ತಿಹಾರ್ ಜೈಲಿನಲ್ಲಿ ಕೂದಲು ಕತ್ತರಿಸುವಾಗ ಕ್ಷೌರಿಕನ ಕತ್ತರಿ ಬಳಸಿ ದಾಳಿ !
Team Udayavani, Dec 12, 2021, 1:02 PM IST
ತಿಹಾರ್, ಕ್ಷೌರಿಕನ ಕತ್ತರಿ, ದಾಳಿ
ತಿಹಾರ್ : ಇಲ್ಲಿನ ಜೈಲಿನ ಕೈದಿಯೊಬ್ಬರು ತಮ್ಮ ವಾರ್ಡ್ನಲ್ಲಿ ಕ್ಷೌರ ಮಾಡುವಾಗ ಇತರ ಇಬ್ಬರು ಕೈದಿಗಳು ಕ್ಷೌರಿಕನ ಕತ್ತರಿ ಬಳಸಿ ದಾಳಿ ಮಾಡಿದ್ದಾರೆ ಎಂದು ಜೈಲು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಜೈಲು ಅಧಿಕಾರಿಗಳ ಪ್ರಕಾರ, ಡಿಸೆಂಬರ್ 10 ರಂದು ತಿಹಾರ್ನ ಸೆಂಟ್ರಲ್ ಜೈಲ್ ನಂ. 8 ರೊಳಗೆ ಇಬ್ಬರು ಕೈದಿಗಳು ತಮ್ಮ ವಾರ್ಡ್ನಲ್ಲಿ ಕೂದಲನ್ನು ಕತ್ತರಿಸುತ್ತಿದ್ದಾಗ, ಕ್ಷೌರಿಕನ ಕತ್ತರಿ ಬಳಸಿ ಮತ್ತೊಬ್ಬ ಖೈದಿಯ ಮೇಲೆ ಏಕಾಏಕಿ ಹಲ್ಲೆ ನಡೆಸಲಾಗಿದೆ.
ಹಲ್ಲೆಗೊಳಗಾದ ಕೈದಿ ಮತ್ತು ದಾಳಿಕೋರರಲ್ಲಿ ಒಬ್ಬರು ಗಾಯಗೊಂಡರು ಮತ್ತು ತಕ್ಷಣವೇ ಜೈಲು ಸಿಬ್ಬಂದಿಯಿಂದ ಪ್ರತ್ಯೇಕಿಸಲ್ಪಟ್ಟರು. ಇಬ್ಬರು ಕೈದಿಗಳು ಗಂಭೀರವಾಗಿ ಗಾಯಗೊಂಡಿಲ್ಲ ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವರನ್ನು ಚಿಕಿತ್ಸೆಗಾಗಿ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ಕಳುಹಿಸಲಾಯಿತು, ಅಲ್ಲಿಂದ ಅದೇ ದಿನ ಅವರನ್ನು ಬಿಡುಗಡೆ ಮಾಡಿ ಮತ್ತೆ ಜೈಲಿಗೆ ಕರೆ ತರಲಾಗಿದೆ ಎಂದು ಅವರು ಹೇಳಿದರು.
ಗಾಯಾಳು ಯಾವುದೇ ದೂರು ದಾಖಲಿಸಲು ಇಚ್ಛಿಸಲಿಲ್ಲ. ಆದರೆ, ಘಟನೆಯ ಬಗ್ಗೆ ಜೈಲು ಅಧಿಕಾರಿಗಳಿಂದ ಮಾಹಿತಿ ಲಭಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.