![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 24, 2023, 4:21 PM IST
ಬೆಂಗಳೂರು : 15 ನೇ ವಿಧಾನಸಭೆ ಅಧಿವೇಶನಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ವಿಧಾನಸಭೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಪರೂಪಕ್ಕೆ ಎಂಬಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ವೈಮನಸ್ಸು ಮರೆತು ಹೋಗಳಿ ಗಮನ ಸೆಳೆದರು.
ಯತ್ನಾಳ್ ಮಾತನಾಡಿ,”ನಾನು ಆಡಳಿತ ಪಕ್ಷದಲ್ಲಿರುವ ವಿಪಕ್ಷ ಸದಸ್ಯನಾಗಿ ಕೆಲಸ ಮಾಡಿದೆ.ಯಡಿಯೂರಪ್ಪ ಮತ್ತು ನಮಗೆ ವೈಮನಸ್ಸು ಆಗಿರಬಹುದು ಆದರೆ ಅವರು ನಮ್ಮ ಪಕ್ಷದ ಹಿರಿಯರು. ಕರ್ನಾಟಕದಲ್ಲಿ ಬಿಜೆಪಿ ಕಟ್ಟುವುದರಲ್ಲಿ ಅನಂತ್ ಕುಮಾರ್ ಮತ್ತು ಯಡಿಯೂರಪ್ಪ ಅವರು ಕೃಷ್ಣ ಮತ್ತು ಅರ್ಜುನರಂತೆ ಕೆಲಸಮಾಡಿದರು” ಎಂದರು.
”ಇಂದು ನಾವೆಲ್ಲಾ ಶಾಸಕರಾಗಿದ್ದೇವೆ. ನನ್ನ ಹಣೆಬರಹದಲ್ಲಿ ಶ್ರೇಷ್ಠ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವನಾಗುವ ಅವಕಾಶ ಸಿಕ್ಕಿತು. ಆವಾಗ ಅನಂತ್ ಕುಮಾರ್, ಪ್ರಮೋದ್ ಮಹಾಜನ್ , ಬಸವರಾಜ್ ಪಾಟೀಲ್ ಸೇಡಂ, ಯಡಿಯೂರಪ್ಪ ಅವರಿದ್ದರು” ಎಂದರು.
”ಈ ಐದು ವರ್ಷಗಳಲ್ಲಿ ವಿಜಯಪುರದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ಮಾಡಲು ಸಿಎಂ ಬಸವರಾಜ್ ಬೊಮ್ಮಾಯಿ, ಅನೇಕ ಸಚಿವರು ಅವಕಾಶ ಮಾಡಿಕೊಟ್ಟರು” ಎಂದು ಧನ್ಯವಾದ ತಿಳಿಸಿದರು.
”ಆಯಾ ರಾಮ್.. ಗಯಾ ರಾಮ್… ಆಗುತ್ತದೆ. ಆ ಬದಿಯಲ್ಲಿದ್ದವರು ಈ ಬದಿಗೆ ಬರುತ್ತಾರೆ. ಅದರಲ್ಲಿ ಯಡಿಯೂರಪ್ಪ ಅವರು ಗಟ್ಟಿ ನಿಂತು ಬಿಟ್ಟರು. ಅನೇಕ ಶಾಸಕರು ನಾನು ನಿಲ್ಲುವುದಿಲ್ಲ, ನನ್ನ ಮಗನನ್ನು ತಯಾರು ಮಾಡಿದ್ದೇನೆ ಅನ್ನುತ್ತಿದ್ದರು. ಈಗ ಡೈಲಾಗ್ ಚೇಂಜ್ ಮಾಡಿದ್ದು , ಜನ ಕೇಳುತ್ತಿಲ್ಲ ನೀವೇ ನಿಲ್ಲಬೇಕು ಆನ್ನುತ್ತಿದ್ದಾರೆ ಎಂದು ಹಾಸ್ಯ ಚಟಾಕಿ ಹಾರಿಸಿದರು. ಕೆಲವರು ಶಾಸಕರಾಗಿಯೇ ಸಾಯಬೇಕು ಅನ್ನುವ ತತ್ವಕ್ಕೆ ಬದ್ಧರಾಗಿ ಬಿಟ್ಟಿದ್ದಾರೆ” ಎಂದು ಟಾಂಗ್ ನೀಡಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.