![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 1, 2020, 9:38 AM IST
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು, ಇದೀಗ ಮುಂಬೈ ಪೊಲೀಸರು ಅಚ್ಚರಿಯ ಮಾಹಿತಿಯನ್ನು ಹೊರಹಾಕಿದ್ದಾರೆ. ಸುಶಾಂತ್ ಸಿಂಗ್ ಲೋನಾವಾಲಾದಲ್ಲಿ ಬಾಡಿಗೆಗೆ ಫಾರ್ಮ್ ಹೌಸ್ ಪಡೆದಿದ್ದು, ಅದಕ್ಕಾಗಿ ಅವರು ಪ್ರತಿ ತಿಂಗಳು ಐದು ಲಕ್ಷ ರೂಪಾಯಿ ಖರ್ಚು ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ತಂದೆ ಕೆಕೆ ಸಿಂಗ್ ಮುಂಬೈ ಪೊಲೀಸರಿಗೆ ಎರಡು ಪುಟಗಳ ಹೇಳಿಕೆಯನ್ನು ನೀಡಿದ್ದಾರೆ. ಆದರೆ ರಿಯಾ ಚಕ್ರವರ್ತಿ ಬಗ್ಗೆ ಯಾವುದೇ ಆರೋಪ ಹೊರಿಸಿಲ್ಲ. ಮುಂಬೈ ಪೊಲೀಸರಿಗೆ ಸುಶಾಂತ್ ಸಿಂಗ್ ತಂದೆ ಯಾವುದೇ ರೀತಿಯ ಹೊಸ ಮಾಹಿತಿಯನ್ನು ನೀಡಿಲ್ಲ ಎಂದು ಮಾಧ್ಯಮವೊಂದರ ವರದಿ ತಿಳಿಸಿದೆ.
ಇದನ್ನೂ ಓದಿ: ಸುಶಾಂತ್ ಸಿಂಗ್ ಖಾತೆಯಿಂದ 15 ಕೋಟಿ ವರ್ಗಾವಣೆ: ಗೆಳತಿ ರಿಯಾ ಬಂಧನ ಸಾಧ್ಯತೆ?
ಮುಂಬೈ ಪೊಲೀಸರು ಸುಶಾಂತ್ ಸಿಂಗ್ ಸಹೋದರಿ ಮೀತು ಸಿಂಗ್ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಮೂರು ಬಾರಿ ಪ್ರಯತ್ನಿಸಿದ್ದರು. ಆದರೆ ಆಕೆ ಏನಾದರು ಕಾರಣ ನೀಡಿ ಹೇಳಿಕೆ ನೀಡುವುದರಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ವರದಿ ವಿವರಿಸಿದೆ.
ಸುಶಾಂತ್ ಸಿಂಗ್ ತಿಂಗಳಿಗೆ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡುತ್ತಿದ್ದರು ಎಂದು ಮೂಲಗಳು ಹೇಳಿವೆ. ಈ ನಿಟ್ಟಿನಲ್ಲಿ ಈವರೆಗೆ ನಡೆದ ತನಿಖೆ ಕುರಿತು ದಾಖಲೆಯನ್ನು ಕಲೆ ಹಾಕುವ ಬಗ್ಗೆ ಮುಂಬೈ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ದಾಖಲಿಸಿದ ಸುಶಾಂತ್ ಸಿಂಗ್ ತಂದೆ
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಗೆಳತಿ ರಿಯಾ ಚಕ್ರವರ್ತಿ ಕೈವಾಡ ಇದೆ ಎಂಬ ಆರೋಪವನ್ನು ರಿಯಾ ತಳ್ಳಿಹಾಕಿದ್ದು, ನನಗೆ ದೇವರು ಮತ್ತು ನ್ಯಾಯದ ಮೇಲೆ ನಂಬಿಕೆ ಇದೆ. ಇದರಿಂದ ನನಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇದೆ ಎಂದು ತಿಳಿಸಿದ್ದಾರೆ. ವಿದ್ಯುನ್ಮಾನ ಮಾಧ್ಯಮಗಳು ತುಂಬಾ ಭಯಾನಕವಾಗಿ ವರದಿ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.
ಸುಶಾಂತ್ ಸಿಂಗ್ ನಾಟಕೀಯ ತಿರುವು ಪಡೆದುಕೊಂಡಿತ್ತು. ಸುಶಾಂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಕೆಕೆ ಸಿಂಗ್ ಕಳೆದ ವಾರ ರಿಯಾ ಚಕ್ರವರ್ತಿ ಸೇರಿದಂತೆ ಆರು ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು.
ಇದನ್ನೂ ಓದಿ: ಸುಶಾಂತ್ ಮಾಜಿ ಗೆಳತಿ ರಿಯಾ ವಿರುದ್ಧ ನೀರಜ್ ಕುಮಾರ್ ಆಕ್ರೋಶ
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.