ತೆಲಂಗಾಣ ಮಾದರಿ ಮರಳು ನೀತಿ ಜಾರಿ

ಕರಾವಳಿಯ ನಾನ್‌ ಸಿಆರ್‌ಝಡ್‌ ವಲಯ ಸಹಿತ ರಾಜ್ಯಾದ್ಯಂತ ಅನ್ವಯ

Team Udayavani, May 23, 2020, 5:30 AM IST

ತೆಲಂಗಾಣ ಮಾದರಿ ಮರಳು ನೀತಿ ಜಾರಿ

ಸಾಂದರ್ಭಿಕ ಚಿತ್ರ.

ಉಡುಪಿ: ಕರಾವಳಿಯ ಮೂರು ಜಿಲ್ಲೆಗಳ ನಾನ್‌ ಸಿಆರ್‌ಝಡ್‌ ವಲಯ ಸಹಿತ ರಾಜ್ಯಾದ್ಯಂತ ತೆಲಂಗಾಣ ಮಾದರಿ ಏಕರೂಪದ ಹೊಸ ಮರಳು ನೀತಿ 2020 ಜಾರಿಗೊಳಿಸಲಾಗಿದೆ.

ಜನರಿಗೆ ಕಡಿಮೆ ದರದಲ್ಲಿ ಸುಲಭ ಮತ್ತು ಪಾರದರ್ಶಕವಾಗಿ ಮರಳು ದೊರಕುವಂತೆ ರಾಜ್ಯ ಸರಕಾರ ಈ ಹೊಸ ಮರಳು ನೀತಿ ಜಾರಿಗೊಳಿಸಿದೆ. ಇದರನ್ವಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾಂಪ್ರ ದಾಯಿಕ ಮರಳುಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ನದಿ, ಅಣೆಕಟ್ಟುಗಳ ಹಿನ್ನೀರಿನ ಪ್ರದೇಶಗಳಲ್ಲಿ ಇರುವ ಮರಳು ನಿಕ್ಷೇಪಗಳ ನಿರ್ವಹಣೆಯನ್ನು ಸರಕಾರಿ ಸ್ವಾಮ್ಯದ ಕರ್ನಾಟಕ ಸ್ಟೇಟ್‌ ಮಿನರಲ್‌ ಕಾರ್ಪೊರೇಶನ್‌ ನಡೆಸಲಿದೆ. ಬೆಳಗಾವಿ ಕಂದಾಯ ವಿಭಾಗ(ಬಳ್ಳಾರಿ ಹೊರತುಪಡಿಸಿ)ದಲ್ಲಿ ಹಟ್ಟಿ ಚಿನ್ನದ ಗಣಿ ನಿ. ಮರಳುಗಾರಿಕೆ ನಡೆಸಲಿದೆ.

ದರ ನಿಗದಿ ಹೇಗೆ?
ಎಲ್ಲ ಜಿಲ್ಲೆಗಳಲ್ಲಿ ಏಕರೂಪದ ಮರಳು ದರ ನಿಗದಿಯಾಗಿದ್ದು, ಹಳ್ಳ, ತೊರೆ, ಕೆರೆಗಳಲ್ಲಿ ಗ್ರಾ.ಪಂ. ಮೂಲಕ ವಿತರಿಸುವ 1 ಮೆ.ಟನ್‌ ಮರಳಿಗೆ 350 ರೂ., ಹೊಳೆ, ನದಿ, ಅಣೆಕಟ್ಟು, ಜಲಾಶಯ, ಬ್ಯಾರೇಜ್‌, ಅಣೆಕಟ್ಟುಗಳ ಹಿನ್ನೀರಿನ ನದಿ ಪಾತ್ರದ ಪ್ರದೇಶಗಳ ಒಂದು ಮೆ.ಟನ್‌ ಮರಳಿಗೆ 700 ರೂ. ದರ ನಿಗದಿಪಡಿಸಲಾಗಿದೆ.

ಅನಧಿಕೃತ ಮರಳುಗಾರಿಕೆಗೆ ಬ್ರೇಕ್‌!
ಮರಳನ್ನು ಆಯಾ ತಾಲೂಕು ವ್ಯಾಪ್ತಿಯ ಗ್ರಾಮ ಗಳ ಸಾರ್ವ ಜನಿಕ ಮತ್ತು ಸರಕಾರಿ ಕಾಮಗಾರಿಗಳಿ ಗಾಗಿ ಲಘು ವಾಹನ ಗಳಲ್ಲಿ ಮಾತ್ರ ಸಾಗಿಸಲು ಅವಕಾಶ ಇದೆ. ಕರ್ನಾಟಕ ಸ್ಟೇಟ್‌ ಮಿನರಲ್‌ ಕಾರ್ಪೊರೇಶನ್‌ ಲಿ. ಮತ್ತು ಹಟ್ಟಿ ಚಿನ್ನದ ಗಣಿ ಲಿ. ತೆಗೆದ ಮರಳು ರಾಜ್ಯಾ ದ್ಯಂತ ಸಾಗಣೆಗೆ ಅವಕಾಶ ಇದೆ. ಗ್ರಾಹಕರು ಮರಳು ಮಿತ್ರ ಆ್ಯಪ್‌ ಮೂಲಕ ಬುಕ್ಕಿಂಗ್‌ ಮಾಡ ಬಹುದು. ಹೊರ ರಾಜ್ಯಗಳಿಂದ ಮರಳು ಸಾಗಿಸುವ ವಾಹನಗಳಿಗೆ ನಿಯಂತ್ರಣ ಶುಲ್ಕ ವಿಧಿಸಲು ಅವಕಾಶವಿದೆ. ಕೇಂದ್ರೀಯ ಜಿಪಿಎಸ್‌ ಟ್ರ್ಯಾಕಿಂಗ್‌ ವ್ಯವಸ್ಥೆಯ ಮೂಲಕ ಮರಳು ಸಾಗಣೆ ಮೇಲೆ ನಿಗಾ ಇರಿಸಲಾಗುತ್ತದೆ. ಅನಧಿಕೃತ ಗಣಿ ಚಟುವಟಿಕೆ ನಿಯಂತ್ರಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧೀನದಲ್ಲಿ ಖನಿಜ ರಕ್ಷಣಾ ಪಡೆ ಸ್ಥಾಪಿಸಲಾಗುತ್ತದೆ. ಇದಕ್ಕೆ ಮಾಜಿ ಸೈನ್ಯಾಧಿಕಾರಿ ಮುಖ್ಯಸ್ಥರಾಗಿರುತ್ತಾರೆ.

ಸಮಿತಿ ರಚನೆ
ಜಿಲ್ಲಾಧಿಕಾರಿ ಅಧ್ಯಕ್ಷತೆಯ ಮರಳು ಸಮಿತಿ ಇರುತ್ತದೆ. ಜಿ.ಪಂ. ಸಿಇಒ, ಎಸ್ಪಿ, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಎಂಜಿನಿಯರ್‌, ಜಲಸಂಪನ್ಮೂಲ ಇಲಾಖೆ ಎಂಜಿನಿಯರ್‌, ಪ್ರಾದೇಶಿಕ ಸಾರಿಗೆ ಅಧಿಕಾರಿ, ಪರಿಸರ ಅಧಿಕಾರಿ, ಜಿಲ್ಲೆಯ ಎಲ್ಲ ಉಪವಿಭಾಗದ ವಿಭಾಗಾಧಿಕಾರಿ, ಕಂದಾಯ ಇಲಾಖೆ ಅಧಿಕಾರಿಗಳು ಸದಸ್ಯರಾಗಿ ಇರಲಿದ್ದು, ಭೂವಿಜ್ಞಾನಿಗಳು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ತಾಲೂಕು ಮಟ್ಟದ ಮರಳು ಸಮಿತಿಗೆ ಕಂದಾಯ ವಿಭಾಗದ ಅಧಿಕಾರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಪರವಾನಿಗೆ ನವೀಕರಣವಿಲ್ಲ!
ಹೊಸ ಮರಳು ನೀತಿಯನ್ನು ಕರಾವಳಿಯಲ್ಲಿ ಕರ್ನಾಟಕ ಸ್ಟೇಟ್‌ ಮಿನರಲ್‌ ಕಾರ್ಪೋರೇಷನ್‌ ಲಿ. ಪ್ರಾರಂಭಿಸಲಿದೆ. ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 2 ಕಡೆಯಲ್ಲಿ ಮರಳು ಗಣಿಗಾರಿಕೆಗೆ 5 ವರ್ಷಗಳ ಕಾಲ ಗುತ್ತಿಗೆ ನೀಡಿದ್ದು, ಅವರು ಅವಧಿ ಮುಗಿಯುವ ವರೆಗೆ ಮರಳು ಮಿತ್ರ ಆ್ಯಪ್‌ ಮೂಲಕ ಮರಳು ವಿತರಿಸಬೇಕಿದೆ.

ಹೇಗೆ ಗುರುತಿಸುವಿಕೆ?
ತಹಶೀಲ್ದಾರ್‌ ನೇತೃತ್ವದಲ್ಲಿ ಪಿಡಬ್ಯುಡಿ, ಅಂತರ್ಜಲ ಇಲಾಖೆ, ಅರಣ್ಯ ಇಲಾಖೆ, ಪಿಡಿಒ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಗಳ ಅಧಿಕಾರಿಗಳ ತಂಡದಿಂದ ಜಂಟಿ ಸ್ಥಳ ಪರಿಶೀಲನೆ ನಡೆಸಿ ಜಿಲ್ಲಾ ಮರಳು ಸಮಿತಿಗೆ ವರದಿ ಸಲ್ಲಿಸಬೇಕಿದೆ. ಇದರ ಆಧಾರದಲ್ಲಿ ಸಾಂಪ್ರದಾಯಿಕವಾಗಿ ಮರಳು ತೆಗೆಯಲು ಗ್ರಾ.ಪಂ.ಗಳಿಗೆ ಅನುಮತಿ ಸಿಗಲಿದೆ.

ಜಿಲ್ಲೆಯ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಈ ಹಿಂದಿನಂತೆ ಮುಂದುವರಿಯಲಿದೆ. ನಾನ್‌ ಸಿಆರ್‌ಝಡ್‌ನಲ್ಲಿ 24 ಕಡೆಯಲ್ಲಿ 2.20 ಲಕ್ಷ ಮೆ. ಟನ್‌ ಮರಳು ಇದೆ. ಹೊಸ ನೀತಿ ಅನ್ವಯ ಕೆರೆ, ತೊರೆಗಳಲ್ಲಿ ಇರುವ ಮರಳು ದಿಬ್ಬ ತೆರವು ಗೊಳಿಸಲು ಅವಕಾಶವಿದೆ. ಜಿಲ್ಲೆಯ ಜನರಿಗೆ ಕಡಿಮೆ ದರದಲ್ಲಿ ಉತ್ತಮ ಮರಳು ಸಿಗಲಿದೆ.
-ಜಿ. ಜಗದೀಶ್‌, ಉಡುಪಿ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesha Chaturthi: ಆರೂರು: 35ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ… ವಿವಿಧ ಕಾರ್ಯಕ್ರಮ

ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ

ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ

Udupi ಗೀತಾರ್ಥ ಚಿಂತನೆ-29 ಭಗವದವತಾರದ ಉದ್ದೇಶವೇನು?

Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.