ಕುಡಿಯುವ ನೀರಿನ ಪೂರೈಕೆಗೆ ಇರಲಿ ಪ್ರಥಮ ಆದ್ಯತೆ


Team Udayavani, May 1, 2023, 5:55 AM IST

TAP WITH WATER

ಬೇಸಗೆ ಋತುವಿನಲ್ಲಿ ಸುರಿಯುವ ಪೂರ್ವ ಮುಂಗಾರು ಮಳೆ ಪ್ರಸಕ್ತ ವರ್ಷ ರಾಜ್ಯದಲ್ಲಿ ತೀರಾ ಅಲ್ಪ ಪ್ರಮಾಣದಲ್ಲಾಗಿದ್ದು ಜಲಾಶಯಗಳಲ್ಲಿನ ನೀರಿನ ಸಂಗ್ರಹ ತೀವ್ರ ಕುಸಿತ ಕಂಡಿದೆ. ರಾಜ್ಯದ ಹಲವೆಡೆ ನೀರಿನ ಅಭಾವ ತೀವ್ರಗೊಂಡಿದ್ದು ಕುಡಿ ಯುವ ನೀರಿಗಾಗಿ ಜನರು ಅಲೆದಾಟ ನಡೆಸಬೇಕಾದ ಪರಿಸ್ಥಿತಿ ಬಂದೊದಗಿದೆ. ಇದೇ ವೇಳೆ ಬೇಸಗೆ ಮಳೆಯನ್ನು ಆಧರಿಸಿ ನಡೆಸಲಾಗುವ ಕೃಷಿ ಚಟುವಟಿಕೆಗಳು ಇನ್ನೂ ಚುರುಕು ಪಡೆದಿಲ್ಲವಾಗಿದ್ದು ಮುಂದಿನ ದಿನಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಬೇಸಗೆ ಮಳೆ ಸುರಿಯದೇ ಹೋದಲ್ಲಿ ರೈತರು ಸಂಕಷ್ಟದಲ್ಲಿ ಸಿಲುಕಲಿದ್ದಾರೆ. ಅಷ್ಟು ಮಾತ್ರವಲ್ಲದೆ ಮುಂದಿನ ಮುಂಗಾರು ಅವಧಿಯ ಕೃಷಿ ಚಟುವಟಿಕೆಗಳ ಮೇಲೂ ಇದು ಪ್ರತಿಕೂಲ ಪರಿಣಾಮವನ್ನುಂಟು ಮಾಡುವ ಸಾಧ್ಯತೆ ಇದೆ.

ಪ್ರತೀ ಬೇಸಗೆಯಲ್ಲಿ ಮಳೆಯಾಗುವುದು ಸಾಮಾನ್ಯ. ಸುಡುಬಿಸಿಲಿನ ಕಾರಣ ದಿಂದಾಗಿ ಮೋಡಗಳು ಕಟ್ಟಿ ಮಿಂಚು-ಗುಡುಗುಗಳ ಆರ್ಭಟದೊಂದಿಗೆ ಒಂದಿಷ್ಟು ಮಳೆ ಸುರಿಯುವುದು ವಾಡಿಕೆ. ಇದರ ಜತೆಯಲ್ಲಿ ಅರಬಿ ಮತ್ತು ಬಂಗಾಲಕೊಲ್ಲಿ ಸಮುದ್ರಗಳಲ್ಲಿ ಕಾಣಿಸಿಕೊಳ್ಳುವ ಮೇಲ್ಮೆ„ ಸುಳಿಗಾಳಿ, ವಾಯುಭಾರ ಒತ್ತಡ, ವಾಯುಭಾರ ಕುಸಿತ, ಚಂಡಮಾರುತಗಳ ಪ್ರಭಾವದಿಂದಾಗಿ ಒಂದೆರಡು ದಿನಗಳ ಕಾಲ ಮಳೆಯಾಗುತ್ತದೆ. ಈ ಮಳೆ ಬೇಸಗೆಯಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ನೀರಿನ ಕೊರತೆಯನ್ನು ನೀಗಿಸುವುದರ ಜತೆಯಲ್ಲಿ ಬತ್ತಿ ಹೋಗಿರುವ ನೀರಿನ ಮೂಲಗಳಾದ ಕೊಳ, ಕೆರೆ, ತೊರೆ, ಹೊಳೆ, ನದಿಗಳಲ್ಲಿ ಒಂದಿಷ್ಟು ನೀರು ಹರಿದು ಹೋಗುವಂತೆ ಮಾಡಿ ಇವುಗಳಿಗೆ ಮರುಜೀವ ತುಂಬುತ್ತದೆ. ಇದರಿಂದ ಸಹಜ ವಾಗಿಯೇ ಅಣೆಕಟ್ಟುಗಳು ಮತ್ತು ಜಲಾಶಯಗಳಲ್ಲಿ ನೀರು ತುಂಬಿ ನೀರಿನ ಸಮಸ್ಯೆ ಯನ್ನು ತಾತ್ಕಾಲಿಕವಾಗಿ ಶಮನ ಮಾಡುತ್ತದೆ. ಆದರೆ ಈ ಬಾರಿ ಪೂರ್ವ ಮುಂಗಾರು ಮಳೆ ಸಾಕಷ್ಟು ಪ್ರಮಾಣದಲ್ಲಿ ಸುರಿದಿಲ್ಲ.

ಕಳೆದ ವರ್ಷ ಮುಂಗಾರು ಮತ್ತು ಈಶಾನ್ಯ ಮಾರುತಗಳು ನಿಗದಿತ ವೇಳೆ ಯಲ್ಲಿಯೇ ವಾಪಸಾದ ಪರಿಣಾಮ ದೇಶದಲ್ಲಿ ಮಳೆಗಾಲ ಬಲುಬೇಗ ಅಂತ್ಯ ಗೊಂಡಿತ್ತು. ಹೀಗಾಗಿ ನೀರಿನ ಮೂಲಗಳು ಮತ್ತು ಜಲಾಶಯಗಳಲ್ಲಿ ನೀರಿನ ಹರಿವು ಮತ್ತು ಸಂಗ್ರಹ ಪ್ರಮಾಣ ಸಾಧಾರಣವಾಗಿಯೇ ಇತ್ತು. ಇದೇ ವೇಳೆ ಈ ವರ್ಷ ಚಳಿಗಾಲ ಅಂತ್ಯಗೊಳ್ಳುತ್ತಿದ್ದಂತೆಯೇ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದರಿಂದಾಗಿ ನೀರಿನ ಮೂಲಗಳೆಲ್ಲ ಬತ್ತಿ ಹೋಗಿ ಜಲಾಶಯಗಳು ಮತ್ತು ಅಣೆಕಟ್ಟುಗಳಲ್ಲಿನ ನೀರಿನ ಸಂಗ್ರಹ ತೀವ್ರ ಕುಸಿತ ಕಾಣುವಂತಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಪ್ರಸಕ್ತ ವರ್ಷ ದಕ್ಷಿಣ ಭಾರತದ ಜಲಾಶಯಗಳಲ್ಲಿನ ನೀರಿನ ಪ್ರಮಾಣ ಶೇ.8 ಇಳಿಕೆ ಕಂಡಿದೆ.

ಕಳೆದ ಮೂರು ದಿನಗಳಿಂದೀಚೆಗೆ ರಾಜ್ಯದೆಲ್ಲೆಡೆ ಅದರಲ್ಲೂ ಒಳನಾಡಿನಾದ್ಯಂತ ಮತ್ತು ಕರಾವಳಿಯ ಕೆಲವೆಡೆ ಮಳೆ ಸುರಿಯುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಕೊಂಚ ಕಡಿಮೆಯಾಗಿದ್ದು, ಬತ್ತಿಹೋಗಿದ್ದ ನೀರಿನ ಮೂಲಗಳಲ್ಲಿ ಹರಿವು ಕಾಣಲಾರಂಭಿಸಿದೆ. ಆದರೆ ಇನ್ನೂ ಒಂದು ತಿಂಗಳು ಬೇಸಗೆ ಋತು ಇರು ವುದರಿಂದ ಸದ್ಯ ಸುರಿದಿರುವ ಮಳೆ ಈಗ ಸೃಷ್ಟಿಯಾಗಿರುವ ನೀರಿನ ಅಭಾವವನ್ನು ಸಂಪೂರ್ಣವಾಗಿ ನೀಗಿಸದು. ಹವಾಮಾನ ಇಲಾಖೆಯ ಪ್ರಕಾರ ಸಮುದ್ರದಲ್ಲಿ ಮುಂದಿನ 10 ದಿನಗಳ ಅವಧಿಯಲ್ಲಿ ಚಂಡಮಾರುತದ ಸಾಧ್ಯತೆ ತೀರಾ ವಿರಳ ವಾಗಿರುವುದರಿಂದ ಮಳೆಯ ಕೊರತೆ ಮುಂದುವರಿಯಲಿದೆ. ಆದರೆ ಮೇ ಕೊನೆ ವಾರದಲ್ಲಿ ಚಂಡಮಾರುತ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು ಇದು ಮುಂಗಾರು ಮಳೆಗೆ ಪೂರಕವಾಗಲಿದೆ ಎಂದು ತಿಳಿಸಿದೆ. ಒಂದು ವೇಳೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದೇ ಇದ್ದಲ್ಲಿ ಸಂಭಾವ್ಯ ಪರಿಸ್ಥಿತಿಯನ್ನು ಎದುರಿಸಲು ಸರಕಾರ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು. ಚುನಾವಣ ಭರಾಟೆಯ ನಡುವೆಯೂ ಕೃಷಿ, ನೀರಾವರಿ ಇಲಾಖೆ ಹಾಗೂ ಸ್ಥಳೀಯಾಡಳಿತಗ ಳು ಜನರಿಗೆ ವ್ಯವಸ್ಥಿತವಾಗಿ ಕುಡಿಯುವ ನೀರು ಪೂರೈಸಲು ಆದ್ಯತೆಯ ಮೇಲೆ ಕ್ರಮ ಕೈಗೊಳ್ಳಬೇಕು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.