IT notice 12ಕೋಟಿ ರೂ ವಹಿವಾಟು; ಸ್ಟೇಷನರಿ ಅಂಗಡಿ ಮಾಲಕನಿಗೆ ಶಾಕ್!!
IT ಶೋಕಾಸ್ ನೋಟಿಸ್...! ಪ್ಯಾನ್ ದುರುಪಯೋಗ ಮಾಡಿಕೊಂಡಿದ್ದಾರೆ...
Team Udayavani, Apr 5, 2023, 7:19 PM IST
ಭಿಲ್ವಾರ: ರಾಜಸ್ಥಾನದಲ್ಲಿ ದೈಹಿಕ ವಿಕಲಚೇತನ ಸ್ಟೇಷನರಿ ಅಂಗಡಿ ಮಾಲಕರೊಬ್ಬರು ತಾವು ಮಾಡದ 12.23 ಕೋಟಿ ರೂಪಾಯಿ ವಹಿವಾಟಿಗೆ ಆದಾಯ ತೆರಿಗೆ ಇಲಾಖೆಯಿಂದ ಶೋಕಾಸ್ ನೋಟಿಸ್ ಸ್ವೀಕರಿಸಿರುವುದಾಗಿ ಬುಧವಾರ ಹೇಳಿದ್ದಾರೆ.
ಸಂಜಯ್ ಕಾಲೋನಿಯ ನಿವಾಸಿ ಕಿಶನ್ಗೋಪಾಲ್ ಚಪರ್ವಾಲ್ ಅವರು ಸುಭಾಷ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಯಾರೋ ತಮ್ಮ ಹಣಕಾಸಿನ ಡೇಟಾವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಚಾಪರ್ವಾಲ್ ಅವರು ಸ್ಟೇಷನರಿ ಅಂಗಡಿಯನ್ನು ನಡೆಸುತ್ತಿದ್ದು, ಸಮಯವಿದ್ದಾಗ ಮದುವೆ, ಸಮಾರಂಭಗಳಲ್ಲಿ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಾರೆ ಎಂದು ಹೇಳಿಕೊಂಡಿದ್ದಾರೆ.
ಮಾರ್ಚ್ 28 ರಂದು ಅಂಚೆ ಮೂಲಕ ಬಂದಿರುವ ನೋಟಿಸ್ ತನ್ನನ್ನು ಮತ್ತು ಕುಟುಂಬವನ್ನು ಆಘಾತಗೊಳಿಸಿದೆ ಎಂದು ಚಾಪರ್ವಾಲ್ ಹೇಳಿದ್ದು, ಚಾರ್ಟರ್ಡ್ ಅಕೌಂಟೆಂಟ್ ಅನ್ನು ಸಂಪರ್ಕಿಸಿದಾಗ, ಮುಂಬೈ ಮತ್ತು ಸೂರತ್ನಲ್ಲಿ ಎರಡು ಡೈಮಂಡ್ ಶೆಲ್ ಕಂಪನಿಗಳಿಗೆ ಹಲವಾರು ಕೋಟಿಗಳಷ್ಟು ನಕಲಿ ವಹಿವಾಟು ನಡೆಸಲು ತಮ್ಮ ಪ್ಯಾನ್ ಅನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
”ಸಾಲ ಪಡೆದು ಅಂಗಡಿ ಇಟ್ಟಿದ್ದೇನೆ. ಕಂತುಗಳನ್ನು ಪಾವತಿಸಲು ನನಗೆ ಸಾಧ್ಯವಾಗುತ್ತಿಲ್ಲ. ನಾನು ತಿಂಗಳಿಗೆ 8,000 ರಿಂದ 10,000 ರೂ. ಈ ಬೋಗಸ್ ಕಂಪನಿಗಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಕೆಲ ವಂಚಕರು ನನಗೆ ಮೋಸ ಮಾಡಿದ್ದಾರೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
12.23 ಕೋಟಿ ವ್ಯವಹಾರಕ್ಕೆ ಸಂಬಂಧಿಸಿದ ವಿವರಗಳನ್ನು ಸಲ್ಲಿಸಲು ಐಟಿ ಇಲಾಖೆ ನನಗೆ ನೋಟಿಸ್ ಕಳುಹಿಸಿದೆ. ಈ ವಿಚಾರದಲ್ಲಿ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.