![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 14, 2021, 7:08 PM IST
ತಮಿಳುನಾಡು: ಮಕ್ಕಳ ನಿಷ್ಕಲ್ಮಶ ಮನಸ್ಸಿಗೆ ಕನ್ನಡಿ ಹಿಡಿದಿರುವಂಥ ಪ್ರಸಂಗವೊಂದು ತಮಿಳುನಾಡಿನಲ್ಲಿ ಸಂಕ್ರಾಂತಿಯ ದಿನದಂದೇ ನಡೆದಿದೆ.
ಪೊಂಗಲ್ ಪ್ರಯುಕ್ತ ತಮಿಳುನಾಡು ಸರ್ಕಾರವು ಪಡಿತರ ಅಂಗಡಿಗಳ ಮೂಲಕ 2,500 ರೂ. ನಗದು, ಕಬ್ಬು ಮತ್ತು ಬಟ್ಟೆಬರೆಗಳನ್ನು ನೀಡುವುದಾಗಿ ಘೋಷಿಸಿತ್ತು.
ಮಾನಸಿಕ ಅಸ್ವಸ್ಥೆ ಮಗಳನ್ನು ಸಾಕುವ ಜವಾಬ್ದಾರಿಯನ್ನು ಹೊತ್ತಿರುವ ವಿಧವೆ, 70 ವರ್ಷದ ವೃದ್ಧೆ ಸುಬ್ಬುಲಕ್ಷ್ಮಿ ಹೇಗಾದರೂ ಮಾಡಿ, ಆ ಉಡುಗೊರೆ ಸ್ವೀಕರಿಸಿಕೊಂಡು ಬರೋಣ ಎಂದು ತೀರಾ ಅನಾರೋಗ್ಯದ ನಡುವೆಯೂ ನಡಿಗೆ ಆರಂಭಿಸಿದರು. ಸ್ವಲ್ಪ ದೂರ ಹೋಗುವಷ್ಟರಲ್ಲಿ ಕೈಲಾಗದೇ ಕುಸಿದುಬಿದ್ದರು.
ಇದನ್ನೂ ಓದಿ:ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ವಿಸ್ಮಯ ಕಣ್ತುಂಬಿಕೊಂಡ ಭಕ್ತರು
ಅಲ್ಲೇ ಆಟವಾಡುತ್ತಿದ್ದ ಅವಳಿ ಸಹೋದರರಾದ 9 ವರ್ಷದ ನಿತಿನ್ ಮತ್ತು ನಿತೀಶ್, ಅಜ್ಜಿಯನ್ನು ನೋಡಿ ಮರುಗಿದರು. ಜೊತೆಗೆ ಅಜ್ಜಿಯನ್ನು ಸಂತೈಸಿ ವಿಚಾರವನ್ನು ತಿಳಿದ ಸಹೋದದರು ಅಜ್ಜಿಗೆ ಪೊಂಗಲ್ ಗಿಫ್ಟ್ ಕೊಡಿಸಲೇಬೇಕೆಂದು ಪಣತೊಟ್ಟು, ಕೂಡಲೇ ತಳ್ಳುಗಾಡಿಯೊಂದನ್ನು ತಂದು, ಅದರಲ್ಲಿ ಅಜ್ಜಿಯನ್ನು ಮಲಗಿಸಿ ಗಾಡಿಯನ್ನು ತಳ್ಳುತ್ತಾ ಪಡಿತರ ಅಂಗಡಿ ತಲುಪಿಸಿದರು. ಈ ಬಾಲಕರ ಕೆಲಸಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಶ್ಲಾಘನೆ ವ್ಯಕ್ತವಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.