ಹಾವೇರಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆರು ನಿರ್ಣಯ


Team Udayavani, Jan 8, 2023, 5:33 PM IST

1-sadsad

ಹಾವೇರಿ: ಸಂಪ್ರದಾಯದಂತೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿಯೂ ಕೂಡ ಒಟ್ಟು ಆರು ನಿರ್ಣಯಗಳನ್ನು ತೆಗೆದುಕೊಂಡು ಇವುಗಳನ್ನು ಕೂಡಲೇ ಈಡೇರಿಸುವಂತೆ ಸಾಹಿತ್ಯ ಸಮ್ಮೇಳನದ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಬಿ.ಎಂ.ಪಟೇಲ್ ಪಾಂಡು ಅವರು ನಿರ್ಣಯ ಮಂಡಿಸಿದರು. ಸಮ್ಮೇಳನದ ಸರ್ವಾಧ್ಯಕ್ಷ ಡಾ.ದೊಡ್ಡರಂಗೇಗೌಡ ಅವರು ಅನುಮೋದಿಸಿದರು.

ಮೊದಲನೇದಾಗಿ ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ವಿಧೆಯಕ ಕೂಡಲೇ ಸುಗ್ರೀವಾಜ್ಞೆ ಮೂಲಕ ಕಾನೂನಿನ ರೂಪ ಪಡೆದು ಶಿಕ್ಷಣ, ನ್ಯಾಯಾಂಗ, ಆಡಳಿತದಲ್ಲಿ ಕನ್ನಡ ಪರಿಣಾಮಕಾರಿಯಾಗಿ ಜಾರಿಗೆ ಬರಬೇಕು.

ಇನ್ನು ಎರಡನೇದಾಗಿ ಕರ್ನಾಟಕ ಮಹಾರಾಷ್ಟ‌ ಗಡಿ ವಿವಾದದ ಸಂಬಂಧ ಇರುವ ಮಹಾಜನ ವರದಿ ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿದ್ದು, ಪ್ರಕರಣ ವಿಚಾರಣೆಯ ಹಂತದಲ್ಲಿದೆ. ಆ ಹಿನ್ನೆಲೆಯಲ್ಲಿ ನ್ಯಾಯಾಲಯದ ಅಂತಿಮ ತೀರ್ಪಿನ ಮಾರ್ಗದರ್ಶನದಂತೆ ಸೂಕ್ತ ಕ್ರಮವನ್ನು ವಿಳಂಬವಿಲ್ಲದೇ ಕೈಗೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸಲಾಯಿತು.

ಮೂರನೇದಾಗಿ ಕನ್ನಡಕ್ಕಾಗಿ ಹೊರಾಡಿದ ಕನ್ನಡ ಚಳವಳಿಗಾರರ ಮೇಲಿನ ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ಕೂಡಲೇ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಲಾಯಿತು.

ನಾಲ್ಕನೇಯದಾಗಿ ವಿಧಾನದ ಎಂಟನೇ ಪರಿಚ್ಛೇದದ ಅನ್ವಯ ಎಲ್ಲಾ ಪ್ರಾಂತೀಯ ಭಾಷೆಗಳನ್ನು ಸಮಾನ ಎಂದು ಗುರುತಿಸಿರುವ ಹಿನ್ನೆಲೆ ಈ ಪಟ್ಟಿಯಲ್ಲಿರುವ 22 ಭಾಷೆಗಳಲ್ಲಿರುವ ಕನ್ನಡ ಭಾಷೆ ಕೂಡ ಕರ್ನಾಟಕದ ಸಾರ್ವಭೌಮ ಭಾಷೆಯಾಗಿದೆ. ಇದರ ಮೇಲಿನ ಹಿಂದಿ ಅಥವಾ ಇನ್ಯಾವುದೇ ಭಾಷೆಯ ಆಕ್ರಮಣ ಹಾಗೂ ಹೇರಿಕೆಯನ್ನು ಈ ಸಮ್ಮೇಳನ ತೀವ್ರವಾಗಿ ಖಂಡಿಸುತ್ತದೆ ಎಂಬ ನಿರ್ಣಯ ಕೈಗೊಳ್ಳಲಾಯಿತು.

ಐದನೇದಾಗಿ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿ ಆಯೋಜಿಸಬೇಕೆನ್ನುವ ನಿರ್ಣಯವನ್ನು ರಾಜ್ಯ ಸರ್ಕಾರ ಈಗಾಗಲೇ ತೆಗೆದುಕೊಂಡಿದ್ದು, ಈ ಸಮ್ಮೇಳನವನ್ನು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಆಯೋಜಿಸಬೇಕು. ನಿಯೋಜಿತ ಸಮ್ಮೇಳನದ ಸಂಬಂಧ ಸರ್ಕಾರ ನಡೆಸುವ ಸಭೆಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕೆಂದು ಈ ಸಮ್ಮೇಳನದಲ್ಲಿ ಒಕ್ಕೊರಲಿನಿಂದ ಆಗ್ರಹಿಸಲಾಯಿತು.

ಆರನೇದಾಗಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟ ಸ್ವಾಗತ ಸಮಿತಿ ಹಾಗೂ ವಿವಿಧ ಸಮಿತಿಗಳ ಅಧ್ಯಕ್ಷರಿಗೆ, ಪದಾಧಿಕಾರಿಗಳಿಗೆ, ಜಿಲ್ಲಾ ಆಡಳಿತ ಹಾಗೂ ಎಲ್ಲ ಕಾರ್ಯಕರ್ತರಿಗೂ ಮತ್ತು ಆತಿಥ್ಯವನ್ನು ನೀಡಿದ, ಪ್ರೀತಿತೋರಿದ ಹಾವೇರಿಯ ಸಮಸ್ತ ಜನತೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಲಾಯಿತು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.