ಷರತ್ತುಗಳನ್ನು ಮುಂದಿಟ್ಟುಕೊಂಡು ಬಿಜೆಪಿಗೆ ಬೆಂಬಲ ಘೋಷಿಸಿದ ಸುಮಲತಾ

ಅಭಿಷೇಕ್ ಗೆ ಎರಡು ಪಕ್ಷಗಳಿಂದ ಮಂಡ್ಯ, ಮದ್ದೂರಿನಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದರು...

Team Udayavani, Mar 10, 2023, 6:19 PM IST

1-ddsadasd

ಮಂಡ್ಯ: ಕೊನೆಗೂ ಸಂಸದೆ ಸುಮಲತಾ ಅಂಬರೀಷ್ ತನ್ನ ರಾಜಕೀಯ ನಿರ್ಧಾರ ಪ್ರಕಟಿಸಿದ್ದು, ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಶುಕ್ರವಾರ ಘೋಷಣೆ ಮಾಡಿದ್ದಾರೆ.

ಮಂಡ್ಯದ ಚಾಮುಂಡೇಶ್ವರಿ ನಗರದ ನಿವಾಸದ ಬಳಿ ನಡೆದ ಸುದ್ದಿಗೋಷ್ಠಿಯಲ್ಲಿ ಎಲ್ಲ ರೀತಿಯಿಂದಲೂ ಯೋಚನೆ ಮಾಡಿ, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳ ಸಲಹೆ, ಸೂಚನೆ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದು, ಇನ್ನು ಮುಂದೆ ನನ್ನ ಸಂಪೂರ್ಣ ಬೆಂಬಲ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಲಿದ್ದೇನೆ ಎಂದು ಪ್ರಕಟಿಸಿದ್ದಾರೆ.

ಪಕ್ಷ ಸೇರ್ಪಡೆ ಇಲ್ಲ
ಪಕ್ಷೇತರವಾಗಿ ಸ್ಪರ್ಧೆ ಮಾಡಿ ಆಯ್ಕೆಯಾದುದರಿಂದ ಗೆದ್ದ 6 ತಿಂಗಳಲ್ಲಿಯೇ ಪಕ್ಷ ಸೇರ್ಪಡೆಯಾಗಲು ಅವಕಾಶವಿದೆ. ಆದರೆ ಈಗಾಗಲೇ ನಾಲ್ಕು ವರ್ಷಗಳಾಗಿರುವುದರಿಂದ ತಾಂತ್ರಿಕ ಕಾರಣಗಳಿರುವುದರಿಂದ ಪಕ್ಷ ಸೇರ್ಪಡೆಯಾಗಲು ಸಾಧ್ಯವಿಲ್ಲ. ಪಕ್ಷ ಸೇರ್ಪಡೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಅಭಿವೃದ್ಧಿಗಾಗಿ ನಿರ್ಧಾರ
ಜಿಲ್ಲೆಯ ಅಭಿವೃದ್ಧಿಗಾಗಿ ಕೆಲವು ಷರತ್ತುಗಳನ್ನು ಮುಂದಿಟ್ಟುಕೊಂಡು ಬಿಜೆಪಿಗೆ ಬೆಂಬಲ ಘೋಷಿಸಿದ್ದೇನೆ. ನನ್ನ ವೈಯಕ್ತಿಕವಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ. ನನಗೆ ನನ್ನ ಭವಿಷ್ಯ ಮುಖ್ಯವಲ್ಲ. ಇದುವರೆಗೂ ನಾನು ತಂದಿರುವ ಯೋಜನೆಗಳಿಗೆ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರಗಳು ನನಗೆ ಸಹಕಾರ ನೀಡಿದ್ದಾರೆ. ಇಡೀ ದೇಶ ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳಲು ಪ್ರಧಾನಿ ನರೇಂದ್ರಮೋದಿ ಅವರು ಕಾರಣರಾಗಿದ್ದಾರೆ. ಅಂಥವರ ನಾಯಕತ್ವ ನನಗೆ ಅಗತ್ಯವಿದೆ. ಅಲ್ಲದೆ, ಇದುವರೆಗೂ ನನ್ನದು ಒಂಟಿ ಧ್ವನಿಯಾಗಿತ್ತು. ಜೆಡಿಎಸ್ ನಾಯಕರು ಒಂದು ಹೆಣ್ಣು ಎನ್ನದೆ ಹೀನಾಯವಾಗಿ ಮಾತನಾಡಿದರು. ಆಗ ನನ್ನ ಪರ ಮಾತನಾಡಲು ಯಾರೂ ಇರಲಿಲ್ಲ. ಈ ಎಲ್ಲ ಕಾರಣಗಳಿಂದ ಬಿಜೆಪಿ ಬೆಂಬಲಿಸಲು ನಿರ್ಧರಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಅಭಿಷೇಕ್ ರಾಜಕಾರಣಕ್ಕೆ ಬರುವುದಿಲ್ಲ
ನಾನು ಯಾವುದೇ ಕಾರಣಕ್ಕೂ ಕುಟುಂಬ ರಾಜಕಾರಣ ಮಾಡಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ನನ್ನ ಮಗ ಅಭಿಷೇಕ್ ರಾಜಕಾರಣಕ್ಕೆ ಬರಲ್ಲ. ಅವನಿಗೆ ಎರಡು ಪಕ್ಷಗಳಿಂದ ಮಂಡ್ಯ ಅಥವಾ ಮದ್ದೂರಿನಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದರು. ಆಗಲೂ ಸಹ ಅಭಿಷೇಕ್ ಬೇಡ ಎಂದಿದ್ದನು. ಆದ್ದರಿಂದ ಆತ ರಾಜಕಾರಣಕ್ಕೆ ಬರುವುದಿಲ್ಲ. ಈ ವರ್ಷ ಮದುವೆಯಾಗಲಿದ್ದು, ಸಿನಿಮಾಗಳನ್ನು ಮಾಡಲಿದ್ದಾನೆ ಎಂದು ಹೇಳಿದರು.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.