ಅಂತಿಮ ಸುತ್ತಿನ ಮತದಾನ ಶುರು: ಮಹಾಸಮರ-ಅಮೆರಿಕದ ಗದ್ದುಗೆ ಯಾರಿಗೆ? ಸಮೀಕ್ಷೆಯಲ್ಲೇನಿದೆ

ಈಗಾಗಲೇ 95 ಲಕ್ಷ ಜನರು ಮತ ಚಲಾಯಿಸಿದ್ದಾರೆ. 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ 270 ಮತಗಟ್ಟೆಗಳಲ್ಲಿ ಮತದಾನ

Team Udayavani, Nov 3, 2020, 6:19 PM IST

ಅಂತಿಮ ಸುತ್ತಿನ ಮತದಾನ ಶುರು: ಮಹಾಸಮರ-ಅಮೆರಿಕದ ಗದ್ದುಗೆ ಯಾರಿಗೆ? ಸಮೀಕ್ಷೆಯಲ್ಲೇನಿದೆ

ವಾಷಿಂಗ್ಟನ್:ಇಡೀ ವಿಶ್ವವೇ ಕುತೂಹಲದಿಂದ ಕಾಯುತ್ತಿದ್ದ 2020ನೇ ಸಾಲಿನ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾರನ್ನು ಗದ್ದುಗೆಯಲ್ಲಿ ಕೂರಿಸಬೇಕೆಂಬುದನ್ನು ಅಮೆರಿಕದ ಮತದಾರರು ಬಹುತೇಕ ನಿರ್ಧರಿಸಿದ್ದು, ನ್ಯೂಯಾರ್ಕ್, ನ್ಯೂಜೆರ್ಸಿ ಮತ್ತು ವರ್ಜಿನಿಯಾದಲ್ಲಿ ಮಂಗಳವಾರ (ನವೆಂಬರ್ 3, 2020) ಮತದಾನ ಆರಂಭಗೊಂಡಿರುವುದಾಗಿ ವರದಿ ತಿಳಿಸಿದೆ.

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ  ಕೋವಿಡ್ 19 ಸೋಂಕಿನ ಆತಂಕದ ನಡುವೆಯೂ ಅಮೆರಿಕದ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದ್ದು, ಈಗಾಗಲೇ 95 ಲಕ್ಷ ಜನರು ಮತ ಚಲಾಯಿಸಿದ್ದಾರೆ. 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ 270 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ ಎಂದು ವರದಿ ವಿವರಿಸಿದೆ.

ಅಮೆರಿಕದ ಸೆನೆಟರ್, ಡೆಮೋಕ್ರಟಿಕ್ ಪಕ್ಷದ ಉಪಾಧ್ಯಕ್ಷ ಅಭ್ಯರ್ಥಿ ಕಮಲಾ ಹ್ಯಾರೀಸ್ ಟ್ವೀಟ್ ಮೂಲಕ, ಮಾಸ್ಕ್ ಧರಿಸಿ, ನಿಮ್ಮ ಮತಗಟ್ಟೆಯಲ್ಲಿ ಮತ ಚಲಾಯಿಸಿ ಎಂದು ಪೋಸ್ಟ್ ಮಾಡಿದ್ದರು. ಅಮೆರಿಕದ ಮತದಾರರು 3 ರೀತಿಯಲ್ಲಿ ಮತದಾನ ಮಾಡಬಹುದು. 1) ಮತಗಟ್ಟೆಗೆ ತೆರಳಿ 2) ಇ-ಮತದಾನ 3) ಬ್ಯಾಲೆಟ್ ಪೇಪರ್ ಮೂಲಕ. ಬ್ಯಾಲೆಟ್ ಪೇಪರ್ ಗಳನ್ನು ಮತದಾರರಿಗೆ ಹಂಚಲಾಗುತ್ತದೆ. ಬಳಿಕ ಪೋಸ್ಟ್ ಮೂಲಕ ವಾಪಸ್ ತರಿಸಿ ಎಣಿಕೆ ಮಾಡಲಾಗುತ್ತದೆ. ಸಾಮಾನ್ಯವಾಗಿ ಅಂಗವಿಕಲರು, ವಯೋವೃದ್ಧರು, ಗರ್ಭಿಣಿಯರು ಪೋಸ್ಟಲ್ ವೋಟಿಂಗ್ ಮಾಡುತ್ತಾರೆ. ಆದರೆ ಇವರು ಮೊದಲೇ ರಿಜಿಸ್ಟರ್ ಮಾಡಿಸಿರಬೇಕು.

ಇದನ್ನೂ ಓದಿ:ರಾಜ್ಯಸಭೆಯಲ್ಲಿ “ಕೈ” ತಪ್ಪಿಹೋದ ಬಹುಮತದ ಅಸ್ತ್ರ! ಈಗ ಬಿಜೆಪಿ ಮತ್ತಷ್ಟು ಬಲಿಷ್ಠ

ಈ ಬಾರಿ ಕೋವಿಡ್ ನಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಪ್ರಮಾಣದಲ್ಲಿ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೆಲವು ರಾಜ್ಯಗಳು ಪೋಸ್ಟಲ್ ವೋಟಿಂಗ್ ಎಣಿಕೆ ಆರಂಭಿಸಿವೆ. ಇನ್ನು ಕೆಲವು ನವೆಂಬರ್ 3ರ ನಂತರ ಎಣಿಕೆ ಆರಂಭಿಸಿದ್ದು, ಗುರುವಾರ ಬೆಳಗ್ಗೆ ಪೂರ್ಣ ಪ್ರಮಾಣದ ಫಲಿತಾಂಶ ಹೊರಬೀಳಲಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಸಮೀಕ್ಷೆಗಳು ಏನು ಹೇಳುತ್ತಿವೆ?

ಫೈನಲ್ ರಾಯಿಟರ್ಸ್ ಮತ್ತು ಇಪ್ಸೋಸ್ ರಾಷ್ಟ್ರೀಯ ಸಮೀಕ್ಷೆಯಲ್ಲಿ, ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಪರ ಶೇ.52ರಷ್ಟು ಮತದಾರರು ಒಲವು ವ್ಯಕ್ತಪಡಿಸಿದ್ದು, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಪರ ಶೇ.44ರಷ್ಟು ಮತದಾರರು ಒಲವು ವ್ಯಕ್ತಪಡಿಸಿರುವುದಾಗಿ ತಿಳಿಸಿದೆ.

ಈ ರಾಷ್ಟ್ರೀಯ ಸಮೀಕ್ಷೆ ಅಕ್ಟೋಬರ್ 29ರಿಂದ ನವೆಂಬರ್ 2ರವರೆಗೆ ನಡೆದಿದ್ದು, 1,333 ವಯಸ್ಕರಿಂದ ಪಡೆದ ಪ್ರತಿಕ್ರಿಯೆನ್ನು ಆಧರಿಸಿ ಸಮೀಕ್ಷೆ ನಡೆಸಲಾಗಿದೆ ಎಂದು ಹೇಳಿದೆ. ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಅವರು ಫ್ಲೋರಿಡಾದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಿಂತ ಸ್ವಲ್ಪ ಮುನ್ನಡೆ ಸಾಧಿಸಿರುವುದಾಗಿ ಸಮೀಕ್ಷೆ ಹೇಳಿದೆ.

ಟಾಪ್ ನ್ಯೂಸ್

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

1-INDI-M

Stop ‘misusing’; ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

1-patla

Yakshagana;ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಕಲಾವಿದರಿಂದ ಅಮೆರಿಕದಲ್ಲಿ ಅಭಿಯಾನ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

Defamation Case: 24 ವರ್ಷದ ಹಿಂದಿನ ಪ್ರಕರಣ- ಮೇಧಾ ಪಾಟ್ಕರ್‌ ಗೆ 5 ತಿಂಗಳ ಜೈಲುಶಿಕ್ಷೆ

1-rahul

Parliament; ಹಿಂದೂಗಳು ಎಂದು ಹೇಳಿಕೊಳ್ಳುವವರು… ರಾಹುಲ್ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kim-un-jang

North Korea; ದಕ್ಷಿಣ ಕೊರಿಯ ಹಾಡು ಕೇಳಿದ ಯುವಕನ ಶಿರಚ್ಛೇದ!

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

rishi-sunak

Election:ಬ್ರಿಟನ್‌ ಪಿಎಂ ಸುನಕ್‌ ಟೆಂಪಲ್‌ ರನ್‌!

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

1-weewqeqweqw

US Election; ಬೈಡೆನ್‌ ಬದಲಿಗೆ ಮಿಶೆಲ್‌ ಅಧ್ಯಕ್ಷೀಯ ಅಭ್ಯರ್ಥಿ?

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-sagara

Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

Congress ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

Congress Govt ಸಿಎಂ, ಡಿಸಿಎಂ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ತಿಮ್ಮಾಪುರ

police crime

New criminal law ಅಡಿಯಲ್ಲಿ ಕನ್ನಡಿಗನ ವಿರುದ್ಧ ಮೊದಲ ಕೇಸ್ ದಾಖಲಿಸಿದ ಕೇರಳ ಪೊಲೀಸ್

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

ಕಾಪು: ವಾಹನ ಚಾಲಕರು, ಸಂಚಾರಿಗಳ ಪ್ರಾಣಕ್ಕೆ ಸಂಚಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.