![Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!](https://www.udayavani.com/wp-content/uploads/2024/07/de-1-415x235.jpg)
2017 ಕ್ಕಿಂತ ಮೊದಲು ಯುಪಿಯ ಯುವಕರಿಗೆ ಐಡೆಂಟಿಟಿ ಕ್ರೈಸಿಸ್ ಇತ್ತು: ಸಿಎಂ ಯೋಗಿ
Team Udayavani, Mar 2, 2023, 2:13 PM IST
![yogi](https://www.udayavani.com/wp-content/uploads/2023/03/yogi-2-620x346.jpg)
ಲಕ್ನೋ: 2017 ಕ್ಕಿಂತ ಮೊದಲು ರಾಜ್ಯದ ಯುವಕರು ಐಡೆಂಟಿಟಿ ಕ್ರೈಸಿಸ್(ಗುರುತಿಸಿಕೊಳ್ಳುವಿಕೆಗೆ ಹಿಂಜರಿಕೆ) ನಿಂದ ಬಳಲುತ್ತಿದ್ದರು ಆದರೆ ಪರಿಸ್ಥಿತಿ ಬದಲಾಗಿದೆ ಮತ್ತು ಈಗ ಅವರು ರಾಜ್ಯಕ್ಕೆ ಸೇರಿದವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಹೇಳಿದ್ದಾರೆ.
ರಾಜ್ಯ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಸಿಎಂ ಯೋಗಿ, 2017 ರ ಮೊದಲು, ಉತ್ತರ ಪ್ರದೇಶದ ಯುವಕರಲ್ಲಿ ಗುರುತಿಸಿಕೊಳ್ಳುವಲ್ಲಿ ಬಿಕ್ಕಟ್ಟು ಇತ್ತು. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು, ಬಡವರು ಹಸಿವಿನಿಂದ ಬಳಲುತ್ತಿದ್ದರು, ಹಸಿವಿನಿಂದ ಸಾವುಗಳು ಸಂಭವಿಸಿವೆ ಮತ್ತು ಮಹಿಳೆಯರು ಸುರಕ್ಷಿತವಾಗಿರಲಿಲ್ಲ ಎಂದರು.
“ಹಿಂದೆ ಸಂಘಟಿತ ಅಪರಾಧದಲ್ಲಿ ತೊಡಗಿರುವವರು ಸಮಾನಾಂತರ ಸರಕಾರವನ್ನು ನಡೆಸುತ್ತಿದ್ದರು. ಅದು ಭೂಮಿಯಾಗಿರಲಿ, ಗಣಿಗಾರಿಕೆಯಾಗಿರಲಿ ಅಥವಾ ಅರಣ್ಯವೇ ಆಗಿರಲಿ ಎಲ್ಲಾ ರೀತಿಯ ಮಾಫಿಯಾಗಳು ಪ್ರವರ್ಧಮಾನಕ್ಕೆ ಬರುತ್ತಿವೆ ಎಂದರು.
ಕಳೆದ ಆರು ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಈಗ ಯುವಕರು ಉತ್ತರ ಪ್ರದೇಶದವರು ಮತ್ತು ಇಲ್ಲಿ ಶಿಕ್ಷಣ ಪಡೆದವರು ಎಂದು ಹೆಮ್ಮೆಯಿಂದ ಹೇಳಬಹುದು. ಯುಪಿ ಈ ಬದಲಾವಣೆಯನ್ನು ಸಾಧ್ಯವಾಗಿಸಿದೆ ಎಂದ ಅವರು ಲಕ್ನೋದಲ್ಲಿ ನಡೆದ ಜಾಗತಿಕ ಹೂಡಿಕೆ ಶೃಂಗಸಭೆ ಮತ್ತು ಇತರ ಕಾರ್ಯಕ್ರಮಗಳನ್ನು ಉಲ್ಲೇಖಿಸಿದರು.
ಟಾಪ್ ನ್ಯೂಸ್
![Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!](https://www.udayavani.com/wp-content/uploads/2024/07/de-1-415x235.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!](https://www.udayavani.com/wp-content/uploads/2024/07/de-1-150x85.jpg)
Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್ ಬೈಲಾ!
![Renukaswamy ಶವ ಸಾಗಣೆ: ಬ್ಲೂ ಪ್ರಿಂಟ್ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ](https://www.udayavani.com/wp-content/uploads/2024/07/re-150x96.jpg)
Renukaswamy ಶವ ಸಾಗಣೆ: ಬ್ಲೂ ಪ್ರಿಂಟ್ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ
![Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/MANVi-150x91.jpg)
Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-150x90.jpg)
Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್ಡಿಕೆ
![1-ree](https://www.udayavani.com/wp-content/uploads/2024/07/1-ree-150x85.jpg)
Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್ಪಾಲ್, ರಶೀದ್ ಸಂಸದರಾಗಿ ಪ್ರಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.