ವಿಪಕ್ಷವಿಲ್ಲದೆ ಬಜೆಟ್‌ಗೆ ಉತ್ತರಿಸುವ ಸ್ಥಿತಿ ಇದೇ ಮೊದಲು

ಬಿಜೆಪಿಗೆ ಬೇಕಾಗಿದ್ದಾರೆ ವಿಪಕ್ಷ ನಾಯಕ

Team Udayavani, Jul 23, 2023, 7:15 AM IST

vidhana soudha

ಬೆಂಗಳೂರು: ಚುನಾವಣೆ ಮುಗಿದು ಎರಡೂವರೆ ತಿಂಗಳಾದರೂ ಹಾಗೂ ಬಜೆಟ್‌ ಅಧಿವೇಶನ ಕಳೆದರೂ ಬಿಜೆಪಿಗೆ ಪ್ರತಿಪಕ್ಷದ ನಾಯಕ ಸಿಗಲೇ ಇಲ್ಲ. ನೂತನ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ ಈ ವಿಧಾನ ಸಭೆಯ ಮೊದಲ ಅಧಿವೇಶನ ಹಾಗೂ ಈಗತಾನೇ ಮುಗಿದ ಬಜೆಟ್‌ ಅಧಿವೇಶನ ಪ್ರತಿಪಕ್ಷದ ನಾಯಕನಿಗೆ ಮೀಸಲಾದ ಖಾಲಿ ಕುರ್ಚಿಯೊಂದಿಗೆ ಅಂತ್ಯಗೊಂಡಿದೆ.

ಬಜೆಟ್‌ ಅಧಿವೇಶನ ಆರಂಭಕ್ಕೂ (ಜುಲೈ 3) ಮುನ್ನವೇ ಪ್ರತಿಪಕ್ಷದ ನಾಯಕನ ಆಯ್ಕೆಯಾಗ ಬಹುದೆಂದು ಆಕಾಂಕ್ಷಿಗಳು ನಿರೀಕ್ಷಿಸಿದ್ದರು. ಆದರೆ ಬಜೆಟ್‌ ಮಂಡನೆ ಬಳಿಕ ಅಧಿವೇಶನ ಮುಗಿದರೂ ಆ ಬಗ್ಗೆ ಕಿಂಚಿತ್ತು ಸುದ್ದಿ ಇಲ್ಲದೆ ತಣ್ಣಗಾಯಿತು. ವಿಶೇಷವೆಂದರೆ ಪ್ರತಿಪಕ್ಷದ ನಾಯಕನ ವಿಚಾರ ಆಡಳಿತರೂಢ ಕಾಂಗ್ರೆಸ್‌ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಸದನದೊಳಗೆ ಹಲವು ಬಾರಿ ಪ್ರಸ್ತಾಪವಾಗಿ ಪರಸ್ಪರ ಟೀಕೆಗಳಲ್ಲೇ ಮುಳುಗಿದರು. ಇದೊಂದು ರೀತಿ ಬಿಜೆಪಿಗೆ ಮುಜುಗರದ ಸಂಗತಿಯಾಯಿತು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಹಿರಿಯ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಸುರೇಶ್‌ಕುಮಾರ್‌ ಮತ್ತು ಅರವಿಂದ ಬೆಲ್ಲದ್‌ ಮತ್ತಿತರರ ಹೆಸರು ಚಲಾವಣೆಗೆ ಬಂದರೂ ಯಾವ ಹೆಸರಿಗೂ ಅದೃಷ್ಟ ಒಲಿಯಲಿಲ್ಲ. ವಿಧಾನಸಭೆಯಲ್ಲಿ 66 ಮಂದಿ ಶಾಸಕರನ್ನು ಹೊಂದಿರುವ ಬಿಜೆಪಿಗೆ ಸಹಜವಾಗಿಯೇ ಪ್ರತಿಪಕ್ಷದ ಸ್ಥಾನ ದೊರೆಯುತ್ತದೆ. ಆದರೆ ಆ ನಾಯಕರ ಆಯ್ಕೆಗೆ ಬಿಜೆಪಿ ವರಿಷ್ಠರು ಏಕೆ ಇಷ್ಟೊಂದು ವಿಳಂಬ ಮಾಡುತ್ತಿರುವುದು- ಮೀನಾಮೇಷ ಎಣಿಸುತ್ತಿರುವುದು ಮಾತ್ರ ರಾಜ್ಯ ಬಿಜೆಪಿ ನಾಯಕರನ್ನು ತುದಿಗಾಲ ಮೇಲೆ ನಿಲ್ಲಿಸಿದೆ.

ಬಿಜೆಪಿ ವರಿಷ್ಠರ ಧೋರಣೆಯಿಂದ ಒಳಗೊಳಗೆ ಅಸಮಾಧಾನದಲ್ಲಿರುವ ರಾಜ್ಯ ಬಿಜೆಪಿ ನಾಯಕರು ಹಾಗೂ ಪ್ರತಿಪಕ್ಷದ ನಾಯಕನ ಸ್ಥಾನದ ಆಕಾಂಕ್ಷಿಗಳು ಈಗ ಯಾವುದರ ಬಗ್ಗೆಯೂ ನಿರೀಕ್ಷೆಇಟ್ಟುಕೊಳ್ಳದೇ ಮೌನಕ್ಕೆ ಶರಣಾಗಿದ್ದಾರೆ. ರಾಜ್ಯದಲ್ಲಿ ಚುನಾವಣೆಯಲ್ಲಿ ಪಕ್ಷ ಸೋತಿರಬಹುದು, ಆದರೆ ಪಕ್ಷ ದುರ್ಬಲವಾಗಿಲ್ಲ, ಸಂಘಟನೆ ವಿಷಯದಲ್ಲಿ ಸಾಕಷ್ಟು ಶಕ್ತಿಯುತವಾಗಿದೆ. ಇಷ್ಟಾದರೂ ದಿಲ್ಲಿ ವರಿಷ್ಠರಿಗೆ ರಾಜ್ಯ ಬಿಜೆಪಿ ನಾಯಕರ ಮೇಲೆ ಸಾಕಷ್ಟು ಸಿಟ್ಟಿದೆ.

ವರಿಷ್ಠರು ರಾಜ್ಯದಲ್ಲಿ ಈ ಸಲ ಬಿಜೆಪಿಗೆ ಮತ್ತೆ ಅಧಿಕಾರ ಸಿಕ್ಕೇ ಸಿಗುತ್ತದೆಂಬ ನಿರೀಕ್ಷೆಯ ಲ್ಲಿದ್ದರು. ಅದೇ ರೀತಿ ರಾಜ್ಯದ ಮುಂಚೂಣಿ ನಾಯಕರು ವರಿಷ್ಠರಿಗೆ ಪಕ್ಷದ ಗೆಲುವಿನ ಲೆಕ್ಕಾಚಾರ ಕೊಟ್ಟಿದ್ದರು. ಅಂತಿಮವಾಗಿ ಎಲ್ಲವೂ ಉಲ್ಟಾ ಆಗಿರುವುದರಿಂದ ಆ ಸಿಟ್ಟಿನಿಂದ ವರಿಷ್ಠರು ಹೊರ ಬಂದಿಲ್ಲ. ಜತೆಗೆ ರಾಜ್ಯದ ನಾಯಕರು ದಿಲ್ಲಿಗೆ ತೆರಳಿ ಭೇಟಿ ಮಾಡುವ ಧೈರ್ಯವಂತೂ ಇಲ್ಲವೇ ಇಲ್ಲ. ಹೀಗಾಗಿ ಯಾರಿಗೂ ಬೇಡವಾದ ಸ್ಥಿತಿ ರಾಜ್ಯ ಬಿಜೆಪಿ ನಾಯಕರ ಪಾಡಾಗಿದೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಹರಿದಾಡುತ್ತಿವೆ.

ಪ್ರತಿಪಕ್ಷದ ನಾಯಕನಾಗಬೇಕೆಂದು ಕೊಂಡವರಿಗೆ ಆ ಜವಾಬ್ದಾರಿ ಕೊಡಲು ಇಷ್ಟವಿಲ್ಲ, ಈಗಾಗಲೇ ನೀಡಿದ್ದ ಜವಾಬ್ದಾರಿಯಿಂದ ಪಕ್ಷ ದೊಡ್ಡ ಪೆಟ್ಟು ತಿಂದಿರುವುದರಿಂದ ಅಂತಹವರ ಮೇಲೆ ಪಕ್ಷದ ಯಾವುದೇ ನಿರೀಕ್ಷೆಗಳನ್ನಿಟ್ಟುಕೊಂಡಿಲ್ಲ. ಮತ್ತೂಂದೆಡೆ ವರಿಷ್ಠರು ಜವಾಬ್ದಾರಿ ಕೊಡಲು ಬಯಸಿರುವ ಶಾಸಕರು ಸಮರ್ಥವಾಗಿ ನಿರ್ವಹಣೆ ಮಾಡುತ್ತಾರೆಯೇ ಎಂಬ ಅನುಮಾನ ಕೂಡ ಇದೆ. ಹೀಗಾಗಿ ಸೂಕ್ತ ವ್ಯಕ್ತಿಗಳು ಸಿಗದ ಹಿನ್ನೆಲೆಯಲ್ಲಿ ಬಿಜೆಪಿಗೆ ಪ್ರತಿಪಕ್ಷ ನಾಯಕರು ಬೇಕಾಗಿದ್ದಾರೆ ಎಂಬ ಸ್ಥಿತಿ ತಲುಪಿದೆ.

ಪೀಠಕ್ಕೆ ಗೌರವ ಕೊಡದಿದ್ದಾಗ ಸ್ಪೀಕರ್‌ ಅವರು ವಿವೇಚನೆ ಬಳಸಿ ತೀರ್ಮಾನಿಸಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಬಜೆಟ್‌ನಲ್ಲಿಯೂ ಹಲವು ಭರವಸೆಗಳನ್ನು ಈಡೇರಿಸಲು ಹಣ ಮೀಸಲಿಟ್ಟಿ ದ್ದೇವೆ. ಇದರ ಬಗ್ಗೆ ಎಲ್ಲಾ ಚರ್ಚಿಸಬೇಕಾಗುತ್ತದೆ ಎಂಬ ಕಾರಣಕ್ಕೆ ರಾಜಕೀಯ ಲಾಭಕ್ಕಾಗಿ ವಿರೋಧಿಸುತ್ತಿದ್ದಾರೆ.
-ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.