![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 24, 2020, 6:00 AM IST
ರವಿವಾರದ ಸಂಪೂರ್ಣ ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶನಿವಾರ ಸಂಜೆ 7 ಗಂಟೆಯಿಂದ ನಿಷೇಧಾಜ್ಞೆ ಜಾರಿಗೊಂಡಿದ್ದು, ನಗರದ ಎಂ.ಜಿ. ರಸ್ತೆ ನಿರ್ಜನವಾಗಿತ್ತು.
ಬೆಂಗಳೂರು: ರಾಜ್ಯದಲ್ಲಿ ರವಿವಾರ ಸಂಪೂರ್ಣ ಲಾಕ್ ಡೌನ್ ಇರಲಿದೆ. 4ನೇ ಹಂತದ ಲಾಕ್ಡೌನ್ ಜಾರಿ ಸಂದರ್ಭ ಪ್ರತೀ ರವಿವಾರ ಸಂಪೂರ್ಣ ಬಂದ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಹೀಗಾಗಿ ಶನಿವಾರ ಸಂಜೆ 7ರಿಂದ ಸೋಮ ವಾರ ಬೆಳಗ್ಗೆ ವರೆಗೆ ಸಂಪೂರ್ಣ ನಿರ್ಬಂಧವಿರುತ್ತದೆ. ಅಗತ್ಯ ವಸ್ತು, ಸೇವೆ ಹೊರತುಪಡಿಸಿ ಬೇರೆ ಯಾವುದೇ ಸೇವೆ ಇರುವುದಿಲ್ಲ.
ಸಾರ್ವಜನಿಕರ ಓಡಾಟ ನಿಷೇಧಿಸ ಲಾಗಿದ್ದು, ಲಾಕ್ಡೌನ್ ಉಲ್ಲಂಘಿಸಿ ಸಂಚರಿಸುವ ದ್ವಿಚಕ್ರ ವಾಹನ ಮತ್ತು ಕಾರು ಸಹಿತ ವಾಹನಗಳನ್ನು ಜಫ್ತಿ ಮಾಡುವುದಾಗಿಯೂ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ನಿಷೇಧಾಜ್ಞೆ ಜಾರಿಯಲ್ಲಿ ಇರುವುದರಿಂದ ಯಾವುದೇ ರೀತಿಯ ಓಡಾಟಕ್ಕೂ ಅವಕಾಶ ಇರುವುದಿಲ್ಲ.ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ಗಳು, ರೈಲು ಸಂಚಾರವೂ ಇರುವು ದಿಲ್ಲ, ಆಟೋ, ಟ್ಯಾಕ್ಸಿ ಸಂಚಾರಕ್ಕೂ ಅವಕಾಶವಿಲ್ಲ. ಪೂರ್ವ ನಿಯೋಜಿತ ಮದುವೆಗಳಿಗೆ ಮಾತ್ರ ಅವಕಾಶವಿದ್ದು, 50 ಜನರಿಗೆ ಮಾತ್ರ ಪ್ರವೇಶ. ಉಳಿದಂತೆ ಯಾವುದೇ ಸಭೆ ಸಮಾರಂಭಗಳಿಗೆ ಅವಕಾಶವಿಲ್ಲ. ಹೊಟೇಲ್ಗಳಲ್ಲಿ ಪಾರ್ಸೆಲ್ ಸೇವೆಗೆ ಮಾತ್ರ ಅವಕಾಶ ಇರಲಿದೆ.
ಮದ್ಯ ಮಾರಾಟ ಸಂಪೂರ್ಣ ಬಂದ್ ಇರಲಿದ್ದು, ಔಷಧ ಅಂಗಡಿ, ಆಸ್ಪತ್ರೆ, ಪತ್ರಿಕೆ ವಿತರಣೆಗೆ ವಿನಾ ಯಿತಿ ನೀಡಲಾಗಿದೆ. ದಿನಸಿ, ಹಾಲು, ಹಣ್ಣು-ತರಕಾರಿ, ಮಾಂಸ, ಮೀನು ಮಾರಾಟಕ್ಕೆ ಅವಕಾಶ ಕೊಡ ಲಾಗಿದೆಯಾದರೂ ಸ್ಥಳೀಯ ಸಂಸ್ಥೆಗಳ ನಿರ್ಧಾರಕ್ಕೆ ಬಿಡಲಾಗಿದೆ.
ಜಿಲ್ಲಾ ಮತ್ತು ರಾಜ್ಯ ಗಡಿಗಳನ್ನು ಸಂಪೂರ್ಣ ಬಂದ್ ಮಾಡಲು ಆದೇಶಿಸಲಾಗಿದ್ದು, ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ.
ಸೋಮವಾರ ಸರಕಾರಿ ರಜಾ ದಿನವಾದ್ದರಿಂದ ಕೋವಿಡ್ ತುರ್ತು ಸೇವೆಯಲ್ಲಿ ನಿರತರಾಗಿರುವ ಇಲಾಖೆ ಗಳನ್ನು ಹೊರತುಪಡಿಸಿ ಇತರ ಇಲಾಖೆಗಳ ನೌಕರರಿಗೆ ರವಿವಾರ ಮತ್ತು ಸೋಮವಾರ (ರಮ್ಜಾನ್)ಎರಡು ದಿನ ರಜೆ ದೊರೆತಂತಾಗಿದೆ.
ಏನಿರುತ್ತದೆ?
ಹಣ್ಣು-ತರಕಾರಿ, ಹಾಲು, ಮಾಂಸ, ಔಷಧ ಅಂಗಡಿ, ಆಸ್ಪತ್ರೆ,ಹೊಟೇಲ್ (ಪಾರ್ಸೆಲ್ ಮಾತ್ರ)
ಏನಿರುವುದಿಲ್ಲ?
- ಬಸ್, ಆಟೋ, ಟ್ಯಾಕ್ಸಿ, ರೈಲು, ಮದ್ಯ
- ಷರತ್ತು ಅನ್ವಯ ಪೂರ್ವನಿಯೋಜಿತ ಮದುವೆಗೆ 50 ಮಂದಿಗೆ ಪ್ರವೇಶ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.