ಮಾರ್ಚ್‌ 3ರಂದು ಅಮಿತ್‌ ಶಾರಿಂದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ: ಸಚಿವ ಸುಧಾಕರ್


Team Udayavani, Feb 25, 2023, 10:39 PM IST

1-wqe-wq-ewqe

ದೇವನಹಳ್ಳಿ: ‘ರಾಜ್ಯದ ನಾಲ್ಕು ದಿಕ್ಕುಗಳಲ್ಲಿಯೂ ಬಿಜೆಪಿ ಪಕ್ಷದಿಂದ ಮಾರ್ಚ್‌ 3 ರಂದು ವಿಜಯ ಸಂಕಲ್ಪ ಯಾತ್ರೆ ಪ್ರಾರಂಭವಾಗಲಿದ್ದು, ದೇವನಹಳ್ಳಿಯ ಆವತಿ ಗ್ರಾಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾರಿಂದ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಪಟ್ಟಣದ ಅನಂತ ನಿಕೇತನ ಶಾಲಾ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ನಾಡಪ್ರಭು ಕೆಂಪೆಗೌಡರ ಪುರ್ವಜರ ನಾಡದ ಆವತಿಯಿಂದ  ವಿಜಯ ಸಂಕಲ್ಪ ಯಾತ್ರೆ ಪ್ರಾರಂಭವಾಗಲಿದ್ದು, ಅದೇ ರೀತಿ ಚಾಮರಾಜ ನಗರದ ಮಹದೇಶ್ವರ ಬೆಟ್ಟ, ಸಂಗೋಳ್ಳಿ ರಾಯಣ್ಣರ ನಾಡದ ಬೆಳಗಾವಿ, ಬೀದರ್‌ನ ಅನುಭವ ಮಂಟಪದಿಂದ ಒಟ್ಟು ನಾಲ್ಕು ರಥ ಸಾಗಲಿದೆ’ ಎಂದರು.
‘ದೇವನಹಳ್ಳಿ ಕ್ಷೇತ್ರದ ಒಟ್ಟು 292 ಬೂತ್‌ಗಳನ್ನು ಗೆದ್ದರೇ ರಾಜ್ಯವನ್ನು ಗೆದಂತೆ, ಜಿಲ್ಲೆಯ ದೊಡ್ಡಬಳ್ಳಾಪುರ, ಹೊಸಕೋಟೆ, ದೇವನಹಳ್ಳಿ ವಿಧಾನ ಸಭಾ ಕ್ಷೇತ್ರಗಳಲ್ಲಿ ಪಕ್ಷದ ಹುರುಪು ಹೆಚ್ಚಾಗಿದ್ದು, ವಿವಿಧ ವರದಿಗಳ ಆಧಾರದಲ್ಲಿ ಈಗಾಗಲೇ ನಾವು ಈ ಕ್ಷೇತ್ರಗಳನ್ನು ಗೆದಿದ್ದೇವೆ. ಬಿಜೆಪಿಯ ತತ್ವ ಸಿದ್ಧಾಂತಕ್ಕೆ ಒಪ್ಪಿ ನೂರಾರು ಪ್ರಬಲ ರಾಜಕೀಯ ಮುಖಂಡರು ಪಕ್ಷ ಸೇರ್ಪಡೆಯಾಗುತ್ತಿದ್ದಾರೆ’ ಎಂದರು.

‘ಕೋವಿಡ್‌ ಸಮಯದಲ್ಲಿ ಕೋಟ್ಯಾಂತರ ಜನರಿಗೆ ಲಸಿಕೆ ನೀಡಿ ಜೀವ ಉಳಿಸುವ ಕೆಲಸ ಕೇಂದ್ರ ಸರ್ಕಾರ ಮಾಡಿದೆ. ಕರೋನಾ ಸಂಕಟದಿಂದ ಸಾಕಷ್ಟು ರಾಷ್ಟ್ರಗಳು ಇನ್ನೂ ಆರ್ಥಿಕವಾಗಿ ಸುಧಾರಣೆಯಾಗಿಲ್ಲ. ಆದರೆ ಭಾರತದ ಆರ್ಥಿಕತೆ ವೇಗದಿಂದ ಮುನ್ನುಗುತ್ತಿದೆ.  ಮುದ್ರಾ ಯೋಜನೆಯಡಿಯಲ್ಲಿ 2.75 ಲಕ್ಷ ಕೋಟಿ ಸಾಲ ನೀಡಲಾಗಿದೆ. ಜನಧನ್‌ ಮೂಲಕ ಬ್ಯಾಂಕ್ ಖಾತೆ ತೆರೆದಿದೆ’ ಎಂದು ತಿಳಿಸಿದರು.
‘ಸರ್ಕಾರದ ಉಜ್ವಲ, ಜಲಜೀವನ, ರೈತ ವಿದ್ಯಾಸಿರಿ, ಕಷಿ ಸನ್ಮಾನ್‌ ಯೋಜನೆ ಸೇರಿದಂತೆ ಎಲ್ಲ ಫಲಾನುಭವಿಗಳ ಕುರಿತು ಮಾಹಿತಿ ಪಡೆದು, ಅವರಿಗಾಗಿಯೇ ದೇವನಹಳ್ಳಿಯಲ್ಲಿ ವಿಶೇಷ ಸಮಾವೇಶ ಮಾಡೋಣ, ಕ್ಷೇತ್ರದಲ್ಲಿರುವ 30 ಪಂಚಾಯಿತಿ, 2 ಪುರಸಭೆಗಳಲ್ಲಿ ಚುನಾವಣಾ ಪೂರ್ವದಲ್ಲಿ ಪ್ರವಾಸ ಮಾಡುತ್ತೇನೆ’ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿ, ‘ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪಕ್ಷವೂ ಬಲಿಷ್ಠವಾಗಿದೆ. ರಾಜ್ಯದ 4 ಕಡೆಯಲ್ಲಿಯೂ ವಿಜಯ ಸಂಕಲ್ಪ ಯಾತ್ರೆಗೆ ಏಕ ಕಾಲದಲ್ಲಿ ಚಾಲನೆ ದೊರೆಯಲಿದೆ. ಕೇಂದ್ರ ಗೃಹ ಸಚಿವರು ಭಾಗವಹಿಸುವ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಕಾರ್ಯಕರ್ತರು ಭಾಗಿಯಾಗುವಂತೆ ಯೋಜನೆ ರೂಪಿಸಬೇಕು’ ಎಂದರು.
ಪಕ್ಷದ ಮುಖಂಡ ಚೇತನ್‌ ಗೌಡ ಮಾತನಾಡಿ, ‘ಈಗಾಗಲೇ ಪಕ್ಷದ ಸಂಪರ್ಕದಲ್ಲಿಷ್ಟು ಹಿರಿಯ, ಪ್ರಭಾವಿ ರಾಜಕೀಯ ಮುಖಂಡರು ಇದ್ದಾರೆ. ಚುನಾವಣೆಯ ಮುನ್ನವೇ ಎಲ್ಲರೂ ಪಕ್ಷ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ನನ್ನ ಬಳಿ 15 ಸಾವಿರ ಮತಗಳನ್ನು ಪಕ್ಷಕ್ಕೆ ಹಾಕಿಸುವ ಸಾಮರ್ಥ್ಯವಿದ್ದು, ಇನ್ನಷ್ಟು ನಾಯಕರು ಸೇರ್ಪಡೆಯಿಂದ ನೂರಾನೆ ಬಲ ಬರಲಿದೆ’ ಎಂದರು.
ಪಕ್ಷದ‌ ಜಿಲ್ಲಾ ಉಸ್ತುವಾರಿ ಪುಪ್ಪ ಶಿವಕುಮಾರ್, ಮಾಜಿ ಶಾಸಕರಾದ ಚಂದ್ರಣ್ಣ, ಪಿಳ್ಳಮುನಿಶಾಮಪ್ಪ, ತಾಲ್ಲೂಕು ಅಧ್ಯಕ್ಷ ಸುಂದರೇಶ್‌, ಪ್ರಧಾನ ಕಾರ್ಯದರ್ಶಿ ನಿಲೇರಿ ಮಂಜುನಾಥ್‌, ಮುಖಂಡರಾದ ದೇಸು ನಾಗರಾಜ್‌, ಕಾಂತರಾಜು ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಯುವ ಮುಖಂಡರು ಉಪಸ್ಥಿತಿದ್ದರು.

ಕಾಂಗ್ರೆಸ್‌ ಸುಳ್ಳಿನ ಭರವಸೆ
ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ರೈತರಿಗೆ ಸೂಕ್ತವಾಗಿ ವಿದ್ಯುತ್‌ ನೀಡಲು ಸಾಧ್ಯವಾಗದೇ ಇರುವವರು ತಿಂಗಳಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ನೀಡುವುದು ಕನಸ್ಸಿನ ಮಾತು. 24 ಸಾವಿರ ಕೋಟಿ ವೆಚ್ಚವಾಗುವ ಗೃಹ ಲಕ್ಷ್ಮೀ ಯೋಜನೆ ಒಂದು ಸುಳ್ಳಿನ ಕತೆಯಾಗಿದೆ. ಮತ ಸೆಳೆಯಲು ಮೋಸದ ತಂತ್ರಗಾರಿ ಮಾಡುತ್ತಿದ್ದಾರೆ. ಈ ಬಾರಿ ಬಿಜೆಪಿ ಪ್ರಣಾಳಿಕೆಯ ಅಂಶಗಳ ಕುರಿತು ವಾಟ್ಸ್‌ ಆಫ್‌, ಇ-ಮೇಲ್‌, ಸಲಹಾ ಪೆಟ್ಟಿಗೆಗಳ ಮೂಲಕ ಮತದಾರರಿಂದ ಮಾಹಿತಿ ಪಡೆಯಲಿದ್ದೇವೆ. ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಲ್ಲಿ ಆದರ್ಶ ಪ್ರಣಾಳಿಗೆ ಸಿದ್ಧ ಮಾಡುತ್ತೇವೆ’ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದರು.

ಶಾಸಕರಿಂದ ಬೈಯಪ್ಪ ಅಧಿಕಾರ ದುರುಪಯೋಗ
‘ಶಾಸಕ ನಿಸರ್ಗ ನಾರಾಯಣಸ್ವಾಮಿ ತಾಲ್ಲೂಕಿಗೆ ದ್ರೋಹ ಬಗೆದಿದ್ದಾರೆ. ಬಡವರ ಮೇಲೆ ಸುಳ್ಳು ಕೇಸ್‌ ದಾಖಲು ಮಾಡಿದ್ದಾರೆ. ಬೈಯಪ್ಪ ಅಧ್ಯಕ್ಷರಾಗಿದ್ದ ಸಮಯದಲ್ಲಿ 10 ನಿವೇಶನಕ್ಕೆ ಅನುಮತಿ ಪಡೆದು 20 ನಿವೇಶನ ಮಾರಾಟ ಮಾಡಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ಇಂತಹ ನೀಚ ರಾಜಕಾರಣಿಯನ್ನು ಕ್ಷೇತ್ರ ಬಿಟ್ಟು ಹೊಡಿಸಬೇಕು’ ಎಂದುರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಖಜಾಂಜಿ ಎ.ಕೆ.ಪಿ.ನಾಗೇಶ್‌  ಆರೋಪಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.