ಎಂಇಎಸ್ ಹಿಂದೆ ಅನೇಕ ಕಾಣದ ಕೈಗಳಿವೆ : ಶಾಸಕ ಅಮರೇಗೌಡ
Team Udayavani, Dec 19, 2021, 2:44 PM IST
ಕುಷ್ಟಗಿ: ನಮ್ಮ ರಾಜ್ಯದ 224 ಶಾಸಕರು ಭಾಗವಹಿಸುವ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿಯೇ ಗಮನ ಸೆಳೆಯಲು ಈ ಆಟ ಆಡುತ್ತಿದ್ದು, ಅವರ ಆಟ ಎಂದಿಗೂ ನಡೆಯದು ಎಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಎಂಇಎಸ್ ಸಂಘಟನೆ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ತಾಲೂಕು ಕ್ರೀಡಾಂಗಣದ ಆವರಣದಲ್ಲಿ ನೂತನ ಒಳಾಂಗಣ ಕ್ರೀಡಾಂಗಣದ ಲೋಕಾರ್ಪಣೆಗೊಳಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಬೇರೆ ಸಮಯದಲ್ಲಿ ತೆಪ್ಪಗೆ ಇರುವ ಎಂಇಎಸ್ ಸಂಘಟನೆ, ಅಧಿವೇಶನದ ಸಂಧರ್ಭದಲ್ಲಿ ಕಿಡಕೇಡಿತನ ಪ್ರದರ್ಶಿಸುತ್ತಿದೆ. ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಈ ಪ್ರಕರಣದ ಬಗ್ಗೆ ಆ ಪಕ್ಷವನ್ನು ಧೂಷಿಸುವುದು ಸರಿಯಲ್ಲ. ಈ ಹಿಂದೆ ಎಲ್ಲಾ ಸರ್ಕಾರದ ಅವಧಿಯಲ್ಲೂ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡಾಟಿಕೆ ಮೆರೆದ ಇತಿಹಾಸವಿದೆ. ಬೆಳಗಾವಿ ತಮ್ಮದಾಗಿಸಲು ಪದೇ ಪದೇ ಮಹಾಮೇಳವ ಮೂಲಕ ಕಿಡಿಗೇಡಿತನ ಕೃತ್ಯಕ್ಕೆ ಇಳಿದಿದೆ. ಈ ಸಂಘಟನೆಯ ಹಿಂದೆ ಅನೇಕ ಕಾಣದ ಕೈಗಳಿವೆ ಎಂದರು.
ಎಂಇಎಸ್ ಏನೇ ಆಟವಾಡಲಿ ಅದೇನು ನಡೆಯದು. ನಮ್ಮ ಪೊಲೀಸ್ ಇಲಾಖೆ ಪ್ರಖರವಾಗಿದ್ದು ನಿಷ್ಠೆಯಿಂದ ಕೆಲಸ ನಿರ್ವಹಿಸುತ್ತಿದೆ. ಅಂತವರಿಗೆ ಉಗ್ರ ಶಿಕ್ಷೆ ವಿಧಿಸಲು ಸರಕಾರಕ್ಕೆ ಒತ್ತಾಯಿಸುತ್ತೇನೆ. ಬೆಳಗಾವಿಯಲ್ಲಿ ದೇಶಭಕ್ತ ಸಂಗೊಳ್ಳಿ ರಾಯಣ್ಣ ಮೂರ್ತಿ ವಿರೂಪಗೊಳಿಸಿವ ನೀಚತನದ ಪರಮಾವಧಿಯಾಗಿದೆ. ಸದರಿ ಕಿಡಗೇಡಿಗಳನ್ನು ಪೊಲೀಸರು ಬಂಧಿಸಿರುವ ಬಗ್ಗೆ ಮಾಧ್ಯಮದ ಮೂಲಕ ತಿಳಿದುಕೊಂಡಿರುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್ ತಂಗಡಗಿ
Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ
Minister; ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ
Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.