ಸಿದ್ದರಾಮಯ್ಯ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ ಮಠಾಧೀಶರು

ರಾಜಕೀಯ ಸ್ವಾರ್ಥಕ್ಕಾಗಿ ಧರ್ಮ ಗುರುಗಳ ನಿಂದನೆ ತರವಲ್ಲ

Team Udayavani, Mar 26, 2022, 3:35 PM IST

1-ffssdfds

ಡಾ.ಮಹದೇವ ಶ್ರೀಗಳು, ಕನ್ನೂರು ಸೋಮನಾಥ ಶ್ರೀಗಳು

ವಿಜಯಪುರ: ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಅನಗತ್ಯವಾಗಿ ಧರ್ಮ ಗುರುಗಳನ್ನು ನಿಂದಿಸಿರುವ ಹಿರಿಯ ರಾಜಕೀಯ ನಾಯಕ ಸಿದ್ಧರಾಮಯ್ಯ ಅವರಿಗೆ ಇದು ಶೋಭೆ ತರುವುದಿಲ್ಲ ಎಂದು ಆಲಗೂರ ಬಬಲೇಶ್ವರದ ಪಂಚಮಸಾಲಿ ಪೀಠದ ಜಗದ್ಗುರು ಡಾ.ಮಹಾದೇವ ಶ್ರೀಗಳು ಕಿಡಿ ಕಾರಿದ್ದಾರೆ.

ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಾಜಿ ಮುಖಮಂತ್ರಿಯಾಗಿ, ರಾಜ್ಯದ ಹಿರಿಯ ರಾಜಕೀಯ ನಾಯಕರಾದ ಸಿದ್ಧರಾಮಯ್ಯ ಅವರಿಂದ ಇಂಥ ಹೇಳಿಕೆ ಬಂದಿವುದು ಸರಿಯಲ್ಲ ಎಂದರು.

ತಮ್ಮ ರಾಜಕೀಯ ಲಾಭಕ್ಕಾಗಿ, ಓಲೈಕೆ ರಾಜಕಾರಣಕ್ಕಾಗಿ ಮಠಾಧೀಶರನ್ನು ಅವಹೇಳನ ಮಾಡುವ, ನಿಂದಿಸುವ, ಅಪಹಾಸ್ಯ ಮಾಡುವುದರಿಂದ ಸಿದ್ಧರಾಮಯ್ಯ ಅವರಿಗೆ ರಾಜಕೀಯವಾಗಿ ಲಾಭವಾಗುವುದಿಲ್ಲ. ಇಂಥ ವರ್ತನೆ ಯಾರಿಂದಲೂ ಆಗಬಾರದು ಎಂದು ಸದನದಲ್ಲಿ ಸಿದ್ಧರಾಮಯ್ಯ ಹೇಳಿಕೆಗೆ ಆಕ್ಷೇಕಿಸಿದರು.

ಮಠಾಧೀಶರು ಎಂದರೆ ಕೇವಲ ವ್ಯಕ್ತಿಯಾಗಿರದೇ ಸಮಾಜದ ಗುರು ಸ್ಥಾನದಲ್ಲಿ ಗೌರಯುತ ಸ್ಥಾನದಲ್ಲಿ ಇರುತ್ತಾರೆ. ಗುರು ಸ್ಥಾನದಲ್ಲಿರುವ ಮಠಾಧೀಶರ ಬಗ್ಗೆ ಲಘುವಾಗಿ ಹಾಗೂ ಮಠಾಧೀಶರು ಧರಿಸುವ ವಸ್ತ್ರಗಳ ಬಗ್ಗೆ ರಾಜಕೀಯ ಉದ್ದೇಶದ ಓಲೈಕೆಗಾಗಿ ಅವಹೇಳನ ರೀತಿಯಲ್ಲಿ ಮಾತನಾಡುವುದು ಖಂಡನಾರ್ಹ ಎಂದರು.

ಹೋರಾಟದ ಎಚ್ಚರಿಕೆ

ಸಿದ್ದರಾಮಯ್ಯ ಅನಗತ್ಯವಾಗಿ ಮಠಾಧೀಶರನ್ನು ಬೀದಿಗೆ ಎಳೆಯುವ ಕೆಲಸ ಮಾಡಿದ್ದಾರೆ. ಇವರ ವರ್ತನೆ ಹೀಗೇ ಮುಂದುವರೆದರೆ ಬೀದಿಗಿಳಿದು ಹೋರಾಡಬೇಕಾಗುತ್ತದೆ ಎಂದು ಕನ್ನೂರು ಮಠದ ಸೋಮನಾಥ ಶ್ರೀಗಳು ಆಕ್ರೋಶ ಹೊರ ಹಾಕಿದ್ದಾರೆ.

ಈ ಹಿಂದೆ ವೀರಶೈವ ಲಿಂಗಾಯತ ಧರ್ಮ ಒಡೆಯುವ ಹುನ್ನಾರ ನಡೆಸಿದ್ದ ಸಿದ್ದರಾಮಯ್ಯ ಅವರಿಂದ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ವಯಕ್ತಿಕವಾಗಿ ಅವರೇ ಹಿನ್ನಡೆ ಅನುಭವಿಸಿರುವ ಕಹಿ ಅನುಭವ ಇದೆ. ಹೀಗಿದ್ದರೂ ಮಠಾಧೀಶರಿಗೆ ನೋವುಂಟು ಮಾಡುವಂತೆ ಹೇಳಿಕೆ ನೀಡಿರುವುದು ಸರಿಯಲ್ಲ ಎಂದರು.

ಜಾತಿ-ಮತ ಎಣಿಸದೇ ವೀರಶೈವ-ಲಿಂಗಾಯತ ಮಠಗಳು ಅಕ್ಷರ-ಅನ್ನ ದಾಸೋಹ ಮಾಡಿದ್ದರಿಂದ ಇಂದು ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಗೆ ಕಾರಣವಾಗಿದೆ. ವೀರಶೈವ ಮಠಗಳು ಇರಿದ್ದರೆ ರಾಜ್ಯದ ಜನರು ಶೇ.90 ರಷ್ಟು ಇನ್ನೂ ಅನಕ್ಷರಸ್ತರಾಗಿ ಇರುತ್ತಿದ್ದರು. ಇದನ್ನು ಅವರ ಜೊತೆಗಾರರೇ ಆಗಿದ್ದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರೇ ಹೇಳಿದ್ದಾರೆ ಎಂದು ನೆನಪಿಸಿದರು.

ಸಮಾಜಮುಖಿ ಕೆಲಸ ಮಾಡುವ ಮಠಾಧೀಶರು, ಮಠಗಳ ಬಗ್ಗೆ ಸಿದ್ಧರಾಮಯ್ಯ ಅವರು ಅನಗತ್ಯವಾಗಿ ಹಗುರ ಮಾತುಗಳನ್ನಾಡುವುದನ್ನು ಇನ್ನಾದರೂ ಬಿಡಬೇಕು. ಇಲ್ಲವಾದಲ್ಲಿ ಭಕ್ತರ ನೇತೃತ್ವದಲ್ಲೇ ಸಿದ್ಧರಾಮಯ್ಯ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಟಾಪ್ ನ್ಯೂಸ್

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

vidhana-Soudha

Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

vidhana-Soudha

Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

1-ree

Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್‌ಪಾಲ್‌, ರಶೀದ್‌ ಸಂಸದರಾಗಿ ಪ್ರಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.