ಕೆಲವರು ನಾನೇ ಸಮರ್ಥ ಎನ್ನುವ ಭ್ರಮೆಯಲ್ಲಿದ್ದಾರೆ : ಸಿಎಂ ಬೊಮ್ಮಾಯಿ ಟಾಂಗ್

ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದಿಂದ ಕೃತಜ್ಞತೆ ಸಮಾರಂಭ

Team Udayavani, May 1, 2022, 3:47 PM IST

1-dffdsf

ಬೆಂಗಳೂರು: ಹಿಂದುಳಿದ ಮಠಗಳಿಗೆ ಸರ್ಕಾರದದಿಂದ ಅನುದಾನ ಬಿಡುಗಡೆ ಹಿನ್ನೆಲೆ‌ಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟದಿಂದ ಕೃತಜ್ಞತೆ ಸಮಾರಂಭ ಭಾನುವಾರ ಕೆಂಗೇರಿಯ ರಾಮಾನುಜ ಮಠದಲ್ಲಿ ನಡೆಯಿತು.

ಸಿಎಂ ಬಸವರಾಜ್ ಬೊಮ್ಮಾಯಿ, ಸಚಿವ ಭೈರತಿ ಬಸವರಾಜ್, ಕಾಗಿನೆಲೆ ಗುರು ಪೀಠದ ನಿರಂಜನಾಂದಪುರಿ ಸ್ವಾಮೀಜಿ, ಶಾಂತವೀರ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ ಹಲವು ಗಣ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ವೇದಿಕೆ ಬರುತ್ತಿದ್ದಂತೆ ಸ್ವಾಮೀಜಿ ಗಳು ಕುಳಿತುಕೊಳ್ಳುವ ದೊಡ್ಡ ಆಸನದಲ್ಲಿ ಕುಳಿತುಕೊಳ್ಳಲು ಸಿಎಂ ಬೊಮ್ಮಾಯಿ ನಿರಾಕರಿಸಿದರು. ನಿರಂಜನಾನಂದಪುರಿ ಸ್ವಾಮೀಜಿ ಒತ್ತಾಯ ಮಾಡಿದರೂ, ಆಸನದಲ್ಲಿ ಕುಳಿತುಕೊಳ್ಳದೆ ಕೊನೆಗೆ ಸಾಮಾನ್ಯ ಆಸನದಲ್ಲಿ ಕುಳಿತುಕೊಂಡರು.
ಸಿಎಂ ಬೊಮ್ಮಾಯಿ ನಡೆಗೆ ಸ್ವಾಮೀಜಿಗಳೆಲ್ಲರೂ ಪ್ರಶಂಸೆ ವ್ಯಕ್ತಪಡಿಸಿ, ಕಾಮನ್ ಮೆನ್ ಸಿಎಂ ಎಂದರು.

ನಾವು ಕೊಟ್ಟಿರುವುದು ಏನೂ ಅಲ್ಲ

ಸಮಾರಂಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ”ನಿಮ್ಮೆಲ್ಲರ ಮಾತು ಕೇಳಿ ಹೃದಯ ತುಂಬಿದೆ ಮಾತುಗಳು ಬರುತ್ತಿಲ್ಲ.ತನ್ನದು ಅಂತ ಹೇಳಿಕೊಳ್ಳಲು ಗುರುತಿಲ್ಲದ ಸಮುದಾಯಗಳು ಅವರ ಪರವಾಗಿ ಧ್ವನಿ ಎತ್ತಲು, ನಿಮ್ಮ ಗುರಿ ಸರ್ವಸ್ವವನ್ನ ತಾಗ್ಯ ಮಾಡಿರುವುದು ಸಾಮಾನ್ಯದ ಮಾತಲ್ಲ.ಎನ್ನಿಲ್ಲದ ಸಮುದಾಯಕ್ಕೆ ಮಠ ಕಟ್ಟಿ ಏನಾದರೂ ಕೊಡಬೇಕು ಅನ್ನುವ ಸಾಹಸಕ್ಕೆ ಕೈ ಹಾಕಿದ್ದೀರಿ.ಇಂತಹ ದೊಡ್ಡ ಕೆಲಸಕ್ಕೆ ನೀವು ಕೈಹಾಕಿದ್ದೀರಿ, ಇದು ಅಮೋಘವಾದ ಕೆಲಸ. ಇಂತಹ ಕೆಲಸಕ್ಕೆ ನಮ್ಮ ಸರ್ಕಾರದಿಂದ ಕೊಟ್ಟಿರುವುದು ಏನೂ ಅಲ್ಲ ಎನ್ನುವುದು ನನ್ನ ಭಾವನೆ” ಎಂದರು.

”ಒಂದು ಕುಟುಂಬವೂ ಸಹ ಸ್ವಾವಲಂಬನೆಯಿಂದ ಬದುಕಬೇಕು. ಇವತ್ತು ಸಾಮರ್ಥ್ಯದದ ಬಗ್ಗೆ ಮಾತನಾಡುತ್ತಿದ್ದಾರೆ. ಕೆಲವರು ನಾನೇ ಸಮರ್ಥ ಎನ್ನುವ ಭ್ರಮೆಯಲ್ಲಿದ್ದಾರೆ. ಇದು ಜನರ ಸಾಮರ್ಥ್ಯ, ಅದಕ್ಕಾಗಿ ನಾನು ಕೆಲಸ ಮಾಡುತ್ತಿದ್ದೇನೆ. ಸಬ್ ಕಾ ಸಥ್ ಸಬ್ ಕಾ ವಿಕಾಸ್ ತತ್ವದ ಅಡಿಯಲ್ಲಿ ನಾವು ಕೆಲಸ ಮಾಡುತ್ತೀದ್ದೇವೆ. ಶಕ್ತಿ ಇಲ್ಲದವನಿಗೆ ಶಕ್ತಿ ತುಂಬುವುದು ಸಾಮರ್ಥ್ಯ. ಆರ್ಥಿಕವಾಗಿ ಶಕ್ತಿ ಇಲ್ಲದವರಿಗೆ ಶಕ್ತಿ ತುಂಬುವ ಕೆಲಸವನ್ನ ನಾನು ಮಾಡುತ್ತಿದ್ದೇನೆ. ನಾನು ಮಾಡುತ್ತಿರುವ ಸಾಮರ್ಥ್ಯ, ಸೂರಿಲ್ಲದವರಿಗೆ ಸೂರನ್ನ, ವಿದ್ಯೆ ಇಲ್ಲದವರಿಗೆ ವಿದ್ಯೆಯನ್ನ ಕೊಡುವುದೇ ಸಾಮರ್ಥ್ಯ ಎಂದು ತಿಳಿದಿದ್ದೇನೆ” ಎಂದರು.

”ಮಾತಿನಿಂದ ಅಳೆಯಬೇಡಿ, ಕೃತಿಯಿಂದ ನಮ್ಮನ್ನ ಅಳೆಯಿರಿ. ನಮ್ಮ ರಿಪೋರ್ಟ್ ಕಾರ್ಡ್ ಜನತೆಯ ಮುಂದೆ ಇಟ್ಟು ನಾವು ಓಟ್ ಕೇಳುತ್ತೇವೆ. ಕೆಲಸವನ್ನ ನೋಡಿ ಆಶೀರ್ವಾದ ಮಾಡಿ. ರೈತರ ಮಕ್ಕಳಿಗೆ ವಿದ್ಯಾನಿಧಿ ನೀಡಿದ್ದೇವೆ. ಹಿಂದಿನ ಯಾವ ಸರ್ಕಾರವೂ ಕೊಟ್ಟಿರಲಿಲ್ಲ. ಸಂಧ್ಯಾ ಸುರಕ್ಷತಾ ಯೋಜನೆಯಡಿ ವಿಧವಾ ವೇತನ, ವೃದ್ಧಾಪ್ಯ ವೇತನ ಹೆಚ್ಚಿಗೆ ಮಾಡಿದ್ದೇವೆ. ಇದು ಸಾಮರ್ಥ್ಯ ಅಲ್ವಾ? ಆರ್ಥಿಕತೆ ಅಂದರೆ ಹಣ ಅಲ್ಲ. ನನ್ನ ಪ್ರಕಾರ ಆರ್ಥಿಕತೆ ಎಂದರೆ ದುಡಿಮೆ. ದುಡಿಮೆಯೇ ದೊಡ್ಡಪ್ಪ” ಎಂದರು.

”ಎಲ್ಲಾ ಶಾಲಾ ಕಟ್ಟಡಕ್ಕೆ ವಿಶೇಷ ಅನುದಾನ ನೀಡಿದ್ದೇನೆ. ನಾನು ಸುಮ್ಮನೆ ಕೂತಿಲ್ಲ, 90 % ಎಲ್ಲದಕ್ಕೂ ಆದೇಶ ಕೊಟ್ಟಿದ್ದೇನೆ. ಧಾರವಾಡ, ಮೈಸೂರು ಜಿಲ್ಲೆಯಲ್ಲಿವ 1000 ಸಾವಿರ ದಲಿತ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳನ್ನ ನೀಡಿದ್ದೇವೆ. ಎಲ್ಲಾ ಕಾರ್ಯಕ್ರಮಗಳನ್ನ ಎಲ್ಲಾ ವರ್ಗದವರಿಗೆ ಮಾಡಿದ್ದೇವೆ, ಇದಕ್ಕೆಲ್ಲಾ ನಿಮ್ಮ ಆಶೀರ್ವಾದ ಇರಲಿ. ಮಠದಲ್ಲಿ, ಹಾಸ್ಟೆಲ್ ‌ನಲ್ಲಿ ಊಟ ಮಾಡಿ ದೊಡ್ಡ ದೊಡ್ಡ ಆಫೀಸರ್ ಆಗಿದ್ದಾರೆ. ಮಠಗಳು ಇರುವುದರಿಂದ ಮುಂದೆ ಬಂದಿದ್ದಾರೆ. ಮಠಗಳು ಇರದೇ ಇದ್ರೆ ಏನಾಗುಗ್ತಾ ಇತ್ತು? ಇವತ್ತು ತಕ್ಕಡಿಯೂ ಮೇಲೆ ಏರ್ಬೇಕು ಅಲ್ವಾ” ಎಂದರು.

”ಸಾಮಾಜಿಕ ನ್ಯಾಯ ಕೇವಲ ಭಾಷಣದ ವಸ್ತುವಾಗಿದೆ. ಭಾಷಣ‌ ಮಾಡಿದ್ದೀರಾ ಅಲ್ವಾ, ಇದುವರೆಗೂ ಯಾರಿಗೆ ಕೊಟ್ಟಿದೀರಿ ಸಾಮಾಜಿಕ ನ್ಯಾಯ.ಮಠಗಳು ವಿದ್ಯೆಯ ಜೊತೆಗೆ ಸಂಸ್ಕಾರವನ್ನ ನೀಡಿದ್ದಾರೆ. ಹಾಗಾಗಿ ನಾವು ಸಹಾಯವನ್ನ ಮಾಡಿದ್ದೇವೆ” ಎಂದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.