![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Mar 16, 2022, 2:21 PM IST
ತುಮಕೂರು : ನಗರದ ಲಾಡ್ಜ್ ಒಂದರಲ್ಲಿ ಹೆಂಡತಿಯ ಕಾಲು ಕತ್ತರಿಸಿದ ಬಳಿಕ ತನಗೆ ತಾನೇ ಹೊಟ್ಟೆಗೆ ಚೂರಿ ಹಾಕಿಕೊಂಡು ಹೈಡ್ರಾಮಾ ಮಾಡಿದ ಘಟನೆ ನಗರದಲ್ಲಿ ಬುಧವಾರ ನಡೆದಿದೆ.
ಗದಗ ಮೂಲದ ಬಾಬು (34) ಎಂಬಾತ ಪತ್ನಿಯ ಕಾಲು ಕತ್ತರಿಸಿದ್ದು, ಈಗ ಪತಿ ಪೊಲೀಸರ ಅತಿಥಿ ಯಾಗಿದ್ದಾನೆ. ಕಾಲಿಗೆ ತೀವ್ರ ಪೆಟ್ಟು ಬಿದ್ದು ಗಾಯಗೊಂಡಿರುವ ಮಹಿಳೆ ಮಧುಗಿರಿ ಮೂಲದವರೆಂದು ತಿಳಿದು ಬಂದಿದೆ.
ಲಾಡ್ಜ್ ಗೆ ಬಂದಿದ್ದ ಬಾಬು ಹೆಂಡತಿಯ ಕಾಲು ಕತ್ತರಿಸಿದ್ದೇನೆ ಆಸ್ಪತ್ರೆಗೆ ಸೇರಿಸಬೇಕು, ನಾಲ್ವರು ಹುಡುಗರನ್ನು ಕಳುಹಿಸಿ ಎಂದು ಹೋಟೆಲ್ ಮಾಲೀಕರಿಗೆ ಹೇಳಿದಾಗ ಘಟನೆ ಬೆಳಕಿಗೆ ಬಂದಿದೆ.
ಕಳೆದ ನಾಲ್ಕು ವರ್ಷದ ಹಿಂದೆ ಮದುವೆಯಾಗಿದ್ದ ಬಾಬು ಬುಧವಾರ ಬೆಳಗ್ಗೆ 6 ಗಂಟೆ ವೇಳೆಗೆ ಲಾಡ್ಜ್ ಗೆ ಪತ್ನಿಯೊಂದಿಗೆ ಬಂದಿದ್ದ. ಬರುವಾಗ ಬ್ಯಾಗ್ ನಲ್ಲಿ ಮಚ್ಚು ತೆಗೆದುಕೊಂಡು ಬಂದಿದ್ದ ಎನ್ನಲಾಗಿದೆ. ಹೆಂಡತಿಯನ್ನು ಕೊಲೆ ಮಾಡುವ ಉದ್ದೇಶದಿಂದಲೇ ಲಾಡ್ಜ್ ಗೆ ಕರೆದುಕೊಂಡು ಬಂದಿದ್ದ ಎಂದು ತಿಳಿದು ಬಂದಿದೆ.ಈ ಘಟನೆ ಸಂಬಂಧ ಕೂಡಲೇ ಪೊಲೀಸರಿಗೆ ಹೋಟೆಲ್ ಮಾಲೀಕ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ತುಮಕೂರು ನಗರ ಪೊಲೀಸರು ಗಾಯಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಪತಿ ಬಾಬುವನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.