಸತ್ತಾರ್, ಉದಯ್ ಸಾಮಂತ್ ಸಹೋದರನಿಗೆ ಟಿಕೆಟ್
Team Udayavani, Oct 23, 2024, 10:03 AM IST
ಮುಂಬಯಿ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಏಕನಾಥ್ ಶಿಂಧೆ ಬಣದ ಶಿವಸೇನೆ ತನ್ನ 45 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಥಾಣೆ ನಗರದ ಕೊಪ್ರಿ-ಪಂಚ್ಪಖಾಡಿಯಿಂದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಹಲವು ಕ್ಯಾಬಿನೆಟ್ ಸದಸ್ಯರಿಗೆ ಟಿಕೆಟ್ ನೀಡಲಾಗಿದೆ. ಶಿಂಧೆ ಮುಂಬೈಗೆ ಹೊಂದಿಕೊಂಡಿರುವ ಥಾಣೆ ನಗರದ ಕೊಪ್ರಿ-ಪಂಚ್ಪಖಾಡಿ ಕ್ಷೇತ್ರದಿಂದ ಮರುಚುನಾವಣೆ ಬಯಸಿದ್ದಾರೆ.
ಮಂಗಳವಾರ ತಡರಾತ್ರಿ ಬಿಡುಗಡೆಯಾದ ಪಟ್ಟಿಯ ಪ್ರಕಾರ, ಜೂನ್ 2022 ರಲ್ಲಿ ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಶಿಂಧೆ ಅವರು ಬಂಡಾಯ ಸಾರಿದಾಗ ಅವರನ್ನು ಬೆಂಬಲಿಸಿದ ಬಹುತೇಕ ಎಲ್ಲಾ ಶಾಸಕರಿಗೆ ಆಡಳಿತ ಪಕ್ಷ ಮಣೆ ಹಾಕಿದೆ.
ಮಾಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಎರಡನೇ ಪ್ರಮುಖ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಶಿವಸೇನೆ ಪಾತ್ರವಾಗಿದೆ. ಮಿತ್ರ ಪಕ್ಷ ಬಿಜೆಪಿ ಭಾನುವಾರ 99 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.
ಸಚಿವರಾದ ಗುಲಾಬ್ರಾವ್ ಪಾಟೀಲ್, ದೀಪಕ್ ಕೇಸರ್ಕರ್, ಅಬ್ದುಲ್ ಸತ್ತಾರ್ ಮತ್ತು ಶಂಭುರಾಜ್ ದೇಸಾಯಿ ಜಲಗಾಂವ್ ಗ್ರಾಮಾಂತರ, ಸಾವಂತವಾಡಿ, ಸಿಲ್ಲೋಡ್ ಮತ್ತು ಪಟಾನ್ನಿಂದ ಕಣಕ್ಕಿಳಿಸಿದೆ.ಮತ್ತೊಬ್ಬ ಸಂಪುಟ ಸದಸ್ಯ ದಾದಾ ಭೂಸೆ ನಾಸಿಕ್ ಜಿಲ್ಲೆಯ ಮಾಲೆಗಾಂವ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.ಸಚಿವರಾದ ಉದಯ್ ಸಾಮಂತ್ ಮತ್ತು ತಾನಾಜಿ ಸಾವಂತ್ ಅವರು ಕ್ರಮವಾಗಿ ರತ್ನಗಿರಿ ಮತ್ತು ಪರಂದಾದಿಂದ ಕಣಕ್ಕಿಳಿದಿದ್ದಾರೆ.ಮತ್ತೊಬ್ಬ ಪ್ರಮುಖ ನಾಯಕ ಸದಾ ಸರ್ವಂಕರ್ ಮುಂಬೈನ ಮಾಹಿಮ್ನಿಂದ ಚುನಾವಣೆ ಎದುರಿಸಲಿದ್ದಾರೆ.
ಪಕ್ಷವು ಹಲವು ನಾಯಕರ ಬಂಧುಗಳನ್ನು ಕೂಡ ಕಣಕ್ಕಿಳಿಸಿದೆ. ರಾಜಾಪುರದಿಂದ ಸಚಿವ ಉದಯ್ ಸಾಮಂತ್ ಸಹೋದರ ಕಿರಣ್ ಸಾಮಂತ್ ಗೆ ಟಿಕೆಟ್ ನೀಡಿದೆ.ದಿವಂಗತ ಶಾಸಕ ಅನಿಲ್ ಬಾಬರ್ ಅವರ ಪುತ್ರ ಸುಹಾಸ್ ಬಾಬರ್ ಸಾಂಗ್ಲಿ ಜಿಲ್ಲೆಯ ಖಾನಾಪುರದಿಂದ ಸ್ಪರ್ಧಿಸಲಿದ್ದಾರೆ.
ಮುಂಬೈ ವಾಯವ್ಯ ಭಾಗದ ಶಿವಸೇನೆ ಲೋಕಸಭಾ ಸದಸ್ಯ ರವೀಂದ್ರ ವೈಕರ್ ಅವರ ಪತ್ನಿ ಮನಿಷಾ ವೈಕರ್ ಅವರು ಜೋಗೇಶ್ವರಿ (ಪೂರ್ವ) ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ, ಶಿವಸೇನಾ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆನಂದ್ ಅಡ್ಸುಲೆ ಅವರ ಪುತ್ರ ಅಭಿಜಿತ್ ಅಡ್ಸುಲ್ ಅವರು ಅಮರಾವತಿ ಜಿಲ್ಲೆಯ ದರ್ಯಾಪುರದಿಂದ ಸ್ಪರ್ಧಿಸಲಿದ್ದಾರೆ.
ಛತ್ರಪತಿ ಸಂಭಾಜಿನಗರ (ಔರಂಗಾಬಾದ್) ಲೋಕಸಭಾ ಸದಸ್ಯ ಸಂದೀಪನ್ ಬುಮ್ರೆ ಅವರ ಪುತ್ರ ವಿಲಾಸ್ ಬುಮ್ರೆ ಪೈಥಾನ್ನಿಂದ ಸ್ಪರ್ಧಿಸಲಿದ್ದಾರೆ.
ಬಿಜೆಪಿ, ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್ಸಿಪಿಯನ್ನು ಒಳಗೊಂಡಿರುವ ಆಡಳಿತಾರೂಢ ಮಹಾಯುತಿಯು 288 ಸದಸ್ಯರ ವಿಧಾನಸಭೆಗೆ ಚುನಾವಣೆಗೆ ತನ್ನ ಸೀಟು ಹಂಚಿಕೆ ಒಪ್ಪಂದವನ್ನು ಇನ್ನೂ ಪ್ರಕಟಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
Panaji: ಗೋವಾದಲ್ಲಿ ತುಳುಕೂಟ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ: ವಿ. ಸುನೀಲ್ ಕುಮಾರ್
Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ
Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ
“Bulldozer’ justice: ಉ.ಪ್ರ.ಯೋಗಿ ಸರಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
Panaji: ಗೋವಾದಲ್ಲಿ ತುಳುಕೂಟ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ: ವಿ. ಸುನೀಲ್ ಕುಮಾರ್
Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ
C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ
Sandalwood: ಸುಂದರ ರಾಕ್ಷಸಿ ಇವಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.