ಗ್ವಾಟೆಮಾಲಾ ಗಡಿಯಲ್ಲಿ ಮೆಕ್ಸಿಕೋ ಸೇನೆಯಿಂದ ಗುಂಡಿನ ದಾಳಿ-6 ವಲಸಿಗರು ಮೃತ್ಯು
ಈ ಮಾರ್ಗ ವಲಸಿಗರನ್ನು ಕಳ್ಳಸಾಗಣೆ ಮಾಡುವ ಮಾರ್ಗವಾಗಿದೆ.
Team Udayavani, Oct 3, 2024, 12:29 PM IST
ಮೆಕ್ಸಿಕೋ ನಗರ(Mexico City): ಗ್ವಾಟೆಮಾಲಾದ ಗಡಿ ಸಮೀಪ ಟ್ರಕ್ ನಲ್ಲಿ ಪರಾರಿಯಾಗಲು ಯತ್ನಿಸಿದ್ದ ಆರು ಮಂದಿ ವಲಸಿಗರ ಮೇಲೆ ಮೆಕ್ಸಿಕೋ ಸೈನಿಕರು (Mexican Soldiers) ನಡೆಸಿದ ಗುಂಡಿನ ದಾಳಿಗೆ ಸಾವನ್ನಪ್ಪಿರುವ ಘಟನೆ ಬುಧವಾರ (ಅ.02) ನಡೆದಿರುವುದಾಗಿ ಮೆಕ್ಸಿಕೋ ರಕ್ಷಣಾ ಇಲಾಖೆ ತಿಳಿಸಿದೆ.
ಈಜಿಪ್ಟ್, ನೇಪಾಳ, ಕ್ಯೂಬಾ, ಭಾರತ, ಪಾಕಿಸ್ತಾನದ ವಲಸಿಗರು ಟ್ರಕ್ ನಲ್ಲಿ ಪರಾರಿಯಾಗಲು ಯತ್ನಿಸಿದ ವೇಳೆ ಈ ಘಟನೆ ನಡೆದಿರುವುದಾಗಿ ವರದಿ ವಿವರಿಸಿದೆ.
ಮೆಕ್ಸಿಕೋ ಸೈನಿಕರು ಗುಂಡಿನ ದಾಳಿ ನಡೆಸಿದ್ದು, ಟ್ರಕ್ ನಲ್ಲಿದ್ದ ಆರು ಮಂದಿ ವಲಸಿಗರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರ ಸ್ಥಿತಿ ಹೇಗಿದೆ ಎಂಬ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.
ಟ್ರಕ್ ನಲ್ಲಿ ಯಾವುದಾದರು ಶಸ್ತ್ರಾಸ್ತ್ರಗಳಿವೆ, ಅವರು ಯಾವ ಉದ್ದೇಶಕ್ಕಾಗಿ ಪರಾರಿಯಾಗಲು ಯತ್ನಿಸಿದ್ದರು ಎಂಬ ಬಗ್ಗೆ ಮೆಕ್ಸಿಕೋ ರಕ್ಷಣಾ ಇಲಾಖೆ ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ವರದಿಯಾಗಿದೆ.
ಟ್ರಕ್ ನಲ್ಲಿ ಒಟ್ಟು 33 ಮಂದಿ ವಲಸಿಗರು ತೆರಳುತ್ತಿದ್ದರು. ಈ ಮಾರ್ಗ ವಲಸಿಗರನ್ನು ಕಳ್ಳಸಾಗಣೆ ಮಾಡುವ ಮಾರ್ಗವಾಗಿದೆ. ವಲಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಸೇನಾ ಯೋಧರನ್ನು ಅಮಾನತು ಮಾಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Japan Airport: 2ನೇ ಮಹಾಯುದ್ಧದ 226 ಕೆ.ಜಿ. ಬಾಂಬ್ ಈಗ ಸ್ಫೋಟ!
Stock Markets Slump: ಇರಾನ್-ಇಸ್ರೇಲ್ ಯುದ್ಧಕ್ಕೆ ಷೇರುಪೇಟೆ ತಲ್ಲಣ!
World War 3?: ಭೂಮಿ ಮೇಲೆ ನಾವಿರಬೇಕು ಇಲ್ಲವೇ ನೀವಿರಬೇಕು: ಇರಾನ್ ಗೆ ಇಸ್ರೇಲ್ ಸಂದೇಶ!
India-US;ಆ್ಯಂಟೋನಿ ಬ್ಲಿಂಕೆನ್ ಜತೆ ಜೈಶಂಕರ್ ಮಹತ್ವದ ಮಾತುಕತೆ
ಮಾಜಿ ಅಧ್ಯಕ್ಷ, ನೊಬೆಲ್ ಪ್ರಶಸ್ತಿ ಪುರಸ್ಕೃತ ಜಿಮ್ಮಿ ಕಾರ್ಟರ್ ಗೆ 100ನೇ ವರ್ಷದ ಸಂಭ್ರಮ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್ಯಾಲಿ
Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ಷರತ್ತುಬದ್ಧ ಜಾಮೀನು
Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ
Mangaluru: ಕೆಎಸ್ಆರ್ಟಿಸಿಯಿಂದ ದಸರಾ ಪ್ರವಾಸ ಪ್ಯಾಕೇಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.