![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Jan 3, 2021, 6:06 PM IST
ಶಿವಮೊಗ್ಗ: ಸಚಿವ ಸಂಪುಟಕ್ಕೆ ಸದ್ಯಕ್ಕೆ ಸರ್ಜರಿಯಿಲ್ಲ, ಈ ಕುರಿತು ಚರ್ಚೆಯೂ ಕೂಡ ನಡೆದಿಲ್ಲ. ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ರಾಜ್ಯ ವಿಶೇಷ ಸಭೆ ಬಳಿಕ ಮಾಧ್ಯಮದೊಮದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಅವರೇ ರಾಜ್ಯದ ನಾಯಕರು, ಅವರೇ ಸಿಎಂ. ಸಂಪುಟ ಸರ್ಜರಿ ಬಗ್ಗೆ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಯತ್ನಾಳ್ ಕುರಿತು ಕೇಳಿದ ಪ್ರಶ್ನೆಗೆ ಗರಂ ಆದ ಅರುಣ್ ಸಿಂಗ್, ಯತ್ನಾಳ್ ಯಾರು ? ಅವರ ಹೇಳಿಕೆ ಬಗ್ಗೆ ಕೇಂದ್ರ ಶಿಸ್ತು ಸಮಿತಿ ಗಮಹನಹರಿಸುತ್ತಿದೆ ಎಂದು ತಿಳಿಸಿದರು.
ಶಿವಮೊಗ್ಗನಗರದ ಹೊರವಲಯದ ಪ್ರೇರಣ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಣಿ ವಿಶೇಷ ಸಭೆ ಮುಕ್ತಾಯವಾಗಿದ್ದು, ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಹೊರನಡೆದಿದ್ದಾರೆ.
ಕಳೆದ ಎರಡು ದಿನಗಳಿಂದ ಶಿವಮೊಗ್ಗದಲ್ಲಿ ಬೀಡು ಬಿಟ್ಟಿದ್ದ ರಾಜ್ಯ ಬಿಜೆಪಿ ಪಕ್ಷದ ಪ್ರಮುಖ ನಾಯಕರು, ಸಭೆ ಮುಗಿಸಿ ಬೆಂಗಳೂರು ಕಡೆ ಪ್ರಯಾಣ ಬೆಳಸಿದ್ದಾರೆ.
ಇದನ್ನೂ ಓದಿ: ಹುಟ್ಟೂರಿನಲ್ಲಿ ಸಂಗೀತ ಲೋಕ ಸೃಷ್ಟಿಸಿದ ರವಿ ಬಸ್ರೂರ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.