ಎಚ್ಚರಿಕೆ…ದೇಶ ಬಿಟ್ಟು ತೆರಳಬೇಡಿ: ತಾಲಿಬಾನ್ ಬೆದರಿಕೆಗೆ ಅಫ್ಘಾನ್ ನಾಗರಿಕರು ಕಂಗಾಲು

ವೈದ್ಯರು, ತಂತ್ರಜ್ಞರು ದೇಶದಲ್ಲಿಯೇ ಇದ್ದು ತಮ್ಮ ಕೆಲಸವನ್ನು ಮುಂದುವರಿಸಬೇಕು ಎಂದು ತಾಲಿಬಾನ್ ಕಟ್ಟಪ್ಪಣೆ ಹೊರಡಿಸಿದೆ.

Team Udayavani, Aug 25, 2021, 10:11 AM IST

ಎಚ್ಚರಿಕೆ…ದೇಶ ಬಿಟ್ಟು ತೆರಳಬೇಡಿ: ತಾಲಿಬಾನ್ ಬೆದರಿಕೆಗೆ ಅಫ್ಘಾನ್ ನಾಗರಿಕರು ಕಂಗಾಲು

ಕಾಬೂಲ್: ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದ ಬಳಿಕ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಇದೀಗ ಅಫ್ಘಾನಿಸ್ತಾನದ ನಾಗರಿಕರು ದೇಶ ಬಿಟ್ಟು ತೆರಳದಂತೆ ಕಟ್ಟಪ್ಪಣೆ ಹೊರಡಿಸಿದೆ. ಆ ನಿಟ್ಟಿನಲ್ಲಿ ಕಾಬೂಲ್ ವಿಮಾನ ನಿಲ್ದಾಣಕ್ಕೆ ಹೋಗದಂತೆ ತಡೆಯೊಡ್ಡುತ್ತಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ತಾಲಿಬಾನ್‌ಗೆ ಚೀನ ನೆರವು ಘೋಷಣೆ! 

ಕಾಬೂಲ್ ವಿಮಾನ ನಿಲ್ದಾಣದಿಂದ ವಿದೇಶಿ ಪ್ರಜೆಗಳು ತೆರಳಬಹುದಾಗಿದೆ ಎಂದು ತಾಲಿಬಾನ್ ಉಗ್ರ ಸಂಘಟನೆಯ ವಕ್ತಾರ ಜಬೀವುಲ್ಲಾ ಮುಜಾಹಿದ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದು, ಅಫ್ಘಾನಿಸ್ತಾನ್ ಪ್ರಜೆಗಳು ದೇಶ ಬಿಟ್ಟು ತೆರಳದಂತೆ ತಡೆಯೊಡ್ಡಲು ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಆದರೆ ವಿದೇಶಿ ಪ್ರಜೆಗಳು ಈ ರಸ್ತೆಯಲ್ಲಿ ತೆರಳಬಹುದಾಗಿದೆ ಎಂದು ತಿಳಿಸಿರುವುದಾಗಿ ಸಿಎನ್ ಎನ್ ವರದಿ ವಿವರಿಸಿದೆ.

ಅಫ್ಘಾನ್ ನಾಗರಿಕರಿಗೆ ತಾಲಿಬಾನ್ ನಿಂದ ಯಾವುದೇ ತೊಂದರೆ ಎದುರಾಗುವುದಿಲ್ಲ ಎಂದು ಭರವಸೆ ನೀಡಿರುವುದಾಗಿ ಜಬೀವುಲ್ಲಾ ತಿಳಿಸಿದ್ದು, ಯಾವುದೇ ಕಾರಣಕ್ಕೂ ವೈದ್ಯರು, ಉನ್ನತ ವ್ಯಾಸಂಗ ಮಾಡುವವರು ದೇಶ ಬಿಟ್ಟು ತೆರಳದಂತೆ ಎಚ್ಚರಿಕೆ ನೀಡಿರುವುದಾಗಿ ವರದಿ ಹೇಳಿದೆ.

ಈಗಾಗಲೇ ಅಮೆರಿಕ ಘೋಷಿಸಿರುವಂತೆ ಆಗಸ್ಟ್ 31ರೊಳಗೆ ಕಾಬೂಲ್ ವಿಮಾನ ನಿಲ್ದಾಣದಿಂದ ಜನರನ್ನು ಏರ್ ಲಿಫ್ಟ್ ಮಾಡಬೇಕು, ಅಲ್ಲದೇ ಸೇನೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು. ಅಷ್ಟೇ ಅಲ್ಲ ಅಂತಿಮ ಗಡುವನ್ನು ವಿಸ್ತರಿಸುವುದಿಲ್ಲ ಎಂದು ತಾಲಿಬಾನ್ ತಿಳಿಸಿದೆ.

ಆಗಸ್ಟ್ 31ರ ಬಳಿಕ ಜನರ ಸ್ಥಳಾಂತರಕ್ಕೆ ನಾವು ಅವಕಾಶ ನೀಡುವುದಿಲ್ಲ. ವೈದ್ಯರು, ತಂತ್ರಜ್ಞರು ದೇಶದಲ್ಲಿಯೇ ಇದ್ದು ತಮ್ಮ ಕೆಲಸವನ್ನು ಮುಂದುವರಿಸಬೇಕು ಎಂದು ತಾಲಿಬಾನ್ ಕಟ್ಟಪ್ಪಣೆ ಹೊರಡಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.