ಅಧಿಕಾರಿಗೆ ಎಲ್ಲರೆದುರೇ ಗಂಭೀರವಾಗಿ ಕ್ಲಾಸ್ ತೆಗೆದುಕೊಂಡ ಸ್ಪೀಕರ್ ಕಾಗೇರಿ


Team Udayavani, Dec 30, 2021, 5:25 PM IST

1-ddsa

ಶಿರಸಿ: ಸಹಕಾರಿ‌ ಇಲಾಖೆಯ ಅಧಿಕಾರಿಯೋರ್ವರಿಗೆ ಇತರ ಅಧಿಕಾರಿಗಳೆಲ್ಲರ ಎದುರೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗಂಭೀರವಾಗಿ ಕ್ಲಾಸ್ ‌ತೆಗೆದುಕೊಂಡ ಪ್ರಸಂಗ‌ ಗುರುವಾರ ನಡೆಯಿತು.

ನಗರದ ಮಿನಿ ವಿಧಾ‌ನ ಸೌಧದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ವೇಳೆ ಸಹಕಾರಿ‌ ಇಲಾಖೆಯ ಅಧಿಕಾರಿ‌ ಲಿಂಗರಾಜು ಅವರ ಬಗ್ಗೆ ದೂರುಗಳಿವೆ ಎಂದು ಪ್ರಸ್ತಾಪಿಸಿ ಖಡಕ್ ಎಚ್ಚರಿಕೆ ಕೂಡ ನೀಡಿದರು.

ಶಿರಸಿ ಸಿದ್ದಾಪುರ ನನ್ನ‌ ಕ್ಷೇತ್ರ. ನಿಮ್ಮ ವರ್ತನೆ, ನಡುವಳಿಕೆ ಚೆನ್ನಾಗಿದ್ದರೆ ನನಗೂ‌ ಖುಷಿ. ಆದರೆ, ತಪ್ಪಾಗಿ ನಡೆದರೆ ಶಾಸನ ಸಭೆಯಲ್ಲೇ ನೇರವಾಗಿ ಇಲಾಖೆಯ‌ ಮುಖ್ಯಸ್ಥರ ಗಮನಕ್ಕೆ ತರುವದಾಗಿ ಹೇಳಿದರು. ಮಾರ್ಚ್ ಕೊನೆಯೊಳಗೆ ಎಲ್ಲ ಇಲಾಖೆ ಕಾರ್ಯ ಮುಗಿಸಬೇಕು. ಲೊಕೋಪಯೋಗಿ ಇಲಾಖೆ, ಪಂಚಾಯತ ರಾಜ್, ಪಿಎಂಜಿಎಸ್ ವೈ ಸೇರಿದಂತೆ‌ ಎಲ್ಲರೂ ಅನುದಾನ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಹಣ ವಾಪಸ್ ಹೋಗಬಾರದು ಎಂದರು.

ಅತಿವೃಷ್ಟಿ, ಕೋವಿಡ್ ಗೆ ಜನರಿಗೆ‌ ಪರಿಹಾರ ನೀಡಿದ್ದೇವೆ. 12.5 ಕೋಟಿ‌ ರೂ. ಲೊಕೋಪಯೋಗಿ, 15  ಕೋಟಿ ಜಿಲ್ಲಾ ಪಂಚಾಯತಿಗೆ ಅನುದಾನ ಬಂದಿದೆ. ಬೇರೆ ಬೇರೆ ಅನುದಾನ ಕೂಡ ಬಂದಿದೆ. ಕಾಲ ಮಿತಿಯಲ್ಲಿ ಕಾಮಗಾರಿ ಪೂರ್ಣ ಆಗಬೇಕು ಎಂದರು.

ಶಿರಸಿ ಜಾತ್ರೆಗೆ ಸಿದ್ದತೆ‌ ಮಾಡಿಕೊಳ್ಳಬೇಕು. ಮಾರಿಕಾಂಬಾ ದೇವಸ್ಥಾನ, ಬಾಬುದಾರರ ಜೊತೆಗೂ ಜಾತ್ರೆ ಸಿದ್ದತೆ ಕೂಡ ಮಾಡಿಕೊಳ್ಳಬೇಕು ಎಂದು ಶೀಘ್ರವಾಗಿ ಸಭೆ ನಡೆಸುತ್ತೇವೆ. ಕೋವಿಡ್ ಆತಂಕ ಕೂಡ ಇದೆ ಎಂದ ಕಾಗೇರಿ, ಕರೋನಾ‌ ಮೂರನೆ ಅಲೆಗೆ ತಡೆ ನೀಡಲು ಹಾಗೂ ಆಸ್ಪತ್ರೆ ಸಿದ್ದತೆ ಕುರಿತೂ ಸಮಾಲೋಚನೆ ಮಾಡಿದ್ದೇವೆ. ಎರಡನೇ ಹಂತದ ಲಸಿಕೆ ಶೇ.೭ ಪ್ರಮಾಣ ಬಾಕಿ ಇದೆ. ಜನರಲ್ಲಿ‌ ಜಾಗೃತಿ‌ ಕೂಡ ಮೂಡಿಸಿಕೊಳ್ಳಬೇಕು. ಕೊರೋನಾ ಮೂರನೇ ಅಲೆ ತಡೆಯಲು ಎಚ್ಚರಿಕೆ ಬೇಕಾಗಿದೆ ಎಂದೂ ಹೇಳಿದರು.

ರಾಷ್ಟ್ರೀಯ ಸಾಗಾರ ಮಾಲಾ ಯೋಜನೆಯಲ್ಲಿ ಕುಮಟಾ‌ ರಸ್ತೆ ಅಭಿವೃದ್ದಿಗಾಗಿ 300 ೦ ಜನ ಕೆಲಸ ಮಾಡುತ್ತಿದ್ದಾರೆ. ಇನ್ನೂ ವೇಗ ಆಗಬೇಕು. ಬೆಳಗಾವಿಯಲ್ಲಿ ನಿತಿನ್ ಗಡ್ಕರಿ ಅವರು ಶಿರಸಿ ಹಾವೇರಿ ರಸ್ತೆಯ ಭೂಮಿ‌ ಪೂಜೆ ಕೂಡ ಮಾಡಲಿದ್ದಾರೆ. ಶಿರಸಿ ಬಿಸಲಕೊಪ್ಪ ಹಾವೇರಿ ತನಕ ಒಟ್ಟೂ 75 ಕಿಮಿಗೆ 287 ಕೋಟಿ ರೂ. ಹಣ ಮಂಜೂರಿ ಆಗಿದೆ. 174 ಕೋಟಿಗೆ ಟೆಂಡರ್ ಆಗಿದೆ‌. ಶಿರಸಿ ಬೈಪಾಸ್ ಪ್ರಸ್ತಾವ ಕೂಡ ಇದೆ ಎಂದರು. ಲವ್ ಜಿಹಾದ್, ಹೆಣ್ಮಕ್ಕಳ ನಾಪತ್ತೆ ಪ್ರಕರಣವನ್ನು‌ ಪೊಲೀಸ ಇಲಾಖೆ ಗಂಭೀರವಾಗಿ ತೆಗೆದುಕೊಳ್ಳಲು ಸೂಚಿಸಿದ್ದೇವೆ‌. ಪೊಲೀಸ ಇಲಾಖೆ ಸಡಿಲವಾಗಿದೆ ಎಂಬ ಸಂದೇಶ ಹೋಗಬಾರದು ಎಂದೂ ಹೇಳಿದರು.

ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಆಯುಕ್ತೆ ಆಕೃತಿ ಬನ್ಸಾಲ, ತಹಸೀಲ್ದಾರ ಎಂ.ಆರ್.ಕುಲಕರ್ಣಿ, ತೋಟಗಾರಿಕಾ ಅಧಿಕಾರಿ ಬಿ.ಪಿ.ಸತೀಶ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.