ಬಂಡೆಗೂ ತಟ್ಟಿದ ಬಿಸಿ!: Andhra Pradeshದಲ್ಲಿ ಬಿಸಿಲಿನ ತಾಪಕ್ಕೆ ಬಿರುಕು ಬಿಟ್ಟ ಬಂಡೆಕಲ್ಲು


Team Udayavani, Apr 13, 2023, 7:42 AM IST

temparature

ಕರ್ನೂಲು/ಹೊಸದಿಲ್ಲಿ: “ಅವನು ಬಂಡೆ… ಬಂಡೆಯಂಥ ವ್ಯಕ್ತಿ. ಯಾವುದಕ್ಕೂ ಬಗ್ಗಲ್ಲ” ಎಂದು ಹೇಳುವುದನ್ನು ಕೇಳಿರುತ್ತೀರಿ. ಆದರೆ ದೇಶವು ಈಗ ಅನುಭವಿಸುತ್ತಿರುವ ಬಿಸಿಲಿನ ಬೇಗೆಯು ಬೃಹತ್‌ ಬಂಡೆಯನ್ನೂ ಬಿಟ್ಟಿಲ್ಲ!

ಹೌದು ದೇಶಾದ್ಯಂತ ಬಿಸಿಲಿನ ಝಳವು ದಿನ ಕಳೆದಂತೆ ದಾಖಲೆ ಬರೆಯ­ತೊಡಗಿದ್ದು, ವಿಪರೀತ ಸೆಕೆಯಿಂದ ಜನ ಬಳಲಿ ಬೆಂಡಾಗುತ್ತಿದ್ದಾರೆ. ಮನುಷ್ಯ­ರೇನು, ಬೃಹತ್‌ ಬಂಡೆಕಲ್ಲು­ಗಳಿಗೂ “ಬಿಸಿ” ತಟ್ಟಿದೆ. ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆ ಯ ಗೋನೆಗಂಡ್ಲಾ ಗ್ರಾಮದಲ್ಲಿ ಮನೆಗಳ ನಡುವೆ ಬೃಹತ್ತಾಗಿ ಬೆಳೆದು ನಿಂತಿದ್ದ ಬಂಡೆಕಲ್ಲೊಂದು ಬಿಸಿಲು ತಾಳಲಾರದೇ ಬಿರುಕು ಬಿಟ್ಟಿದೆ!

ಮಂಗಳವಾರವೇ ಈ ಘಟನೆ ನಡೆದಿದ್ದು, ಕೂಡಲೇ ಕರ್ನೂಲು ಜಿಲ್ಲಾಧಿಕಾರಿ ಶ್ರೀಜನ ಗುಮ್ಮಲ್ಲ ಅವರು ಆ ಪ್ರದೇಶದಲ್ಲಿದ್ದ ಸುಮಾರು 150 ಕುಟುಂಬ­ಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದ್ದಾರೆ.

“ಬಂಡೆಯಲ್ಲಿ ಬಿರುಕು ಉಂಟಾಗಿದೆ. ಸದ್ಯದಲ್ಲೇ ಎರಡು ಎರಡು ಹೋಳಾಗಿ ಕೆಳಕ್ಕೆ ಬೀಳುವ ಅಪಾ ಯವಿದೆ. ಅದೃಷ್ಟವಶಾತ್‌ ಸದ್ಯಕ್ಕೆ ಅಂಥದ್ದೇನೂ ಅನಾಹುತ ಆಗಿಲ್ಲ. ನಾವು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ವಿಪತ್ತು ನಿರ್ವಹಣ ಪಡೆಯನ್ನು ನಿಯೋಜಿಸಿ, ಗ್ರಾಮಸ್ಥರನ್ನು ಸ್ಥಳಾಂತರಿಸಿದ್ದೇವೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಬಿರುಕು ಬಿಟ್ಟಿರುವ ಬಂಡೆಯು ಅಕ್ಕಪಕ್ಕದಲ್ಲಿರುವ ಮನೆಗಳ ಮೇಲೆ ಬೀಳುವ ಸಾಧ್ಯ ತೆಯಿದೆ. ಬಿರುಕು ಮುಚ್ಚಿ ಅನಾಹುತ ತಪ್ಪಿಸುವಂತೆ ಸಿಮೆಂಟ್‌ ಕಂಪೆನಿಗಳಿಗೆ ಮನವಿ ಮಾಡಿದ್ದೇವೆ” ಎಂದು ಜಿಲ್ಲಾಧಿಕಾರಿ ಗುಮ್ಮಲ್ಲ ಹೇಳಿದ್ದಾರೆ. ಗೋನೆ ಗಂಡ್ಲಾದಲ್ಲಿ ಮಂಗಳವಾರ ಗರಿಷ್ಠ ತಾಪಮಾನ 38.2 ಡಿ.ಸೆ. ಇತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬುಧವಾರವೂ ತಾಪಮಾನ ಏರಿಕೆ: ಬುಧವಾರ ಗೋಲುಗೊಂಡಾದಲ್ಲಿ 42.3 ಡಿ.ಸೆ., ಕುನಾವರಂನಲ್ಲಿ 46 ಡಿ.ಸೆ., ನಾಥವರಂನಲ್ಲಿ 42 ಡಿ.ಸೆ, ಕೋಟನಂದು­ರುನಲ್ಲಿ 41 ಡಿ.ಸೆ. ತಾಪಮಾನ ದಾಖಲಾಗಿದೆ.

217 ಬೇಸಗೆ ವಿಶೇಷ ರೈಲು
ಬೇಸಗೆ ಋತುವಿನಲ್ಲಿ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿ ನಲ್ಲಿ ರೈಲ್ವೇ ಸಚಿವಾಲಯವು, 217 ವಿಶೇ ಷ ರೈಲುಗಳ ಸಂಚಾರ ಆರಂಭಿಸುತ್ತಿರು­ವು ದಾಗಿ ಘೋಷಿಸಿದೆ. ಪಟ್ನಾ, ಮುಂಬಯಿ, ಬೆಂಗ ಳೂರು, ಚೆನ್ನೈಯಂಥ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರಯಾಣ ಬೆಳೆಸುವವರಿಗೆ ಇದರಿಂದ ಅನುಕೂಲವಾಗಲಿದೆ.

ಭಾರತೀಯ ಹವಾಮಾನ ಇಲಾಖೆಯು ಬುಧವಾರ ತೆಲಂಗಾಣದ ಬಹುತೇಕ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಈ ವಾರ ಇಲ್ಲಿ ಗರಿಷ್ಠ ತಾಪಮಾನ 45 ಡಿ.ಸೆ.ಗೆ ತಲುಪುವ ಅಪಾಯವಿದೆ ಎಂದು ಇಲಾಖೆ ಎಚ್ಚರಿಸಿದೆ. ಹೈದರಾಬಾದ್‌ಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬುಧವಾರ ಅದಿಲಾಬಾದ್‌ನಲ್ಲಿ 42.2 ಡಿ.ಸೆ. ತಾಪಮಾನ ದಾಖಲಾಗಿದೆ. ದಿಲ್ಲಿಯಲ್ಲೂ ಗರಿಷ್ಠ ತಾಪಮಾನ 40 ಡಿ.ಸೆ. ಆಗಿದ್ದು, ಮಹಾರಾಷ್ಟ್ರದ ಚಂದ್ರಾಪುರದಲ್ಲೂ
40ಡಿ.ಸೆ. ಆಗಿದೆ. ವಿದರ್ಭದಲ್ಲಿ 41.8 ಡಿ.ಸೆ.ಗೆ ತಲುಪಿದೆ.

ಒಡಿಶಾದಲ್ಲಿ ಶಾಲೆಗಳಿಗೆ ರಜೆ
ಒಡಿಶಾದಲ್ಲಿ ಬಿಸಿ ಗಾಳಿಯ ತೀವ್ರತೆ ಹೆಚ್ಚಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ನವೀನ್‌ ಪಟ್ನಾಯಕ್‌ ನೇತೃತ್ವದ ಸರಕಾರವು ರಾಜ್ಯಾದ್ಯಂತ ಎಲ್ಲ ಶಾಲೆಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿದ್ದಾರೆ. ಎ.12ರಿಂದ 16ರವರೆಗೆ 10ನೇ ತರಗತಿಯವರೆಗಿನ ಎಲ್ಲ ಸರಕಾರಿ ಮತ್ತು ಖಾಸಗಿ ಶಾಲೆಯ ಮಕ್ಕಳು ಶಾಲೆಗಳಿಗೆ ಬರದಂತೆ ಸೂಚಿಸಲಾಗಿದೆ. ಜತೆಗೆ, ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ಕೈಗೊಳ್ಳು ವಂತೆಯೂ ಅಧಿಕಾರಿಗಳಿಗೆ ಸಿಎಂ ನಿರ್ದೇಶಿಸಿದ್ದಾರೆ.

ಒಂದು ಲಕ್ಷ ಎಕ್ರೆ ಮಹಾ ಬೆಳೆಹಾನಿ
ಬಿಸಿಲಿನ ನಡುವೆಯೇ ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಒಂದು ಲಕ್ಷ ಎಕರೆ ಬೆಳೆಹಾನಿಯಾಗಿದೆ ಎಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಅಜಿತ್‌ ಪವಾರ್‌ ಹೇಳಿದ್ದಾರೆ.

ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರಕಾರ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿರುವ ಅವರು, ಈರುಳ್ಳಿ, ಪಪ್ಪಾಯ, ದ್ರಾಕ್ಷಿ ಸಹಿತ ವಿವಿಧ ಬೆಳೆಗಳು ನಾಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.