![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Nov 14, 2021, 9:48 PM IST
ಚಾಮರಾಜನಗರ : ತಮಿಳುನಾಡಿನ ದಿಂಬಂ, ಸತ್ಯಮಂಗಲ, ರಾಜ್ಯದ ಬಿಆರ್ ಟಿ ಅರಣ್ಯ ಪ್ರದೇಶದಲ್ಲಿ ಸತತ ಮಳೆ ಬೀಳುತ್ತಿರುವ ಕಾರಣ, ತಾಲೂಕಿನ ಸುವರ್ಣಾವತಿ ಜಲಾಶಯ ಭರ್ತಿಯಾಗಿದ್ದು, 600 ಕ್ಯುಸೆಕ್ ನೀರನ್ನು ನದಿ ಹಾಗೂ ನಾಲೆಗೆ ಬಿಡಲಾಗುತ್ತಿದೆ.
ಸುವರ್ಣಾವತಿ ಜಲಾಶಯ ಭರ್ತಿಯಾಗಲು ಕೇವಲ 5 ಇಂಚು ಬಾಕಿಯಿದ್ದ ಕಾರಣ, ಭಾನುವಾರ ಬೆಳಗಿನ ಜಾವ ನೀರು ಹೊರ ಬಿಡಲಾಯಿತು. ಮೂರು ಕ್ರೆಸ್ಟ್ ಗೇಟ್ ಗಳ ಪೈಕಿ 2 ಕ್ರೆಸ್ಟ್ ಗೇಟ್ಗಳ ಮೂಲಕ 450 ಕ್ಯುಸೆಕ್ ನೀರನ್ನು ನದಿಗೆ, 150 ಕ್ಯುಸೆಕ್ ನೀರನ್ನು ನಾಲೆಗೆ ಬಿಡಲಾಗಿದೆ. ನಾಲೆಗೆ ಬಿಡಲಾಗಿರುವ ನೀರು ಸುವರ್ಣಾವತಿ ವ್ಯಾಪ್ತಿಗೊಳಪಟ್ಟ 13 ಕೆರೆಗಳಿಗೆ ಹರಿಯುತ್ತಿದೆ.
ಸುವರ್ಣಾವತಿ ಜಲಾಶಯದ ಗರಿಷ್ಠ ಮಟ್ಟ 2,455 ಅಡಿಯಿದ್ದು, ಶನಿವಾರ ರಾತ್ರಿ 2,454.5 ಅಡಿಗೆ ತಲುಪಿದ ಕಾರಣ ಭಾನುವಾರ ಬೆಳಗಿನ ಜಾವ ಗೇಟ್ ತೆರೆದು ನೀರು ಹರಿಸಲಾಯಿತು. ತಮಿಳುನಾಡಿನ ದಿಂಬಂ, ಬೇಡಗುಳಿ ಸೇರಿದಂತೆ ಬಿಆರ್ಟಿ ಅರಣ್ಯ ಪ್ರದೇಶದಲ್ಲಿ ಉತ್ತಮ ಮಳೆಯಾದರೆ ಈ ಜಲಾಶಯಕ್ಕೆ ನೀರು ಹರಿದು ಬರುತ್ತದೆ. ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚ್ಚಾಯಿತು.
ನೆರೆಯ ತಮಿಳುನಾಡು, ಬಿ ಆರ್ ಟಿ ಅರಣ್ಯ ಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ ಮಳೆಯಾಗುತ್ತಿರುವುದರಿಂದ ತಾಲ್ಲೂಕಿನ ಸುವರ್ಣಾವತಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ನದಿ ಹಾಗೂ ನಾಲೆಗೆ ಸುವರ್ಣಾವತಿಯಿಂದ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ಭಾನುವಾರ ನೂರಾರು ಮಂದಿ ಸ್ಥಳಕ್ಕೆ ಭೇಟಿ ನೀಡಿ, ಆ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಂಡರು. ಸುಮಾರು 6 ವರ್ಷಗಳ ಬಳಿಕ ಜಲಾಶಯ ಭರ್ತಿಯಾಗಿದೆ.
ಸುವರ್ಣಾವತಿ ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯ1.26 ಟಿಎಂಸಿ ಇದ್ದು, ಭಾನುವಾರ 1.2 ಟಿಎಂಸಿ ನೀರಿತ್ತು.
ಇದನ್ನೂ ಓದಿ : ನೇಪಾಳದಲ್ಲಿ ಸರೋವರಕ್ಕೆ ಬಿದ್ದ ಕಾರು : ಒಂದೇ ಕುಟುಂಬದ ನಾಲ್ವರು ಭಾರತೀಯರು ಸಾವು
ಚಿಕ್ಕಹೊಳೆ ಭರ್ತಿಗೆ 5 ಅಡಿ ಬಾಕಿ :
ಸುವರ್ಣಾವತಿ ಜಲಾಶಯದಿಂದ ಸುಮಾರು 2 ಕಿ.ಮೀ. ದೂರದಲ್ಲಿರುವ ಚಿಕ್ಕಹೊಳೆಯ ಗರಿಷ್ಠ ಮಟ್ಟ 2,474 ಅಡಿ. ಈಗ 2,469 ಅಡಿಗಳಷ್ಟು ನೀರು ತುಂಬಿದೆ. ಇನ್ನೂ 5 ಅಡಿ ನೀರು ಹರಿದು ಬಂದರೆ ಚಿಕ್ಕಹೊಳೆ ಜಲಾಶಯವೂ ತುಂಬುತ್ತದೆ. ತಮಿಳುನಾಡಿನ ತಲಮಲೈ, ತಾಳವಾಡಿ, ಕೊಂಗಳ್ಳಿ ಬೆಟ್ಟ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳು ಈ ಜಲಾಶಯದ ಜಲಾನಯನ ಪ್ರದೇಶಗಳಾಗಿವೆ. ಈ ಭಾಗದಲ್ಲಿ ಮಳೆಯಾಗುತ್ತಿರುವ ಕಾರಣ ಚಿಕ್ಕಹೊಳೆಗೆ ನೀರು ಹರಿದುಬರುತ್ತಿದೆ. ಭಾನುವಾರ 100 ಕ್ಯುಸೆಕ್ ಒಳ ಹರಿವು ಇತ್ತು. ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳನ್ನು ಅವಳಿ ಜಲಾಶಯಗಳು ಎಂದೇ ಕರೆಯಲಾಗುತ್ತದೆ.
ಚಿಕ್ಕಹೊಳೆ ಜಲಾಶಯದ ಗರಿಷ್ಠ ಸಾಮರ್ಥ್ಯ 0.37 ಟಿಎಂಸಿ (372 ದಶಲಕ್ಷ ಘನ ಅಡಿ) ಇದ್ದು, ಭಾನುವಾರ 0.29 ಟಿಎಂಸಿ ಇತ್ತು .
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.