![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 28, 2021, 7:34 PM IST
ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿ ತಯಾರಿ ಭರದಿಂದ ನಡೆಯುತ್ತಿದೆ. ಆ. 30 ರಂದು ಬೆಳಗ್ಗೆ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಲಕ್ಷತುಳಸಿ ಅರ್ಚನೆ ನಡೆಸುವರು. ತುಳಸಿ ಪುಷ್ಪ ನೀಡುವವರು ಆ. 29ರ ಒಳಗೆ ಒಪ್ಪಿಸಬಹುದು.
ಜನ್ಮಾಷ್ಟಮಿ ಪ್ರಯುಕ್ತ ಗರ್ಭಗುಡಿಯಲ್ಲಿ ಸ್ಯಾಕ್ಸೋಫೋನ್, ನಾಗಸ್ವರ, ವೇಣುವಾದನ ಕಛೇರಿ ನಡೆಯಲಿದೆ. ಆ. 30ರ ಮಧ್ಯರಾತ್ರಿ 12.30ರ ಬಳಿಕ ಅರ್ಘ್ಯ ಪ್ರದಾನಕ್ಕೆ ಭಕ್ತರಿಗೆ ಕನಕನ ಕಿಂಡಿ ಎದುರು ಮತ್ತು ವಸಂತ ಮಂಟಪದಲ್ಲಿ ಅವಕಾಶ ಕಲ್ಪಿಸಲಾಗಿದೆ.
ಕೃಷ್ಣಾಷ್ಟಮಿ ಮತ್ತು ಲೀಲೋತ್ಸವ (ವಿಟ್ಲಪಿಂಡಿ) ದಿನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆ. 30ರಂದು ಬೆಳಗ್ಗೆ 8ರಿಂದ ಸಂಜೆ 6ರ ವರೆಗೆ, ಆ. 31ರ ಬೆಳಗ್ಗೆ 7.30ರಿಂದ ಮಧ್ಯಾಹ್ನ 1ರ ವರೆಗೆ, ರಥೋತ್ಸವದ ಬಳಿಕ ಸುಮಾರು 5 ಗಂಟೆಯಿಂದ ದರ್ಶನಾವಕಾಶವಿದೆ.
ಇದನ್ನೂ ಓದಿ :ದ.ಕ. ಜಿಲ್ಲೆಯಲ್ಲಿ ಶೇ.1.83ಕ್ಕೆ ಇಳಿಕೆಯಾದ ಪಾಸಿಟಿವಿಟಿ ದರ : 207 ಮಂದಿಯಲ್ಲಿ ಸೋಂಕು ಪತ್ತೆ
ಭಕ್ತರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ ದರ್ಶನ ನಡೆಸಬೇಕೆಂದು ಮಠದ ವ್ಯವಸ್ಥಾಪಕರು ಕೋರಿದ್ದಾರೆ.
ಯಾತ್ರಾರ್ಥಿಗಳು ವಿಶ್ವಪಥದ ಮೂಲಕ, ಸುದರ್ಶನ ಪ್ರವೇಶ ಪತ್ರ ಹೊಂದಿದ ಸ್ಥಳೀಯರು ಉತ್ತರ ಮತ್ತು ದಕ್ಷಿಣ ದ್ವಾರದಿಂದ ದರ್ಶನ ಪಡೆಯಬಹುದು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.