![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 4, 2020, 7:22 PM IST
ಉಳ್ಳಾಲ: ಮುನ್ನೂರು ಭಾಗದ 25 ರ ಹರೆಯದ ಕೋವಿಡ್ ಸೋಂಕಿತ 20 ನಿಮಿಷಗಳ ಕಾಲ ಆಂಬ್ಯುಲೆನ್ಸ್ ನಲ್ಲೇ ಉಳಿದಿದ್ದು, ಶಾಸಕರ ಮಧ್ಯಪ್ರವೇಶದ ಬಳಿಕ ಆಸ್ಪತ್ರೆ ವೈದ್ಯರು ಯೆನೆಪೋಯ ಹಸನ್ ಛೇಂಬರ್ಸ್ ಕಟ್ಟಡದಲ್ಲಿರುವ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿದ್ದಾರೆ.
ಬಂಟ್ವಾಳದ ಸಜಿಪದಲ್ಲಿ ನೆರೆ ಹಾವಳಿ ಪ್ರದೇಶವನ್ನು ವೀಕ್ಷಿಸಲು ಶಾಸಕ ಯು.ಟಿ ಖಾದರ್ ತೆರಳುತ್ತಿದ್ದರು. ದಾರಿಮಧ್ಯೆ ಯೆನೆಪೋಯ ಆಸ್ಪತ್ರೆ ಎದುರುಗಡೆಯ ಖಾಸಗಿ ಕಟ್ಟಡದ ಎದುರುಗಡೆ ಪಿಪಿಇ ಕಿಟ್ ಧರಿಸಿದ್ದ ಮಂದಿ ಆಂಬ್ಯುಲೆನ್ಸ್ ಜೊತೆಗೆ ನಿಂತಿದ್ದರು. ಇದನ್ನು ಗಮನಿಸಿದ ಖಾದರ್ ಕಾರು ನಿಲ್ಲಿಸಿ, ಆಂಬ್ಯುಲೆನ್ಸ್ ಸಿಬ್ಬಂದಿ ಜತೆಗೆ ಮಾತನಾಡಿದಾಗ ಸೋಂಕಿತ ಆಂಬ್ಯುಲೆನ್ಸ್ ಒಳಗಿರುವುದಾಗಿ ಗೊತ್ತಾಗಿದೆ. ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿಯಿಂದ ಸಂದೇಶ ಬಾರದ ಹಿನ್ನೆಲೆ ಸೋಂಕಿತನನ್ನು ಒಳಸೇರಿಸಲು ಕೋವಿಡ್ ಚಿಕಿತ್ಸಾ ಕೇಂದ್ರದ ವೈದ್ಯರು ನಿರಾಕರಿಸಿದ್ದರು. ತಕ್ಷಣ ಸ್ಪಂಧಿಸಿದ ಶಾಸಕ ಯು.ಟಿ ಖಾದರ್ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ತಕ್ಷಣ ಸೋಂಕಿತನನ್ನು ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಶಾಸಕರ ಮಾತಿಗೆ ಸ್ಪಂದಿಸಿ ಸೋಂಕಿತನನ್ನು ತಕ್ಷಣ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಿದರು. ಶಾಸಕರ ಮಾನವೀಯತೆಯ ಕಾರ್ಯಕ್ಕೆ 20 ನಿಮಿಷಗಳ ಕಾಲ ಸೋಂಕಿತನ ಜತೆಗೆ ರಸ್ತೆ ಬದಿ ಕಾಯುತ್ತಿದ್ಸ ಪಿಪಿಇ ಕಿಟ್ ಧರಿಸಿದ್ದ ಆಂಬ್ಯುಲೆನ್ಸ್ ಸಿಬ್ಬಂದಿ ಕೃತಜ್ಞತೆ ಸಲ್ಲಿಸಿದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.