![1-dee](https://www.udayavani.com/wp-content/uploads/2025/02/1-dee-1-415x221.jpg)
![1-dee](https://www.udayavani.com/wp-content/uploads/2025/02/1-dee-1-415x221.jpg)
Team Udayavani, Feb 19, 2022, 2:55 PM IST
ಜಮ್ಮು-ಕಾಶ್ಮೀರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಪ್ರದೇಶದಲ್ಲಿ ಶನಿವಾರ (ಫೆ.19) ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಸೇನಾಪಡೆಯ ಪ್ರತಿದಾಳಿಯಲ್ಲಿ ಉಗ್ರನೊಬ್ಬ ಹತ್ಯೆಗೀಡಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಹಕ್ಕಿ ಜ್ವರ ಭೀತಿ: 25,000ಕ್ಕೂ ಅಧಿಕ ಕೋಳಿಗಳ ಹತ್ಯೆಗೆ ಥಾಣೆ ಜಿಲ್ಲಾಧಿಕಾರಿ ಆದೇಶ
ಶೋಪಿಯಾನ್ ಪ್ರದೇಶದಲ್ಲಿ ಉಗ್ರರ ವಿರುದ್ಧದ ಜಂಟಿ ಕಾರ್ಯಾಚರಣೆ ಸಂದರ್ಭದಲ್ಲಿ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭಗೊಂಡಿತ್ತು. ಈ ಸಂದರ್ಭದಲ್ಲಿ ಇಬ್ಬರು ಯೋಧರು ಹುತಾತ್ಮಾಗಿರುವುದಾಗಿ ಮೂಲಗಳು ಹೇಳಿವೆ.
ಹುತಾತ್ಮರಾದ ಯೋಧರನ್ನು ಸಂತೋಷ್ ಯಾದವ್ ಮತ್ತು ಚವನ್ ರೋಮಿಟ್ ತಾನಾಜಿ ಎಂದು ಗುರುತಿಸಲಾಗಿದೆ. ಇಬ್ಬರೂ ರಾಷ್ಟ್ರೀಯ ರೈಫಲ್ಸ್ (ಆರ್.ಆರ್.)1ರ ಸಿಪಾಯಿಗಳಾಗಿರುವುದಾಗಿ ಮೂಲಗಳು ತಿಳಿಸಿವೆ. ಸಾವನ್ನಪ್ಪಿರುವ ಉಗ್ರನ ಗುರುತನ್ನು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ ಜಮ್ಮು-ಕಾಶ್ಮೀರ ಪೊಲೀಸರು, ಸೇನೆ ಮತ್ತು ಅರೆಸೇನಾಪಡೆ ಜತೆಗೂಡಿ ದಕ್ಷಿಣ ಕಾಶ್ಮೀರದ ಶೋಪಿಯಾನ್ ಝೈನ್ ಪೋರಾದ ಚೆರ್ ಮಾರ್ಗ್ ಗ್ರಾಮ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿರುವುದಾಗಿ ವರದಿ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.