ರೈತರಿಗೆ ಬೆಂಬಲ ಬೆಲೆ ಮರು ಪರಿಶೀಲನೆಗೆ ಪ್ರಧಾನಿಗೆ ಸಿದ್ದರಾಮಯ್ಯ ಪತ್ರ
Team Udayavani, Jun 7, 2020, 8:08 PM IST
ಬೆಂಗಳೂರು: ಕೇಂದ್ರ ಸರ್ಕಾರ ಇತ್ತೀಚೆಗೆ ಹದಿನೇಳು ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದು ಅವೈಜ್ಞಾನಿಕವಾಗಿದ್ದು, ಇದರಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ 2022 ಗೆ ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಭರವಸೆ ನೀಡಿತ್ತು. ಅಲ್ಲದೆ ಅವರ ಉತ್ಪಾದನಾ ವೆಚ್ಚದ 1.5 ಪಟ್ಟು ಹೆಚ್ಚಿನ ಆದಾಯ ರೈತರಿಗೆ ದೊರೆಯುವಂತೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು.
ಆದರೆ, ಇತ್ತೀಚೆಗೆ ಕೇಂದ್ರ ಸರ್ಕಾರ 17 ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದು ಅವೈಜ್ಞಾನಿಕವಾಗಿದೆ. ಸ್ವಾಮಿನಾಥನ್ ವರದಿ ಪ್ರಕಾರ ರೈತರ ಉತ್ಪಾದನಾ ವೆಚ್ಚವನ್ನು ಪರಿಗಣಿಸಿ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡದಿರುವುದರಿಂದ ರೈತರಿಗೆ ಯಾವುದೇ ರೀತಿಯಲ್ಲಿ ಅನುಕೂಲವಾಗುವುದಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಸ್ವಾಮಿನಾಥನ್ ವರದಿ ಪ್ರಕಾರ ರೈತರು ಯಾವುದೇ ಬೆಳೆ ಬೆಳೆಯಲು, ಬೀಜ, ಗೊಬ್ಬರ, ಕ್ರಿಮಿನಾಶಕ ಹಾಗೂ ಕೂಲಿಗೆ ಖರ್ಚು ಮಾಡಿರುವುದರ ಜೊತೆಗೆ ರೈತನ ಕುಟುಂಬದ ಸದಸ್ಯರ ಕೂಲಿ ಹಾಗೂ ಬೆಳೆ ಬೆಳೆಯಲು ಬಳಸಿದ ಭೂಮಿಯ ಬಾಡಿಗೆಯನ್ನೂ ಸೇರಿಸಿ ಉತ್ಪಾದನಾ ವೆಚ್ಚ ಪರಿಗಣಿಸಬೇಕು. ಅದರ ಆಧಾರದಲ್ಲಿ ಕೇಂದ್ರ ಸರ್ಕಾರ ಉತ್ಪಾದನಾ ವೆಚ್ಚದ 1.5 ರಷ್ಟು ಬೆಂಬಲ ಬೆಲೆ ನೀಡಬೇಕು. ಆಗ ರೈತನ ಬೆಳೆಗೆ ನಿಜವಾದ ಬೆಲೆ ದೊರೆತಂತಾಗುತ್ತದೆ.
ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ಅನೇಕ ರೈತರು ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಅಂತಹ ರೈತರನ್ನು ಗುರುತಿಸಿ ಅವರಿಗೂ ಅನುಕೂಲವಾಗುವ ರೀತಿ ಕೇಂದ್ರ ಸರ್ಕಾರ ತೀರ್ಮಾನ ಮಾಡಬೇಕು. ಈಗಾಗಲೇ ಘೋಷಣೆ ಮಾಡಿರುವ ಬೆಂಬಲ ಬೆಲೆ ಅವೈಜ್ಞಾನಿಕವಾಗಿದ್ದು, ಅದನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.