![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 4, 2021, 12:00 AM IST
ಸುರತ್ಕಲ್ : ಟೋಲ್ ಸಿಬ್ಬಂದಿಯೊರ್ವ ಕಾರು ಚಾಲಕನಲ್ಲಿ ಟೋಲ್ ಕೇಳಿದ್ದಕ್ಕೆ ಕಾರಿನಲ್ಲಿದ್ದ ಏಳು ಎಂಟು ಮಂದಿ ಟೋಲ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ಸುರತ್ಕಲ್ ನ ಟೋಲ್ ಗೇಟ್ ನಲ್ಲಿ ರವಿವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಟೋಲ್ ಸಿಬ್ಬಂದಿಯ ಕೈ ಮೂಳೆ ಮುರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ರವಿವಾರ ರಾತ್ರಿ ಟೋಲ್ ಗೇಟ್ ಗೆ ಬಿಳಿ ಬಣ್ಣದ ಕೆ.ಎ.47 ರಿಜಿಸ್ಟ್ರೇಷನ್ ನಂಬರಿನ ಸ್ವಿಫ್ಟ್ ಕಾರು ಬಂದಿದ್ದು ಈ ವೇಳೆ ಸಿಬ್ಬಂದಿ ಕಾರಿನ ಚಾಲಕನಲ್ಲಿ ಟೋಲ್ ಕೇಳಿದ್ದಾನೆ, ಅಷ್ಟಕ್ಕೆ ಸಿಟ್ಟಾದ ಕಾರಿನಲ್ಲಿದ್ದ ಸುಮಾರು 7-8 ಮಂದಿ ಕಾರಿನಿಂದ ಇಳಿದು ಟೋಲ್ ಸಿಬ್ಬಂದಿಯ ಜೊತೆ ಜಗಳವಾಡಿದ್ದಾರೆ ಅಲ್ಲದೆ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ, ಅಷ್ಟೇ ಅಲ್ಲದೆ ಟೋಲ್ ಕೇಂದ್ರದ ಒಳಗೆ ನುಗ್ಗಿ ದಾಂದಲೆ ನಡೆಸಿದ್ದಾರೆ.
ಅಷ್ಟೋತ್ತಿಗಾಗಲೇ ಟೋಲ್ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸುವ ಮೊದಲೇ ಹಲ್ಲೆ ನಡೆಸಿದ ಕಿಡಿಗೇಡಿಗಳು ಸ್ಥಳದಿಂದ ಕಾರು ಸಮೇತ ಪರಾರಿಯಾಗಿದ್ದಾರೆ. ಸದ್ಯ ಟೋಲ್ ಗೇಟ್ ನಲ್ಲಿ ಅಳವಡಿಸಿದ ಸಿಸಿ ಕ್ಯಾಮರಾದಲ್ಲಿ ಹಲ್ಲೆ ನಡೆಸಿದ ದೃಶ್ಯ ಸೆರೆಯಾಗಿದ್ದು ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.