![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 8, 2022, 11:04 AM IST
ಹೊಸದಿಲ್ಲಿ: ಆಸ್ಟ್ರೇಲಿಯಾದ ಕ್ರಿಕೆಟಿಗ ದಿವಂಗತ ಶೇನ್ ವಾರ್ನ್ ಬಗ್ಗೆ ಸಮಯೋಚಿತವಲ್ಲದ ಹೇಳಿಕೆ ನೀಡಿದುದ್ದಕ್ಕಾಗಿ ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಗವಾಸ್ಕರ್ ವಿಷಾದ ವ್ಯಕ್ತ ಪಡಿಸಿದ್ದಾರೆ.
ಶೇನ್ ವಾರ್ನ್ ಅವರು ತಮ್ಮ ಬೌಲಿಂಗ್ ನಲ್ಲಿ ಮ್ಯಾಜಿಕ್ ಎಸೆತಗಳನ್ನು ಪ್ರದರ್ಶಿಸಿದರು ಮತ್ತು ಕಷ್ಟಕರವಾದ ಕರಕುಶಲತೆಯನ್ನು ಕರಗತ ಮಾಡಿಕೊಂಡಿದ್ದರು, ಅವರನ್ನು ನಾನು ಸಾರ್ವಕಾಲಿಕ ಶ್ರೇಷ್ಠ ಸ್ಪಿನ್ನರ್ ಅನ್ನುವುದಿಲ್ಲ ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದರು.
ಇಂಡಿಯಾ ಟುಡೇ ಗೆ ನೀಡಿದ ಸಂದರ್ಶನದಲ್ಲಿ , ಆಸ್ಟ್ರೇಲಿಯನ್ ದಂತಕಥೆ ಎಂದು ಪರಿಗಣಿಸಲ್ಪಟ್ಟ ದಿವಂಗತ ಶೇನ್ ವಾರ್ನ್ ವೃತ್ತಿಜೀವನದಲ್ಲಿ ಭಾರತದ ಎದುರು ಅವರ ಪ್ರದರ್ಶನವು ಸಾಧಾರಣ, ಸಾಮಾನ್ಯ ವಾಗಿತ್ತು ಎಂಬ ಕಾರಣಕ್ಕೆ ಸಾರ್ವಕಾಲಿಕ ಶ್ರೇಷ್ಠ ಸ್ಪಿನ್ನರ್ ಆಗಿರಲಿಲ್ಲ ಎಂದಿದ್ದರು.
ಅವರು ಈ ಅಭಿಪ್ರಾಯ ಹೊರ ಹಾಕಿದ್ದು, ಮುತ್ತಯ್ಯ ಮುರಳೀಧರನ್ ಅವರು ಗ್ರೇಟ್ ಅನ್ನಬಹುದು, ವಾರ್ನ್ ಗಿಂತ ಉತ್ತಮ ನಿರ್ವಹಣೆ ಅವರು ತೋರಿದ್ದರು ಎಂದು ಹೇಳಿದ್ದರು.
ಅವರು ಮಾಡಿದ ಹೋಲಿಕೆಗಳಿಗೆ ಇದು ಸರಿಯಾದ ಸಮಯವಲ್ಲ ಎಂದು ಹೇಳಿ, ಆ ಪ್ರಶ್ನೆಯನ್ನು ಕೇಳಬಾರದಿತ್ತು ಮತ್ತು ಯಾವುದೇ ಹೋಲಿಕೆ ಅಥವಾ ಮೌಲ್ಯಮಾಪನಕ್ಕೆ ಇದು ಸರಿಯಾದ ಸಮಯವಲ್ಲವಾದ್ದರಿಂದ ನಾನು ಉತ್ತರಿಸಬಾರದು” ಎಂದು ಗವಾಸ್ಕರ್ ತಮ್ಮ ಹೇಳಿಕೆಯ ಟೀಕೆಗೆ ಪ್ರತಿಕ್ರಿಯೆಯಾಗಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ವಾರ್ನ್ ಅವರು ಕ್ರಿಕೆಟ್ ಅಲಂಕರಿಸಿದ ಶ್ರೇಷ್ಠ ಆಟಗಾರರಲ್ಲಿ ಒಬ್ಬರು. ರಾಡ್ನಿ ಮಾರ್ಷ್ ಕೂಡ ಅತ್ಯುತ್ತಮ ವಿಕೆಟ್ ಕೀಪರ್ ಗಳಲ್ಲಿ ಒಬ್ಬರಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ತಿಳಿಸಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.