![1-weww](https://www.udayavani.com/wp-content/uploads/2024/07/1-weww-3-415x233.jpg)
Uppinangady ಹೃದಯಾಘಾತ; ಯುವಕ ಸಾವು
Team Udayavani, May 4, 2024, 1:58 AM IST
![Uppinangady ಹೃದಯಾಘಾತ; ಯುವಕ ಸಾವು](https://www.udayavani.com/wp-content/uploads/2024/05/janardana-620x374.jpg)
ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ.
ಮೇಸ್ತ್ರಿ ಕೆಲಸಕ್ಕೆ ಹೋಗುತ್ತಿದ್ದ ಅವರು ಕೆಲಸಕ್ಕೆ ರಜೆ ಹಾಕಿ ಮನೆಯಲ್ಲೇ ಇದ್ದರು. ಅವರ ತಾಯಿ ತೋಟದ ಕೆಲಸಕ್ಕೆ ಹೋಗಿದ್ದು, ಸಂಜೆ ಬಂದು ನೋಡಿದಾಗ ಅವರು ಮಲಗಿದ್ದಲ್ಲೇ ಮೃತಪಟ್ಟಿರುವುದು ತಿಳಿದುಬಂದಿತ್ತು. ಅವರು ಶ್ರೀ ದುರ್ಗಾ ಭಜನ ಮಂಡಳಿ ದುರ್ಗಾಗಿರಿ ಮತ್ತು ಶ್ರೀ ದುರ್ಗಾ ಯುವಕ ಮಂಡಲ ದುರ್ಗಾಗಿರಿ ಇದರ ಸಕ್ರಿಯ ಸದಸ್ಯರಾಗಿದ್ದು, ವಿವಿಧ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಮೃತರು ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಹೃದಯಾಘಾತಕ್ಕೆ ತುತ್ತಾಗಿ ಮಹಿಳೆ ಸಾವು
ಉಪ್ಪಿನಂಗಡಿ: ಇಲ್ಲಿನ ನಂದಿನಿ ನಗರ ನಿವಾಸಿ ಉಪ್ಪಿನಂಗಡಿ ಪೊಲೀಸ್ ಠಾಣಾ ಸ್ವಚ್ಚತ ಸಿಬಂದಿ ಕುಮಾರಿ (65) ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಹಲವು ಮನೆಗಳಲ್ಲಿ ಸಹಾಯಕಿಯಾಗಿಯೂ ಕೆಲಸ ನಿರ್ವಹಿಸುತ್ತಿದ್ದ ಅವರು ಗುರುವಾರದವರೆಗೆ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದು, ಮನೆಯಲ್ಲಿ ಮಲಗಿದ್ದವರು ಶುಕ್ರವಾರ ಮುಂಜಾನೆ ಹೃದಯಾಘಾತಕ್ಕೀಡಾಗಿ ಮಲಗಿದ್ದಲ್ಲೇ ಮೃತಪಟ್ಟರು. ಮೃತರು ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
![1-weww](https://www.udayavani.com/wp-content/uploads/2024/07/1-weww-3-415x233.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.