Karnataka: ಕಮಿಷನ್‌ ಹಾವಳಿಗೆ ಕಡಿವಾಣ- ಸಿಎಂ ಭರವಸೆ

-ಗುತ್ತಿಗೆದಾರರ ಬಾಕಿ ಬಿಲ್‌ ಬಿಡುಗಡೆಗೆ ಮನವಿ ಮಾಡಿದ ಕೆಂಪಣ್ಣ ನೇತೃತ್ವದ ನಿಯೋಗ

Team Udayavani, Jun 24, 2023, 7:06 AM IST

SIDDARAMAYYA 2 IMP

ಬೆಂಗಳೂರು: ರಾಜ್ಯದಲ್ಲಿ ಕಮಿಷನ್‌ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಬಾಕಿ ಬಿಲ್ಲುಗಳ ಪಾವತಿ ಮತ್ತು ಸ್ಥಳೀಯ ಗುತ್ತಿಗೆದಾರರಿಗೆ ಗುತ್ತಿಗೆ ಸಿಗುವಂತೆ ಕ್ರಮ ಕೈಗೊಳ್ಳುವಂತೆ ಕೋರಿಕೊಂಡ ಸಂದರ್ಭದಲ್ಲಿ ಈ ಆಶ್ವಾಸನೆಯನ್ನು ನೀಡಿದ್ದಾರೆ.

ಬಿಜೆಪಿ ಸರಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್‌ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿಯಿಂದ ಹಳಿ ತಪ್ಪಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಅಗತ್ಯವಿದೆ. ಬಜೆಟ್‌ ಅಧಿವೇಶನದ ಬಳಿಕ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಗುತ್ತಿಗೆದಾರರ ಬೇಡಿಕೆಗಳ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಬಾಕಿ ಬಿಲ್‌ ಬಿಡುಗಡೆ ಮಾಡುವಂತೆ ಮನವಿ
ಹೊಸ ಸರಕಾರ ರಚನೆಯಾದ ಸಂದರ್ಭದಲ್ಲಿ ಬಾಕಿ ಇರುವ ಬಿಲ್‌ ಪಾವತಿ ಮತ್ತು ವಿವಿಧ ಇಲಾಖೆಗಳು, ನಿಗಮ ಮತ್ತು ಮಂಡಳಿಗಳು ಹೊಸದಾಗಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಸ್ಥಗಿತಗೊಳಿಸುವುದು ಸಾಮಾನ್ಯ. ಆದರೆ 15-20 ದಿನಗಳಲ್ಲಿ ಈ ಆದೇಶವನ್ನು ಹಿಂಪಡೆಯಲಾಗುತ್ತದೆ. ಸದ್ಯದ ಸರಕಾರ ರಚನೆಯಾಗಿ ತಿಂಗಳು ಕಳೆದರೂ ಸುಮಾರು 20 ಸಾವಿರ ಕೋಟಿ ರೂ. ಮೌಲ್ಯದ ಕಾಮಗಾರಿ ಹಾಗೂ ಟೆಂಡರ್‌ ಪ್ರಕ್ರಿಯೆ ಸ್ಥಗಿತಗೊಂಡಿದೆ. ಪಾವತಿಗಾಗಿ ಖಜಾನೆಗೆ ಸಲ್ಲಿಸಲಾಗಿದ್ದ ಬಿಲ್‌ಗ‌ಳನ್ನೂ ತಡೆ ಹಿಡಿಯಲಾಗಿದೆ. ಆದ್ದರಿಂದ ಕಾಮಗಾರಿಗಳನ್ನು ಸ್ಥಗಿತಗೊಳಿಸುವ ಆದೇಶವನ್ನು ಕೂಡಲೇ ಹಿಂಪಡೆದು ಗುತ್ತಿಗೆದಾರರ ಬಾಕಿ ಬಿಲ್‌ಗ‌ಳಿಗೆ ಹಣ ಬಿಡುಗಡೆ ಮಾಡಬೇಕು ಮತ್ತು ಕಾಮಗಾರಿಗಳನ್ನು ಮುಂದುವರಿಸಲು ಅವಕಾಶ ನೀಡಬೇಕೆಂದು ನಿಯೋಗ ಮನವಿ ಮಾಡಿದೆ.

ಪ್ಯಾಕೇಜ್‌ ಪದ್ಧತಿ ರದ್ದುಗೊಳಿಸಿ
ಸ್ಥಳೀಯ ಗುತ್ತಿಗೆದಾರರನ್ನು ದೂರವಿಡುವ ಉದ್ದೇಶದಿಂದ ಪ್ಯಾಕೇಜ್‌ ಪದ್ಧತಿ ಎಂಬ ತಂತ್ರವನ್ನು ಅಧಿಕಾರಶಾಹಿ ಅನುಸರಿಸುತ್ತಿದೆ. ಅನಗತ್ಯ ಅರ್ಹತೆ ಮತ್ತು ನಿಯಮಗಳನ್ನು ಹೇರಿ ಸ್ಥಳೀಯರನ್ನು ದೂರವಿಡಲಾಗುತ್ತಿದೆ. ಕೆಲವೇ ಲಕ್ಷ ರೂ.ಗಳ ಟೆಂಡರ್‌ ಪಡೆದುಕೊಳ್ಳಲು ಕೂಡ ಸ್ಥಳೀಯ ಗುತ್ತಿಗೆದಾರ ಹೆಣಗಬೇಕಾಗಿದೆ. ಆದ್ದರಿಂದ ಪ್ಯಾಕೇಜ್‌ ಪದ್ಧತಿ ರದ್ದುಗೊಳಿಸಿ ಪ್ರತಿ ಕಾಮಗಾರಿಗೂ ಪ್ರತ್ಯೇಕ ಟೆಂಡರ್‌ ಕರೆದರೆ ಸ್ಥಳೀಯ ಗುತ್ತಿಗೆದಾರರಿಗೆ ಸಹಾಯಕವಾಗುತ್ತದೆ ಎಂದು ಸಿಎಂ ಗಮನ ಸೆಳೆಯಲಾಗಿದೆ.

ಎಲ್ಲ ರೀತಿಯ ಕಾಮಗಾರಿಗಳನ್ನು ಟೆಂಡರ್‌ ಮೂಲಕವೇ ಹಂಚಿಕೆ ಮಾಡಬೇಕು. ಬಾಕಿ ಮೊತ್ತವನ್ನು ಆದ್ಯತೆ ಮತ್ತು ಹಿರಿತನದ ಆಧಾರದ ಮೇಲೆ ಬಿಡುಗಡೆ ಮಾಡಬೇಕು. ಯಾವುದೇ ಪ್ರಯೋಜನವಿಲ್ಲದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮವನ್ನು ಮುಚ್ಚಿ ಆಯಾ ಇಲಾಖೆಗಳೇ ನೇರ ಮತ್ತು ಪಾರದರ್ಶಕವಾಗಿ ಟೆಂಡರ್‌ ಮೂಲಕವೇ ಕಾಮಗಾರಿ ನಡೆಸಿದರೆ ಉತ್ತಮ. ಹಳೆಯ ಕಾಮಗಾರಿಗಳಿಗೆ ಶೇ. 12ರಷ್ಟು ಮಾತ್ರ ಜಿಎಸ್ಟಿ ಕಡಿತ ಮಾಡಬೇಕೆಂದು ಮನವಿ ಮಾಡಲಾಗಿದೆ.

ಲೋಕೋಪಯೋಗಿ, ಜಲ ಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌, ಸಣ್ಣ ನೀರಾವರಿ ಮತ್ತು ಬಿಬಿಎಂಪಿಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು, ಕಾಮಗಾರಿಗಳಿಗೆ ಮಂಜೂರಾಗುವ ಒಟ್ಟು ಅನುದಾನದಲ್ಲಿ ಶೇ.30-40ಕ್ಕಿಂತಲೂ ಹೆಚ್ಚು ಮೊತ್ತ ಭ್ರಷ್ಟಾಚಾರ ಮತ್ತಿತರ ವೆಚ್ಚಗಳಿಗೆ ಸರಿದೂಗಿಸಬೇಕಾಗಿತ್ತು. ಭ್ರಷ್ಟಾಚಾರಕ್ಕೆ ದಾಖಲೆಗಳು ಇರುವುದಿಲ್ಲ ಎಂಬ ಅಂಶವನ್ನೇ ಅಸ್ತ್ರವಾಗಿರಿಸಿಕೊಂಡು ಭ್ರಷ್ಟಾಚಾರಕ್ಕೆ ದಾಖಲೆಗಳನ್ನು ಕೇಳುವುದು ವಾಡಿಕೆಯಾಗಿದೆ. ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ನಿಗ್ರಹಕ್ಕೆ ಕ್ರಮ ಕೈಗೊಳ್ಳುವ ವಿಶ್ವಾಸ ಇರುವುದಾಗಿ ನಿಯೋಗದ ಸದಸ್ಯರು ತಿಳಿಸಿದ್ದಾರೆ.

ಪದಾಧಿಕಾರಿಗಳಾದ ಆರ್‌.ಅಂಬಿಕಾಪತಿ, ಜಿ.ಎಂ.ರವೀಂದ್ರ, ಸಂಕಾಗೌಡ ಶಾನಿ, ನಾಗರಾಜ್‌, ಆರ್‌. ಮಂಜುನಾಥ್‌, ರಮೇಶ್‌ ಮೊದಲಾದವರು ಉಪಸ್ಥಿತರಿದ್ದರು.

ಸರಕಾರಗಳು ಬದಲಾದಂತೆ ಭ್ರಷ್ಟಾಚಾರ ಏರುಗತಿಯಲ್ಲಿ ಸಾಗುತ್ತಿರುವುದು ನಮ್ಮ ಆತಂಕಕ್ಕೆ ಕಾರಣವಾಗಿದೆ. ಹೊಸ ಸರಕಾರ ಅಸ್ತಿತ್ವಕ್ಕೆ ಬಂದಾಗಲೆಲ್ಲ ಭ್ರಷ್ಟಾಚಾರ ಹೆಚ್ಚುತ್ತಿರುವುದು ಆತಂಕ ಮೂಡಿಸುತ್ತದೆ. ಆದರೆ ಅಪಾರ ಅನುಭವವಿರುವ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಭ್ರಷ್ಟಾಚಾರ ಕೊನೆಗಾಣಲಿದೆ ಎಂಬ ವಿಶ್ವಾಸವಿದೆ.
– ಡಿ. ಕೆಂಪಯ್ಯ, ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ

ಕಮಿಷನ್‌ ಕೇಳಿದರೆ ಬಹಿರಂಗಪಡಿಸುವೆ: ಕೆಂಪಣ್ಣ
ಬೆಂಗಳೂರು: ಈಗಿನ ಸರಕಾರದಲ್ಲಿ ಸಚಿವರು, ಶಾಸಕರು ಕಮಿಷನ್‌ ಕೇಳಿದರೆ ನಾವು ಅದನ್ನು ಬಹಿರಂಗಪಡಿಸುತ್ತೇವೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಗುತ್ತಿಗೆದಾರರ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಹೊಸ ಸರಕಾರದವರು ಈವರೆಗೆ ನಮ್ಮಲ್ಲಿ ಕಮಿಷನ್‌ ಕೇಳಿಲ್ಲ. ಒಂದು ವೇಳೆ ಕೇಳಿದರೆ ವಿರೋಧಿಸುತ್ತೇವೆ ಎಂದರು. ಬಿಜೆಪಿ ಮೇಲಿನ ಶೇ.40 ಕಮಿಷನ್‌ ಆರೋಪದ ದಾಖಲೆ ಇನ್ನೂ ಬಿಡುಗಡೆ ಮಾಡದಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ಪ್ರಕರಣ ಸದ್ಯ ನ್ಯಾಯಾಲಯದಲ್ಲಿದೆ. ಅದರ ಕುರಿತಾದ ದಾಖಲೆಗಳನ್ನು ಸಮಯ ಬಂದಾಗ ಬಿಡುಗಡೆ ಮಾಡುತ್ತೇವೆ ಎಂದು ಡಿ. ಕೆಂಪಣ್ಣ ಹೇಳಿದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.