![Santhe-last](https://www.udayavani.com/wp-content/uploads/2025/02/Santhe-last-415x249.jpg)
![Santhe-last](https://www.udayavani.com/wp-content/uploads/2025/02/Santhe-last-415x249.jpg)
Team Udayavani, Apr 24, 2022, 8:02 PM IST
ಮೈಸೂರು: ಸರ್ವಜನಾಂಗದ ಶಾಂತಿಯ ತೋಟದಂತಿರುವ ಕರ್ನಾಟಕ ರಾಜ್ಯದಲ್ಲಿ ಎರಡು ಸಮುದಾಯಗಳ ನಡುವೆ ಸಾಮರಸ್ಯ ಹಾಳುಮಾಡುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್ .ಡಿ.ಕುಮಾರಸ್ವಾಮಿ ಆರೋಪಿಸಿದರು.
ಬನ್ನಿಮಂಟಪದ ಮಿಲನ್ ಫಂಕ್ಷನ್ ಹಾಲ್ ನಲ್ಲಿ ಭಾನುವಾರ ಆಯೋಜಿಸಲಾಗಿದ್ದ ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿ, ಎಂತಹ ಕಾಲಘಟ್ಟದಲ್ಲಿಯೂ ಸೋದರ ಭ್ರಾತೃತ್ವದೊಂದಿಗೆ ಇದ್ದು, ಕಷ್ಟ ಸುಖಗಳನ್ನು ಹಂಚಿಕೊಳ್ಳುತ್ತಿದ್ದ ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ಕಲುಷಿತಗೊಳಿಸಲು ಕೆಲ ಶಕ್ತಿಗಳು ಪ್ರಯತ್ನ ನಡೆಸಿವೆ. ಇದರಿಂದಾಗಿ ಪ್ರತಿನಿತ್ಯ ಸಮಸ್ಯೆ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಎರಡು ಸಮಾಜಗಳ ನಡುವೆ ಸಾಮರಸ್ಯ ಹಾಳುಮಾಡುವ ಸಂಘಟನೆಗಳಿಗೆ ಪ್ರೋತ್ಸಾಹ ಕೊಡದೆ ಭಾವೈಕ್ಯತೆ ಮೂಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಪ್ರಾರ್ಥನೆ
ಕಾರ್ಯಕ್ರಮ ಆರಂಭಕ್ಕೆ ಮುನ್ನ ಮುಸ್ಲಿಂ ಸಮುದಾಯದ ಧರ್ಮಗುರುಗಳು ನಮಾಝ್ ನೆರವೇರಿಸಿದರೆ, ಹಿಂದೂ ಸಮುದಾಯ ಪ್ರತಿನಿಧಿಸುವ ಋತ್ವಿಜರು ವೇದಘೋಷ ಮೊಳಗಿಸಿದರು.
You seem to have an Ad Blocker on.
To continue reading, please turn it off or whitelist Udayavani.