![1-vijayendra](https://www.udayavani.com/wp-content/uploads/2024/07/1-vijayendra-415x277.jpg)
Udupi Nejar Case; ಗುಂಪು ಕಟ್ಟಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಪ್ರಕರಣ ದಾಖಲು
ಪೊಲೀಸ್ ಕಾನ್ಸ್ ಟೇಬಲ್ ಚರಂಡಿಗೆ ಬಿದ್ದು ಗಾಯಗೊಂಡಿದ್ದರು.. ಪ್ರೇರೇಪಿಸಿದವರ ಮೇಲೆ ಕ್ರಮ
Team Udayavani, Nov 17, 2023, 5:14 PM IST
![police](https://www.udayavani.com/wp-content/uploads/2023/11/police-12-620x380.jpg)
ಉಡುಪಿ/ಮಲ್ಪೆ: ನೇಜಾರಿನಲ್ಲಿ ನಾಲ್ವರ ಹತ್ಯೆಗೈದ ಆರೋಪಿ ಪ್ರವೀಣ್ ಚೌಗಲೆಯನ್ನು ಪೊಲೀಸರು ಗುರುವಾರ ಸ್ಥಳ ಮಹಜರಿಗಾಗಿ ಕೃತ್ಯ ಎಸಗಿದ ನೇಜಾರಿನ ಮನೆಗೆ ಕರೆತಂದ ವೇಳೆ 30 ರಿಂದ 40 ಜನರು ಗುಂಪು ಕಟ್ಟಿಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಾಪಸ್ ಹೋಗುವ ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಸಾರ್ವಜನಿಕರು ಆರೋಪಿಗೆ ಹಲ್ಲೆ ನಡೆಸಲು ಮುಂದಾದಾಗ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದರು.
ಆರೋಪಿಯನ್ನು ವಾಹನದಿಂದ ಕೆಳಗೆ ಇಳಿಸುತಿದ್ದಂತೆಯೆ ಮಾಧ್ಯಮದವರ ಮುಂದೆ ಅಲ್ಲಿ ಸೇರಿದ್ದ 100 ರಿಂದ 200 ಜನ ಸಾರ್ವಜನಿಕರು ಗಲ್ಲಿಗೇರಿಸಿ ಗಲ್ಲಿಗೇರಿಸಿ ಪ್ರವೀಣ್ ನನ್ನು ಗಲ್ಲಿಗೇರಿಸಿ ಎಂದು ಘೋಷಣೆಯನ್ನು ಕೂಗಿದ್ದರು. ತನಿಖೆ ಪ್ರಕ್ರಿಯೆ ಮುಗಿಸಿ ಆರೋಪಿತನನ್ನು ಇಲಾಖಾ ವಾಹನದಲ್ಲಿ ಕುಳ್ಳಿರಿಸಿ ಹೊರಡುವ ಹೊತ್ತಿಗೆ ಸುಮಾರು 30 ರಿಂದ 40 ಜನ ಸಾರ್ವಜನಿಕರು ಆರೋಪಿತನನ್ನು ನಮಗೆ ಕೊಡಿ ಇಲ್ಲಿಯೇ ಶಿಕ್ಷೆ ನೀಡುತ್ತೇವೆ ಎಂದು ಇಲಾಖಾ ವಾಹನವನ್ನು ಅಡ್ಡ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಈ ವೇಳೆ ಕೆಎಸ್ಆರ್ ಪಿ ಕಾನ್ಸ್ಟೇಬಲ್ ಒಬ್ಬರು ಆಯ ತಪ್ಪಿ ಚರಂಡಿಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ನೀಡಲಾಗಿದೆ.
”ನಾವು ಗಲಭೆ ನಡೆಸಿದ್ದಕ್ಕಾಗಿ ಎಫ್ಐಆರ್ ದಾಖಲಿಸಿದ್ದೇವೆ. ಪ್ರೇರೇಪಿಸಿದವರ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗುವುದು. ವೀಕ್ಷಿಸುತ್ತಿದ್ದ ಸ್ಥಳೀಯ ಸಾರ್ವಜನಿಕರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಭ್ರಮ : ಪ್ರಕರಣ ದಾಖಲು
ನಾಲ್ವರ ಹತ್ಯೆಗೆ ಸಂಭ್ರಮ ವ್ಯಕ್ತಪಡಿಸಿರುವ ಕಿಡಿಗೇಡಿಗಳು ಹಿಂದೂ ಮಂತ್ರ ಎಂಬ ಇನ್ಸ್ಟಾಗ್ರಾಂ ಪುಟದಲ್ಲಿ ಸಂದೇಶ ಹರಿಯಬಿಟ್ಟಿರುವ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![1-vijayendra](https://www.udayavani.com/wp-content/uploads/2024/07/1-vijayendra-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
![1-PTI](https://www.udayavani.com/wp-content/uploads/2024/07/1-PTI-150x91.jpg)
Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್
![1-asddasdsa](https://www.udayavani.com/wp-content/uploads/2024/07/1-asddasdsa-1-150x100.jpg)
Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.