ಅಭ್ಯರ್ಥಿಗಳ ಗೆಲುವಿಗೆ ಪೂರಕ ಆಗಲಿಲ್ಲ ಸಿನಿ ತಾರೆಯರ ಪ್ರಚಾರ!
Team Udayavani, Jun 4, 2024, 8:57 PM IST
ಬೆಂಗಳೂರು: ಚಾಲೆಂಜಿಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಬಿರುಸಿನ ಪ್ರಚಾರ ನಡೆಸಿದ್ದರು. ಕಳೆದ ಬಾರಿ ಪಕ್ಷೇತರವಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್ ಪರ ಪ್ರಚಾರ ನಡೆಸಿ ಗೆಲುವಿಗೆ ಕಾರಣರಾಗಿದ್ದರು.
ಆದರೆ ಈ ಬಾರಿ ಸ್ಟಾರ್ ಚಂದ್ರು ಅವರನ್ನು ಗೆಲುವಿನ ದಡ ತಲುಪಿಸಲು ದರ್ಶನ್ ಜನಪ್ರಿಯತೆ ನೆರವಾಗಿಲ್ಲ.
ಇನ್ನು ಶಿವಮೊಗ್ಗದಲ್ಲಿ ಕಾಂಗ್ರೆಸ್ನಿಂದ ಅಭ್ಯರ್ಥಿ ವರನಟ ಡಾ. ರಾಜ್ ಕುಮಾರ್ ಸೊಸೆ ಗೀತಾ ಪರ ಪತಿ ನಟ ಶಿವರಾಜ್ ಕುಮಾರ್ ನಿರಂತರವಾಗಿ ಪ್ರಚಾರ ನಡೆಸಿದ್ದರು. ಅವರ ಪರ ನಟರಾದ ದುನಿಯಾ ವಿಜಯ್, ವಿಜಯ್ ರಾಘವೇಂದ್ರ, ಚಿಕ್ಕಣ್ಣ, ಅನುಶ್ರೀ ಬ್ಯಾಟ್ ಬೀಸಿದ್ದರು. ಆದರೆ ಅಲ್ಲೂ ಗೆಲುವು ದಕ್ಕಿಲ್ಲ.
ಇನ್ನು ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಟಾಳ್ಕರ್ ಪರ ಕಿರುತೆರೆ ನಟಿಯರಾದ ಮೇಘಾ ಶೆಟ್ಟಿ, ಮೌನ ಗುಡ್ಡೆಮನೆ, ಭವ್ಯ ಗೌಡ ಪ್ರಚಾರ ನಡೆಸಿದ್ದರು. ಆದರೂ ಮೃಣಾಲ್ ಸೋಲುಂಡಿದ್ದಾರೆ.
ಇನ್ನು ತೆಲುಗು ಜನಪ್ರಿಯ ನಟ, ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಾರ ನಡೆಸಿದ್ದು, ಈ ಪೈಕಿ ರಾಯಚೂರು ಹೊರತು ಪಡಿಸಿ ಉಳಿದೆಡೆ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಈ ಬಾರಿಯೇ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ
Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು
GST ವಿಚಾರದಲ್ಲಿ ಟೀಕೆ: ನಿರ್ಮಲಾ ಸೀತಾರಾಮನ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ
Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ
Malur ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಡೀರ್ ಭೇಟಿ… ವ್ಯವಸ್ಥೆಗಳ ಬಗ್ಗೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress; ಈ ಬಾರಿಯೇ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ
kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು
Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ
Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು
Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.