![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Feb 14, 2021, 4:55 AM IST
ಮಲ್ಪೆ: ಮಲ್ಪೆ ಪಡುಕರೆ ಶಾಂತಿನಗರದ ಬಂದರು ಇಲಾಖೆಯ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಗೊಳ್ಳುತ್ತಿರುವುದನ್ನು ಇಲ್ಲಿನ ಗ್ರಾಮಸ್ಥರು ಆಕ್ಷೇಪಿಸಿ ಬಂದರು ಇಲಾಖೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಬಂದರು ಸಂರಕ್ಷಣಾಧಿಕಾರಿ ಸ್ಥಳಕ್ಕೆ ಬಂದು ನೋಟಿಸ್ ನೀಡಿ ಕಾಮಗಾರಿ ತಡೆ ಹಿಡಿದ ಘಟನೆ ನಡೆದಿದೆ.
ಪಡುಕರೆ ಶಾಂತಿನಗರದಲ್ಲಿ ಸರಕಾರದ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಕಟ್ಟಡ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಲ್ಲಿ ಯಾವುದೇ ಮಾಹಿತಿ ಇಲ್ಲ ಎನ್ನಲಾಗಿದೆ. ಈ ಬಗ್ಗೆ ಸಾರ್ವಜನಿಕರು ದೂರು ನೀಡಿ ಆಕ್ಷೇಪ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಕಟ್ಟಡ ಕಾಮಗಾರಿ ನಡೆಯತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿ, ನೋಟಿಸು ಜಾರಿಗೊಳಿಸಿ, ಕಾಮಗಾರಿಗೆ ತಡೆಯೊಡ್ಡಿದ್ದಾರೆ.
ಈಗಾಗಲೇ ಪಡುಕರೆಯಲ್ಲಿ ಮರೀನಾ ನಿರ್ಮಾಣ ಮಾಡುವ ಯೋಜನೆಗೆ ಪಡುಕರೆ ಭಾಗದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಮರೀನಾಕ್ಕೆ ಸಂಬಂಧಪಟ್ಟ ಯಾವುದೇ ಕೆಲಸಕ್ಕೆ ಆವಕಾಶ ನೀಡುತ್ತಿಲ್ಲ. ಇದೀಗ ಕಡಲತೀರದಲ್ಲಿ ಸರಕಾರದ ಜಾಗದಲ್ಲಿ ಅಧಿಕೃತ ದಾಖಲೆಗಳು ಇಲ್ಲದೆ ಕಟ್ಟಡ ನಿರ್ಮಾಣವಾಗುತ್ತಿದೆ. ಸರಕಾರವು ಪಡುಕರೆ ಭಾಗದಲ್ಲಿ ಮರೀನಾ ಮಾಡುವುದಿಲ್ಲ ವೆಂದು ಅಧಿಕೃತವಾಗಿ ಸೂಚನೆಯನ್ನು ನೀಡದ ಹೊರತು ಅಲ್ಲಿಯವರೆಗೆ ಸರಕಾರದ ಯಾವುದೇ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಇಲ್ಲಿನ ನಾಗರಿಕರು ಹೇಳಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.