ಸದನದ ಗೌರವಕ್ಕೆ ಚ್ಯುತಿ ಸಲ್ಲದು


Team Udayavani, Jul 20, 2023, 5:22 AM IST

vidhana soudha

ಕರ್ನಾಟಕದ ವಿಧಾನಮಂಡಲ ದೇಶದಲ್ಲಿಯೇ ಅತ್ಯಂತ ವಿಭಿನ್ನ ಹಾಗೂ ವಿಶಿಷ್ಠವಾಗಿ ಗುರುತಿಸಿಕೊಂಡು ಅಗ್ರಸ್ಥಾನದಲ್ಲಿದೆ. ಕಲಾಪದ ವೈಖರಿ, ಚರ್ಚೆಗಳ ಗುಣಮಟ್ಟ, ಶಾಸಕರ ನಡವಳಿಕೆ ಸೇರಿದಂತೆ ಹಲವು ವಿಷಯಗಳಲ್ಲಿ ಸಂಸದೀಯ ವ್ಯವಸ್ಥೆಗೆ ಮಾದರಿಯಾಗಿದೆ. ಜತೆಗೆ ಹತ್ತಾರು ಸಂಸದೀಯಪಟುಗಳನ್ನು ದೇಶದ ರಾಜಕಾರಣಕ್ಕೆ ಕೊಡುಗೆಯಾಗಿ ನೀಡಿದ ಹಿರಿಮೆ ಹಾಗೂ ಇತಿಹಾಸ ಈ ರಾಜ್ಯಕ್ಕಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ರಾಜ್ಯದ ವಿಧಾನಮಂಡಲ ತನ್ನ ಗತವೈಭವವನ್ನು ಕಳೆದುಕೊಳ್ಳುತ್ತಿದೆ ಎಂದು ಸದನದಲ್ಲಿಯೇ ಹಲವು ಹಿರಿಯರು ಆತಂಕ ವ್ಯಕ್ತಪಡಿಸಿದ್ದು ಉಂಟು.

ಶಾಸಕರ ಹಾಜರಿ ಕೊರತೆ, ಪ್ರಶ್ನೋತ್ತರ ಕಲಾಪದಲ್ಲಿ ಸಚಿವರ ಗೈರು, ತಾಸುಗಟ್ಟಲೆ ನಿಂತು ಭಾಷಣ ಮಾಡುವ ಉತ್ತಮ ವಾಗ್ಮಿಗಳ ಸಂಖ್ಯೆ ಕಡಿಮೆಯಾಗುತ್ತಿರುವುದು, ಗಂಭೀರ ಸ್ವರೂಪ ಚರ್ಚೆಯೇ ಇಲ್ಲದೇ ಕೆಲವೊಮ್ಮೆ ಹಣಕಾಸು ಮಸೂದೆಯೂ ಸೇರಿದಂತೆ ಮಹತ್ವದ ಮಸೂದೆಗಳಿಗೆ ಅನುಮೋದನೆ ಪಡೆಯುತ್ತಿರುವ ವೈಖರಿ ಯಿಂದ “ಮಾತಿನ ಮನೆ’ ಯಲ್ಲಿ ಮಾತಿನ ಸದ್ದು ಕಡಿಮೆಯಾಗಿ ಗದ್ದಲ- ಕೋಲಾಹಲ, ಧರಣಿ, ಸಭಾತ್ಯಾಗಗಳೇ ಹೆಚ್ಚಾಗುತ್ತಿವೆ. ಹೀಗಾಗಿ ಕಲಾಪದ ಗುಣಮಟ್ಟ ಕಡಿಮೆಯಾಗುತ್ತಿದೆ ಎಂಬ ಆತಂಕವಿರುವಾಗಲೇ ವಿಧಾನ ಸಭೆ ಯಲ್ಲಿ ಬುಧವಾರ ನಡೆದ ರಾಜಾತಿಥ್ಯದ ಹೈಡ್ರಾಮ ಸಂಸದೀಯ ವ್ಯವಸ್ಥೆಗೆ ಕಪ್ಪುಚುಕ್ಕೆ ಇದ್ದಂತೆ. ಇದು ಆಡಳಿತ ಪಕ್ಷವೇ ಇರಲಿ, ವಿಪಕ್ಷವೇ ಇರಲಿ ಯಾರಿಗೂ ಘನತೆ-ಗೌರವ ತರುವಂತಹದ್ದಲ್ಲ. ನಿಜಕ್ಕೂ ಖಂಡ ನೀಯ. ಹೊಸದಾಗಿ ಆಯ್ಕೆಯಾಗಿ ಬಂದ ಜನಪ್ರತಿನಿಧಿಗಳ ನಡವಳಿಕೆ ಸದನದೊಳಗೆ ಹೇಗಿರಬೇಕು ಎಂಬುದರ ಬಗ್ಗೆ ಸ್ಪೀಕರ್‌ ಯು.ಟಿ.ಖಾದರ್‌ ಬೆಂಗಳೂರು ಹೊರವಲಯದ “ಕ್ಷೇಮವನ’ ದಲ್ಲಿ 3 ದಿನಗಳ ಪಾಠ ಮಾಡಿಸಿದ್ದರು. ಅದು ಈಗ ವ್ಯರ್ಥವಾದಂತೆ ಭಾಸವಾಗುತ್ತಿದೆ.

ಸದನದಲ್ಲಿ ಯಾವುದೇ ವಿಷಯದ ಬಗ್ಗೆಯಾದರೂ ಪ್ರಸ್ತಾವಿಸಲು ಸದಸ್ಯರಿಗೆ ನಿಯಮಾವಳಿಗಳಡಿಯಲ್ಲಿ ಅವಕಾಶವಿದೆ. ಆ ಪ್ರಕಾರವೇ ಸದನ ನಡೆಯಬೇಕು, ಸದಸ್ಯರು ಸಹ ಆ ಪ್ರಕಾರವೇ ವರ್ತಿಸಬೇಕು, ಸುಗಮ ಕಲಾಪಕ್ಕೆ ಸಹಕರಿಸಬೇಕು. ಇದರಲ್ಲಿ ಆಡಳಿತ-ವಿಪಕ್ಷ ಅಥವಾ ಹಿರಿಯರು-ಕಿರಿಯರು ಎಂಬ ತಾರತಮ್ಯವಿಲ್ಲ.

ಬೆಂಗಳೂರಿನಲ್ಲಿ ನಡೆದ ವಿಪಕ್ಷ ನಾಯಕರ ಸಭೆಗೆ ಆಗಮಿಸಿದ್ದ ಗಣ್ಯರ ಸ್ವಾಗತಕ್ಕೆ ಹಿರಿಯ ಅಧಿಕಾರಿಗಳನ್ನು ನಿಯೋಜಿಸಿದ್ದು ಬಿಜೆಪಿ- ಜೆಡಿಎಸ್‌ ಆಕ್ರೋಶಕ್ಕೆ ಕಾರಣ. ಇಲ್ಲಿ ಶಿಷ್ಟಾಚಾರ ಉಲ್ಲಂ ಸಲಾಗಿದೆ ಎಂಬುದೇ ಪ್ರಮುಖ ಆರೋಪ. ಈ ವಿಷಯವನ್ನು ಸದನದಲ್ಲಿ ಪ್ರಸ್ತಾವಿಸಿದ ಬಿಜೆಪಿ ಸದಸ್ಯರು ತನ್ನ ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ತಮ್ಮ ಆಸನಗಳ ಮುಂದಿಟ್ಟಿದ್ದ ವಿವಿಧ ಮಸೂದೆಗಳ ಪ್ರತಿಗಳನ್ನು ಹರಿದು ಸ್ಪೀಕರ್‌ ಪೀಠದಲ್ಲಿ ಆಸೀನರಾಗಿದ್ದ ಉಪಸಭಾಪತಿ ರುದ್ರಪ್ಪ ಲಮಾಣಿಯವರತ್ತ ತೂರಿದರು. ಈ ನಡೆ ಖಂಡನೀಯ.

ಪ್ರತಿಭಟನೆ, ಧರಣಿಗೂ ಇತಿಮಿತಿಗಳಿವೆ. ಪೀಠಕ್ಕೆ ಅಗೌರವ ತೋರಲಾಗಿದೆ ಎಂದು ಸ್ಪೀಕರ್‌ ಅವರು ಬಿಜೆಪಿಯ 10 ಮಂದಿ ಶಾಸಕರನ್ನು ಪ್ರಸಕ್ತ ಅಧಿವೇಶನ ಮುಗಿ ಯುವ ತನಕ ಅಮಾನತುಗೊಳಿಸುವಂತಹ ನಿರ್ಣಯ ಕೈಗೊಂಡರು. ಅಂತಿಮವಾಗಿ ಮಾರ್ಷಲ್‌ಗ‌ಳಿಂದ ಬಲವಂತವಾಗಿ ಅಮಾನತುಗೊಂಡ ಶಾಸಕರನ್ನು ಸದನದಿಂದ ಹೊರ ಹಾಕಿಸಿದರು. ಇದು ವಿಪಕ್ಷ ಸದಸ್ಯರನ್ನು ಮತ್ತಷ್ಟು ಕೆರಳಿಸಿತು. ಇವೆಲ್ಲದರ ನಡುವೆ ಸಭಾಧ್ಯಕ್ಷರ ವಿರುದ್ಧವೇ ಪ್ರತಿ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆ ಮಾಡಿದರು. ಇಂದಿನ ಬೆಳವಣಿಗೆ ನಿಜಕ್ಕೂ ಯಾರೂ ಒಪ್ಪುವಂತಹದ್ದಲ್ಲ. ಆಡಳಿತ-ವಿಪಕ್ಷದ ನಡುವಿನ ಮನಃಸ್ತಾಪ ಜಿದ್ದಾಜಿದ್ದಿ ಹಂತಕ್ಕೆ ಹೋದರೆ ಅದು ಪ್ರಜಾಪ್ರಭುತ್ವದ ಲಕ್ಷಣ ವಲ್ಲ. ಏನೇ ವಿಷಯಗಳಿದ್ದರೂ ಮಾತುಕತೆಯ ಮೂಲಕವೇ ಸದನದಲ್ಲಿ ಬಗೆಹರಿಸಿಕೊಳ್ಳಲು ಅವಕಾಶವಿದೆ. ಆ ನಿಟ್ಟಿನಲ್ಲಿ ಆಡಳಿತ-ವಿಪಕ್ಷಗಳು ಆಲೋಚಿಸುವುದು ಸೂಕ್ತ.

ಟಾಪ್ ನ್ಯೂಸ್

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.