UCC: ರಾಜಕೀಯ ದಾಳ ಉರುಳಿಸಿತೇ ಕೇಂದ್ರ ಸರಕಾರ?


Team Udayavani, Jun 16, 2023, 5:11 AM IST

UCC

ದೇಶದಲ್ಲಿ ಕಳೆದೊಂದು ದಶಕದಿಂದೀಚೆಗೆ ತೀವ್ರ ಚರ್ಚೆಗೀಡಾಗಿರುವ ಸಮಾನ ನಾಗರಿಕ ಸಂಹಿತೆ(ಯುಸಿಸಿ) ಜಾರಿ ವಿಷಯ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕೇಂದ್ರದಲ್ಲಿನ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ನೇತೃತ್ವ ವಹಿಸಿರುವ ಬಿಜೆಪಿ ಯುಸಿಸಿ ಜಾರಿಗೆ ಈ ಹಿಂದಿನಿಂದಲೂ ಒಲವು ತೋರುತ್ತಲೇ ಬಂದಿದೆ. ಬಿಜೆಪಿ ತನ್ನ ಚುನಾವಣ ಪ್ರಣಾಳಿಕೆಗಳಲ್ಲಿ ಯುಸಿಸಿ ಜಾರಿಯನ್ನು ಪ್ರಸ್ತಾವಿಸುತ್ತಲೇ ಬಂದಿದೆ. ಕಳೆದೆರಡೂ ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿ ಬಹುಮತ ಗಳಿಸಿ ಮೈತ್ರಿ ಸರಕಾರದ ನೇತೃತ್ವ ವಹಿಸಿರುವುದರಿಂದ ಯುಸಿಸಿ ಜಾರಿಯ ಪರವಾಗಿರುವವರು ಸರಕಾರದ ಮೇಲೆ ತೀವ್ರ ಒತ್ತಡ ಹೇರುತ್ತಿರುವ ಹೊರತಾಗಿಯೂ ಕೇಂದ್ರ ಸರಕಾರ ಹೆಚ್ಚಿನ ಆತುರ ತೋರದೆ ಭಾರೀ ಎಚ್ಚರಿಕೆಯ ನಡೆಯನ್ನು ಅನುಸರಿಸುತ್ತ ಬಂದಿದೆ.

ಯುಸಿಸಿ ಜಾರಿಗೊಳಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕಳೆದ ವರ್ಷ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ದೇಶದಲ್ಲಿರುವ ಬೇರೆ ಬೇರೆ ಧರ್ಮ, ಪಂಗಡಗಳಿಗೆ ಸೇರಿದ ಜನರು ಆಸ್ತಿ, ವಿವಾಹಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಕಾನೂನುಗಳನ್ನು ಅನುಸರಿಸುವುದು ದೇಶದ ಏಕತೆಗೆ ಅವಮಾನ ಮಾಡಿದಂತೆ ಎಂದು ಪ್ರತಿಪಾದಿಸಿತ್ತು. ಯುಸಿಸಿಗೆ ಸಂಬಂಧಿಸಿದ ಸಂವಿಧಾನದ 44ನೇ ವಿಧಿಯು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯದ ಅಶಯಕ್ಕೆ ಬಲ ತುಂಬುತ್ತದೆ. ಕೆಲವೊಂದು ವಿಚಾರಗಳಿಗೆ ಸಂಬಂಧಪಟ್ಟಂತೆ ವೈಯಕ್ತಿಕ ಕಾನೂನುಗಳಿವೆ. ಇಂಥ ವಿಭಿನ್ನ ಕಾನೂನುಗಳನ್ನು ಪಾಲಿಸುತ್ತಿರುವವರನ್ನು ಒಂದೇ ವೇದಿಕೆಗೆ ಕರೆತರುವಲ್ಲಿ ಯುಸಿಸಿ ಪ್ರಧಾನ ಪಾತ್ರ ವಹಿಸಲಿದೆ ಎಂದು ಕೇಂದ್ರದ ಕಾನೂನು ಸಚಿವಾಲಯ ತನ್ನ ಪ್ರಮಾಣಪತ್ರದಲ್ಲಿ ವಿವರಿಸಿತ್ತು. ಆ ಮೂಲಕ ಯುಸಿಸಿ ಜಾರಿ ಸಂಬಂಧ ತನ್ನ ಒಲವನ್ನು ವ್ಯಕ್ತಪಡಿಸಿತ್ತು.

ಆದರೆ ಯುಸಿಸಿ ಜಾರಿ ಅತ್ಯಂತ ಸೂಕ್ಷ್ಮ ಮತ್ತು ಮಹತ್ವದ ವಿಷಯವಾಗಿರುವುದರಿಂದ ಈ ಸಂಬಂಧ ಕಾನೂನು ರಚನೆ ಮತ್ತು ಜಾರಿಯ ಕುರಿತಂತೆ ಯಾವುದೇ ಬಾಹ್ಯ ಪ್ರಾಧಿಕಾರ, ಸಂಸ್ಥೆ ಅಥವಾ ನ್ಯಾಯಾಲಯ ಸಂಸತ್‌ಗೆ ನಿರ್ದೇಶನ ನೀಡಲಾಗದು. ಕಾನೂನು ರಚನೆ ಸಂಸತ್‌ನ ಪರಮಾಧಿಕಾರವಾಗಿದ್ದು ಕಾನೂನು ರಚನೆ ನೀತಿ ನಿರೂಪಣೆಗೆ ಸಂಬಂಧಿಸಿದ್ದಾಗಿದೆ ಎಂದು ಕೇಂದ್ರ ಸರಕಾರ ಸ್ಪಷ್ಟ ಮಾತುಗಳಲ್ಲಿ ಹೇಳಿತ್ತು.

ಸಮಾನ ನಾಗರಿಕ ಸಂಹಿತೆ ಜಾರಿ ಸಂಬಂಧ ಈ ಹಿಂದೆ 21ನೇ ಕಾನೂನು ಆಯೋಗ 2018ರ ಆಗಸ್ಟ್‌ನಲ್ಲಿ ಸಾರ್ವಜನಿಕರು, ವಿವಿಧ ಸಂಘಟನೆಗಳ ಸಹಿತ ಸಂಬಂಧಿತರಿಂದ ಸಲಹೆ, ಆಕ್ಷೇಪ, ಅಭಿಪ್ರಾಯಗಳನ್ನು ಸಂಗ್ರಹಿಸಿ, ಕೇಂದ್ರ ಸರಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿತ್ತು. ಆದರೆ ಇದು ದೇಶದ ಏಕತೆಗೆ ಸಂಬಂಧಿಸಿದ ವಿಷಯವಾಗಿರುವುದರಿಂದ ಈಗ ಮತ್ತೆ 22ನೇ ಕಾನೂನು ಆಯೋಗದ ಮೂಲಕ ಸಾರ್ವಜನಿಕರಿಂದ ಯುಸಿಸಿ ಜಾರಿ ಕುರಿತಂತೆ ಸಾರ್ವಜನಿಕರ ಅಭಿಪ್ರಾಯ ಕೋರಲು ನಿರ್ಧರಿಸಿದೆ. ಅದರಂತೆ ಕಾನೂನು ಆಯೋಗ ಈ ಸಂಬಂಧ ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳಿಗೆ ಸಮಾನ ನಾಗರಿಕ ಸಂಹಿತೆ ಜಾರಿ ಬಗ್ಗೆ ತಮ್ಮ ಅಭಿಪ್ರಾಯ ಸಲ್ಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿದೆ. ಈ ಕುರಿತಂತೆ ವಿಪಕ್ಷಗಳು ಈಗಾಗಲೇ ಕೇಂದ್ರದ ವಿರುದ್ಧ ಮುಗಿಬಿದ್ದಿವೆ.

ಲೋಕಸಭೆ ಚುನಾವಣೆಗೆ ಒಂದು ವರ್ಷಕ್ಕೂ ಕಡಿಮೆ ಅವಧಿ ಉಳಿದಿರುವಂತೆಯೇ ಕೇಂದ್ರ ಸರಕಾರ ರಾಜಕೀಯವಾಗಿ ಅತ್ಯಂತ ವಿವಾದಾತ್ಮಕವಾಗಿರುವ ಸಮಾನ ನಾಗರಿಕ ಸಂಹಿತೆ ಜಾರಿಯತ್ತ ಮುಂದಡಿ ಇಟ್ಟಿದೆ. ಈ ಮೂಲಕ ಕೇಂದ್ರ ಸರಕಾರ ಈ ವರ್ಷಾಂತ್ಯದೊಳಗಾಗಿ ಮತ್ತೂಂದು ಮಾಸ್ಟರ್‌ ಸ್ಟ್ರೋಕ್‌ಗೆ ಸನ್ನದ್ಧವಾದಂತೆ ಕಂಡುಬರುತ್ತಿದೆ.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.