![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 13, 2023, 7:21 AM IST
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಗುಜರಾತ್ನ ಕೆಳ ಹಂತದ ನ್ಯಾಯಾಲಯದ 68 ನ್ಯಾಯಾಧೀಶರಿಗೆ ನೀಡಬೇಕಾಗಿದ್ದ ಪದೋನ್ನತಿಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆನೀಡಿದೆ. ಈ ನ್ಯಾಯಾಧೀಶರ ಪೈಕಿ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ 2 ವರ್ಷಗಳ ಜೈಲು ಶಿಕ್ಷೆ ತೀರ್ಪು ನೀಡಿದ ಸೂರತ್ನ ಮುಖ್ಯ ಜ್ಯುಡಿಷಿಯಸ್ ಮ್ಯಾಜಿಸ್ಟ್ರೇಟ್ ಹರೀಶ್ ಹನ್ಶುಖ್ ಭಾಯ್ ವರ್ಮಾ ಕೂಡ ಸೇರಿದ್ದಾರೆ.
ಸುಪ್ರೀಂ ಕೋರ್ಟ್ನ ನ್ಯಾ.ಎಂ.ಆರ್.ಶಾ ಮತ್ತು ನ್ಯಾ.ಸಿ.ಟಿ.ರವಿಕುಮಾರ್ ನೇತೃತ್ವದ ನ್ಯಾಯಪೀಠ ಈ ಬಗ್ಗೆ ಆದೇಶ ನೀಡಿದ್ದು, “ಗುಜರಾತ್ ರಾಜ್ಯ ನ್ಯಾಯಾಂಗ ಸೇವಾ ನಿಯಮ 2005ರ ಅನ್ವಯ 68 ನ್ಯಾಯಾಧೀಶರಿಗೆ ನೀಡಲಾಗಿರುವ ಪದೋನ್ನತಿಯು ನಿಯಮಕ್ಕೆ ವಿರುದ್ಧವಾಗಿದೆ. ಹೀಗಾಗಿ, ಪದೋನ್ನತಿ ಪಟ್ಟಿಗೆ ತಡೆಯಾಜ್ಞೆ ನೀಡುತ್ತಿದ್ದೇವೆ. ಪದೋನ್ನತಿಗೊಂಡ ನ್ಯಾಯಾಧೀಶರನ್ನು ಮೊದಲು ಯಾವ ಹುದ್ದೆಗಳಲ್ಲಿ ನಿಯುಕ್ತಿಯಾಗಿದ್ದರೋ, ಅಲ್ಲಿಗೇ ತೆರಳಿ ಕರ್ತವ್ಯ ಮುಂದುವರಿಸಬೇಕು. ಬಡ್ತಿ ವಿಚಾರ ನ್ಯಾಯಪೀಠದ ನಿರ್ದೇಶನಗಳಿಗೆ ವಿರುದ್ಧವಾಗಿದೆ” ಎಂದು ಹೇಳಿದೆ.
ರವಿಕುಮಾರ್ ಮೆಹ್ತಾ ಮತ್ತು ಸಚಿನ್ ಪ್ರತಾಪ್ ರಾಯ್ ಮೆಹ್ತಾ ಎಂಬ ಇಬ್ಬರು ಬಡ್ತಿ ಆದೇಶ ಪ್ರಶ್ನೆ ಮಾಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬಳಿಕ ನ್ಯಾಯಪೀಠ ಈ ತೀರ್ಪು ನೀಡಿದೆ. ಗಮನಾರ್ಹ ಅಂಶವೆಂದರೆ ನ್ಯಾ.ಎಂ.ಆರ್.ಶಾ ಮೇ 15ರಂದು ನಿವೃತ್ತಿಯಾಗಲಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.