ಲಡಾಖ್ ನಿಂದ ದೆಹಲಿ ಚಲೋ ಪಾದಯಾತ್ರೆ-ವಾಂಗ್ಚುಕ್ ವಶಕ್ಕೆ: ವಿಪಕ್ಷಗಳ ಆಕ್ರೋಶ
ರಾಜ್ಯ ಸ್ಥಾನಮಾನ ನೀಡಬೇಕೆಂದು ಬೇಡಿಕೆ ಇಟ್ಟು ಕಳೆದ ನಾಲ್ಕು ವರ್ಷಗಳಿಂದ ಪ್ರತಿಭಟನೆ
Team Udayavani, Oct 1, 2024, 1:30 PM IST
ಲಡಾಖ್/ನವದೆಹಲಿ: ಲಡಾಖ್ ನಿಂದ ದೆಹಲಿ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದ ಸಂಶೋಧಕ, ಶಿಕ್ಷಣ ಸುಧಾರಕ ಸೋನಮ್ ವಾಂಗ್ಚುಕ್ ಹಾಗೂ ಸುಮಾರು 120 ಜನರನ್ನು ದೆಹಲಿ ಗಡಿಯಲ್ಲಿ ಮಂಗಳವಾರ (ಅ.01) ಬಂಧಿಸಿದ್ದು, ಇದು ರಾಜಕೀಯ ಪಕ್ಷಗಳ ನಡುವೆ ವಾಕ್ಸಮರಕ್ಕೆ ಎಡೆಮಾಡಿಕೊಟ್ಟಿದೆ.
ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಗೆ ಸಂವಿಧಾನದ 6ನೇ ಪರಿಚ್ಛೇದದ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಸೋನಮ್ ವಾಂಗ್ಚುಕ್ ಹಾಗೂ 100ಕ್ಕೂ ಅಧಿಕ ಮಂದಿ ದೆಹಲಿ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದರು. ಲಡಾಖ್ ನಿಂದ ಹೊರಟ ಪಾದಯಾತ್ರಿಗಳನ್ನು ದೆಹಲಿ ಪೊಲೀಸರು ಗಡಿಯಲ್ಲೇ ತಡೆದು ವಶಕ್ಕೆ ಪಡೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ಕಾರ್ಗಿಲ್ ಡೆಮೋಕ್ರಟಿಕ್ ಅಲೈಯನ್ಸ್ ಜತೆಗೂಡಿ ಲೇಹ್ ಅಪೆಕ್ಸ್ ಮಂಡಳಿ ಈ ಪಾದಯಾತ್ರೆಯನ್ನು ಆಯೋಜಿಸಿತ್ತು. ಲಡಾಖ್ ಗೆ ರಾಜ್ಯ ಸ್ಥಾನಮಾನ ನೀಡಬೇಕೆಂದು ಬೇಡಿಕೆ ಇಟ್ಟು ಕಳೆದ ನಾಲ್ಕು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿತ್ತು.
ವಾಂಗ್ಚುಕ್ ಬಂಧನಕ್ಕೆ ಕಾಂಗ್ರೆಸ್ ಆಕ್ರೋಶ:
ಸೋನಮ್ ವಾಂಗ್ಚುಕ್ ಹಾಗೂ ನೂರಾರು ಲಡಾಖಿಗಳ ಶಾಂತಿಯುತ ಪಾದಯಾತ್ರೆ ಅವರ ಸಾಂವಿಧಾನಿಕ ಹಕ್ಕು. ಅವರನ್ನು ಗಡಿಯಲ್ಲಿ ಬಂಧಿಸಿರುವುದನ್ನು ಒಪ್ಪಲು ಸಾಧ್ಯವಿಲ್ಲ. ದೆಹಲಿ ಗಡಿಯಲ್ಲಿ ಹಿರಿಯ ನಾಗರಿಕರನ್ನು ಬಂಧಿಸಿದ್ದೇಕೆ? ಇದೇನಾ ಲಡಾಖ್ ಭವಿಷ್ಯ? ಇದು ಕೂಡಾ ರೈತರಿಗೆ ಹೆಣೆದ ಚಕ್ರವ್ಯೂಹದಂತಿದೆ..ಮೋದಿಜೀ ನೀವು ಲಡಾಖ್ ನಿವಾಸಿಗಳ ನೋವನ್ನು ಆಲಿಸಿ ಎಂದು ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
The detention of Sonam Wangchuk ji and hundreds of Ladakhis peacefully marching for environmental and constitutional rights is unacceptable.
Why are elderly citizens being detained at Delhi’s border for standing up for Ladakh’s future?
Modi ji, like with the farmers, this…
— Rahul Gandhi (@RahulGandhi) September 30, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಮನೆ ಮುಂದೆ ನಿಲ್ಲಿಸಿದ್ದ ಕಾರು ಕಳವು… ಪೊಲೀಸರಿಂದ ಆರೋಪಿಯ ರೇಖಾಚಿತ್ರ ಬಿಡುಗಡೆ
Top court: ಬುಲ್ಡೋಜರ್ ಕಾರ್ಯಾಚರಣೆ-ದೇವಸ್ಥಾನ, ಮಸೀದಿ ಬಗ್ಗೆ ಸುಪ್ರೀಂ ಹೇಳಿದ್ದೇನು?
Kolkata Case: ಕರ್ತವ್ಯ ಬಹಿಷ್ಕರಿಸಿ ಮತ್ತೆ ಮುಷ್ಕರ ಆರಂಭಿಸಿದ ಕಿರಿಯ ವೈದ್ಯರು
Lucknow: 1.5 ಲಕ್ಷ ರೂ. ಮೌಲ್ಯದ iPhone ಡೆಲಿವರಿ ಮಾಡಲು ಹೋದ ಯುವಕನ ಹ*ತ್ಯೆ!
Himachal Pradesh: ಭಾರತೀಯ ವಾಯುಪಡೆ ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಶೋಧ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Unstable: ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರಕಾರ ಯತ್ನ: ಶಾಸಕ ಬೇಳೂರು
Thirthahalli: ವಾಗ್ದೇವಿ ಶಾಲೆಯ 4 ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ
Legislative Council Bye Election: ಕಿಶೋರ್ ಕುಮಾರ್ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್
Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು
Politics: ಸಿದ್ದರಾಮಯ್ಯ ಮಾಡಿರುವ ತಪ್ಪಿಗೆ ಕನಿಷ್ಠ ಶಿಕ್ಷೆ ಎಂದರೆ ರಾಜೀನಾಮೆ ಕೊಡುವುದು:ಆರಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.