ಹೊಸ ಸರ್ಕಾರ ಸ್ವಾಗತಿಸಲು ವಿಧಾನಸೌಧ ಸಜ್ಜು
ಸಿಎಂ ಕಚೇರಿ, ಕ್ಯಾಬಿನೆಟ್ ಹಾಲ್, ಸಮ್ಮೇಳನ ಸಭಾಂಗಣಕ್ಕೆ ಹೊಸ ಲುಕ್
Team Udayavani, May 20, 2023, 7:17 AM IST
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರ ಸ್ವಾಗತಿಸಲು ಶಕ್ತಿ ಕೇಂದ್ರ ವಿಧಾನಸೌಧ ಸಜ್ಜಾಗುತ್ತಿದೆ. ಶನಿವಾರ ಮುಖ್ಯಮಂತ್ರಿ-ಉಪ ಮುಖ್ಯಮಂತ್ರಿ ಸಹಿತ ಹಲವು ಸಚಿವರು ಪ್ರಮಾಣ ಸ್ವೀಕರಿಸುತ್ತಿದ್ದು, ವಿಧಾನಸೌಧದ ಸಂಪುಟ ಸಭೆ ಸಭಾಂಗಣ, ಮುಖ್ಯಮಂತ್ರಿ ಕಚೇರಿ, ಸಮ್ಮೇಳನ ಸಭಾಂಗಣ ಸ್ವತ್ಛಗೊಳಿಸಿ ಹೂವುಗಳಿಂದ ಆಲಂಕಾರ ಮಾಡಲಾಗಿದೆ.
ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿ ನಂತರ ಸಂಪುಟ ಸಭಾಂಗಣ, ಮುಖ್ಯಮಂತ್ರಿ ಹಾಗೂ ಸಚಿವರ ಕೊಠಡಿಗಳಿಗೆ ಬೀಗ ಹಾಕಲಾಗಿತ್ತು. ಇದೀಗ ಬೀಗ ತೆರೆದು ಸ್ವತ್ಛಗೊಳಿಸಲಾಗಿದೆ.
ಪ್ರಮುಖವಾಗಿ ಮುಖ್ಯಮಂತ್ರಿ ಕಚೇರಿ, ಸಂಪುಟ ಸಭೆ ಸಭಾಂಗಣದ ಪೀಠೊಪಕರಣಗಳಿಗೆ ಪಾಲಿಶ್, ಅಗತ್ಯ ಇರುವ ಕಡೆ ಬಣ್ಣ ಬಳಿಯುವ ಕೆಲಸವೂ ನಡೆಯುತ್ತಿದೆ.
ಶನಿವಾರ ಪ್ರಮಾಣ ವಚನದ ನಂತರ ಸಂಪುಟ ಸಭೆ ನಡೆಯಲಿದೆ. ಜತೆಗೆ ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿ ಹಾಗೂ ನೂತನ ಸಚಿವರು ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಹೀಗಾಗಿ ವಿಧಾನಸೌಧ-ವಿಕಾಸಸೌಧ ಸಿಂಗರಿಸಿ ಸಜ್ಜುಗೊಳಿಸಲಾಗುತ್ತಿದೆ.
ಸಂಪುಟ ರಚನೆಯ ನಂತರ ಸಚಿವರಿಗೆ ಖಾತೆ ಹಂಚಿಕೆಯಾದ ಮೇಲೆ ವಿಧಾನಸೌಧ ಹಾಗೂ ವಿಕಾಸಸೌಧಲ್ಲಿ ಕೊಠಡಿಗಳ ಹಂಚಿಕೆಯಾಗಲಿದ್ದು, ಸೋಮವಾರ ಅಥವಾ ಮಂಗಳವಾರ ವೇಳೆಗೆ ಎಲ್ಲರಿಗೂ ಕೊಠಡಿ ಹಂಚಿಕೆ ಪೂರ್ಣಗೊಳ್ಳಲಿದೆ ಎಂದು ಹೇಳಲಾಗಿದೆ.
ಸಂಪುಟ ಅಜೆಂಡಾ ಸಿದ್ಧ
ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೊದಲ ಸಂಪುಟದಲ್ಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳ ಜಾರಿ ಮಾಡಲಾಗುವುದು ಎಂದು ಈಗಾಗಲೇ ಹೇಳಿರುವಂತೆ ಅಧಿಕೃತ ಘೋಷಣೆ ಮಾಡಲು ತಯಾರಿ ನಡೆದಿದ್ದು, ಅಧಿಕಾರಿಗಳಿಗೆ ಸಂಪುಟ ಅಜೆಂಡಾ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.