ಉಕ್ರೇನ್ ಬಿಕ್ಕಟ್ಟು: ಇಂದು ಪುಟಿನ್ ಮತ್ತು ಝೆಲೆನ್ ಸ್ಕಿ ಜತೆ ಪ್ರಧಾನಿ ಮೋದಿ ಮಾತುಕತೆ
ಈ ಯುದ್ಧ ಎಲ್ಲಾ ಹಿತಾಸಕ್ತಿಯ ವಿರುದ್ಧವಾದದ್ದು ಎಂಬುದನ್ನು ವಿವರಿಸಬೇಕು
Team Udayavani, Mar 7, 2022, 11:10 AM IST
ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ತಾರಕಕ್ಕೇರಿದ್ದು, ಏತನ್ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಮಾರ್ಚ್ 07) ಮಧ್ಯಾಹ್ನ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂವಹನ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಡಿಕೆಶಿ ಒಟ್ಟಾರೆ ನಡೆ ಬಗ್ಗೆ ಸಿದ್ದು ಅಸಮಾಧಾನ? ಅಧಿವೇಶನ ಬಳಿಕ ವರಿಷ್ಠರ ಭೇಟಿ
ಮತ್ತೊಂದೆಡೆ ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ ಉಕ್ರೇನ್ ಅಧ್ಯಕ್ಷ ವೋಲೋದಿಮಿರ್ ಝೆಲೆನ್ ಸ್ಕಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿದ್ದ 16,000ಕ್ಕೂ ಅಧಿಕ ಭಾರತೀಯರನ್ನು ರಕ್ಷಿಸುವ ಆಪರೇಷನ್ ಗಂಗಾ ಬೃಹತ್ ಏರ್ ಲಿಫ್ಟ್ ಕಾರ್ಯಾಚರಣೆ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ. ರಷ್ಯಾದ ಆಕ್ರಮಣ ಖಂಡಿಸಿ ವಿಶ್ವಸಂಸ್ಥೆಯಲ್ಲಿ ಮತ ಚಲಾಯಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹಾಗೂ ಉಳಿದ ಭಾರತೀಯರ ರಕ್ಷಣಾ ಕಾರ್ಯಾಚರಣೆ ಕುರಿತು ಉಕ್ರೇನ್ ಅಧ್ಯಕ್ಷ ಝೆಲೆನ್ ಸ್ಕಿ ಜೊತೆ ಮಾತುಕತೆ ನಡೆಯಲಿದೆ ಎಂದು ವರದಿ ತಿಳಿಸಿದೆ.
ಭಾರತದ ಜೊತೆ ಎಲ್ಲಾ ದೇಶಗಳು ವಿಶೇಷವಾದ ಬಾಂಧವ್ಯ ಹೊಂದಿದ್ದು, ಈ ನಿಟ್ಟಿನಲ್ಲಿ ಭಾರತ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಮಾತುಕತೆ ನಡೆಸಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ಉಕ್ರೇನ್ ವಿದೇಶಾಂಗ ಸಚಿವ ಡೆಮೈಟ್ರೋ ಕುಲೆಬಾ ಒತ್ತಾಯಿಸಿದ್ದರು. ಅಲ್ಲದೇ ಪ್ರಧಾನಿ ಮೋದಿ ಅವರು ಪುಟಿನ್ ಜತೆ ಚರ್ಚಿಸಿ, ಈ ಯುದ್ಧ ಎಲ್ಲಾ ಹಿತಾಸಕ್ತಿಯ ವಿರುದ್ಧವಾದದ್ದು ಎಂಬುದನ್ನು ವಿವರಿಸಬೇಕು ಎಂಬುದಾಗಿ ಮನವಿ ಮಾಡಿಕೊಂಡಿರುವುದಾಗಿ ವರದಿ ಹೇಳಿದೆ.
ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಬಾರಿ ರಷ್ಯಾ ಅಧ್ಯಕ್ಷ ಪುಟಿನ್ ಜತೆ ಮಾತುಕತೆ ನಡೆಸಿದ್ದರು. ರಾಜತಾಂತ್ರಿಕ ಮಾತುಕತೆ ಮೂಲಕ ಬಿಕ್ಕಟ್ಟನ್ನು ಪರಿಹರಿಸಿಕೊಳ್ಳುವಂತೆ ಮೊದಲ ಸುತ್ತಿನ ಮಾತುಕತೆಯಲ್ಲಿ ಪ್ರಧಾನಿ ಮೋದಿ ಅವರು ಪುಟಿನ್ ಅವರಲ್ಲಿ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್ಗೆ ಪನ್ನು ದೂರು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.