![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 6, 2020, 2:29 PM IST
ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದೇಶದಲ್ಲಿ ಸಂಚಲನ ಸೃಷ್ಟಿಸುತ್ತಿರುವಾಗಲೇ ಇದೀಗ ಮುಂಬೈನಲ್ಲಿ ಮತ್ತೊರ್ವ ನಟರ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. 44 ವರ್ಷದ ಕಿರುತೆರೆ ನಟ ಸಮೀರ್ ಶರ್ಮಾ ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನಟ ಸಮೀರ್ ಮಲಾಡ್ ನ ನೇಹಾ ಸಿಎಚ್ಎಸ್ ಕಟ್ಟಡದ ಮೊದಲ ಮಹಡಿಯಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭದ್ರತಾ ಸಿಬ್ಬಂದಿಯೊಬ್ಬರು ಇದನ್ನು ಕಂಡು ಪೋಲಿಸರಿಗೆ ಮಾಹಿತಿ ತಿಳಿಸಿದ್ದಾರೆ, ಸ್ಥಳಕ್ಕೆ ಬಂದ ಪೊಲೀಸರು ಎರಡು ದಿನದ ಹಿಂದೆ ಅವರು ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದು ಶವ ಕೊಳೆತ ಸ್ಥಿತಿಯಲ್ಲಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಿದ್ದು (ಎಡಿಆರ್) ಮತ್ತು ಅವರ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಮಲಾಡ್ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ಜಾರ್ಜ್ ಫರ್ನಾಂಡಿಸ್ ತಿಳಿಸಿದ್ದಾರೆ.
ನಟ ಸಮೀರ್ ಶರ್ಮಾ ಫೆಬ್ರವರಿಯಲ್ಲಿ ಸಿಎಚ್ ಎಸ್ ಅಪಾರ್ಟ್ ಮೆಂಟ್ ನಲ್ಲಿ ರೂಂ ಒಂದನ್ನು ಬಾಡಿಗೆಗೆ ಪಡೆದಿದ್ದರು. ಸದ್ಯ ತನಿಖೆ ಮುಂದುವರೆದಿದ್ದು, ಸಮೀರ್ ಅವರ ನಿಧನಕ್ಕೆ ನಟರಾದ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ವರುಣ್ ಧವನ್ ಸಂತಾಪ ಸೂಚಿಸಿದ್ದಾರೆ.
ಇನ್ನು ಸಮೀರ್ ಶರ್ಮಾ, ಯೇ ರಿಶ್ತೆ ಹೈ ಪ್ಯಾರ್ ಕೆ, ‘ಕಹಾನಿ ಘರ್-ಘರ್ ಕಿ, ಕ್ಯೂಂಕಿ ಸಾಸ್ ಭೀ ಕಭೀ ಬಹೂ ಥಿ…ಮುಂತಾದ ಧಾರಾವಾಹಿಗಳಿಂದ ಮನೆ ಮಾತಾಗಿದ್ದರು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.