![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 7, 2022, 4:33 PM IST
ದುಬೈ: ಪಾಕಿಸ್ತಾನದ ವಿಕೆಟ್ಕೀಪರ್-ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಬುಧವಾರ (ಸೆ 7) ವಾರದ ನವೀಕರಣದ ನಂತರ ಐಸಿಸಿ ಪುರುಷರ ಟಿ 20 ಆಟಗಾರರ ಶ್ರೇಯಾಂಕದಲ್ಲಿ ಬ್ಯಾಟ್ಸ್ ಮ್ಯಾನ್ ಗಳ ಪೈಕಿ ತಮ್ಮ ಆರಂಭಿಕ ಪಾಲುದಾರ ಮತ್ತು ನಾಯಕ ಬಾಬರ್ ಅಜಮ್ ಅವರನ್ನು ಹಿಂದಿಕ್ಕಿದ್ದಾರೆ.
ದುಬೈನಲ್ಲಿ ನಡೆದ ಸೂಪರ್ ಫೋರ್ ಪಂದ್ಯದಲ್ಲಿ ಭಾರತದ ವಿರುದ್ಧ 51 ಎಸೆತಗಳಲ್ಲಿ 71 ರನ್, ಗ್ರೂಪ್ ಎ ಪಂದ್ಯದಲ್ಲಿ 57 ಎಸೆತಗಳಲ್ಲಿ 78 ರನ್ ಗಳಿಸಿದ ರಿಜ್ವಾನ್ ಪ್ಲೇಯರ್ ಆಫ್ ದಿ ಮ್ಯಾಚ್ ಆಗುವ ಮೂಲಕ ಮೊದಲ ಬಾರಿಗೆ ಉನ್ನತ ಸ್ಥಾನವನ್ನು ಪಡೆದುಕೊಂಡರು.
ಒಟ್ಟು 1,155 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದ ಬಾಬರ್ ಮತ್ತು 313 ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದ ಮಿಸ್ಬಾ-ಉಲ್-ಹಕ್ ನಂತರ ಟಿ20 ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ನಂ.1 ಸ್ಥಾನ ಪಡೆದ ಪಾಕಿಸ್ತಾನದ ಮೂರನೇ ಬ್ಯಾಟ್ಸ್ ಮ್ಯಾನ್ ರಿಜ್ವಾನ್ ಅವರಾಗಿದ್ದಾರೆ.
ಏಷ್ಯಾಕಪ್ನಲ್ಲಿ ಕೆಲವು ಉತ್ತಮ ಪ್ರದರ್ಶನಗಳ ನಂತರ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನದ ಆಟಗಾರರು ಉತ್ತಮ ಪ್ರಗತಿ ಸಾಧಿಸಿದ್ದು, ಭಾರತದ ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನಕ್ಕೆ ಇಳಿದಿದ್ದಾರೆ.
ಬಾಬರ್ ಅಜಮ್ (ಪಾಕಿಸ್ತಾನ) – 794 ಪಾಯಿಂಟ್ಸ್ ಗಳೊಂದಿಗೆ 2 ನೇ ಸ್ಥಾನ, ದಕ್ಷಿಣ ಆಫ್ರಿಕಾದ ಐಡೆನ್ ಮಾರ್ಕ್ರಾಮ್ 792 ಪಾಯಿಂಟ್ಸ್ ಗಳೊಂದಿಗೆ 3 ನೇ ಸ್ಥಾನ, 775 ಪಾಯಿಂಟ್ಸ್ ಗಳೊಂದಿಗೆ ಸೂರ್ಯಕುಮಾರ್ ಯಾದವ್ 4 ನೇ ಸ್ಥಾನ, 731 ಪಾಯಿಂಟ್ಸ್ ಗಳೊಂದಿಗೆ ಇಂಗ್ಲೆಂಡ್ ನ ಡೇವಿಡ್ ಮಲಾನ್ 5ನೇ ಸ್ಥಾನದಲ್ಲಿದ್ದಾರೆ.
ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಮ್ಮ ಸೂಪರ್ ಫೋರ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 72 ರನ್ ಗಳಿಸಿ ನಾಲ್ಕು ಸ್ಥಾನಗಳ ಮುಂದೆ ಬಂದು 13 ನೇ ಸ್ಥಾನಕ್ಕೆ ತಲುಪಿದ್ದಾರೆ ಮಾಜಿ ನಾಯಕ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧ 60 ರನ್ ಗಳಿಸಿ ನಾಲ್ಕು ಸ್ಥಾನಗಳನ್ನು ಗಳಿಸಿ ಪಟ್ಟಿಯಲ್ಲಿ 29 ನೇ ಸ್ಥಾನದಲ್ಲಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.