ಮನೆಯಲ್ಲಿ ಹಿಜಾಬ್ ಧರಿಸಿ..ಆದರೆ ಸಾರ್ವಜನಿಕ ಸ್ಥಳದಲ್ಲಿ ಧರಿಸಿದರೆ ಸಹಿಸಲ್ಲ: ಪ್ರಜ್ಞಾ ಸಿಂಗ್

ನಿಮಗೆ ಮದರಸಾ ಇದೆ, ಒಂದು ವೇಳೆ ಅಲ್ಲಿ ಬೇಕಾದರೆ ಹಿಜಾಬ್ ಧರಿಸಬೇಕೆಂದಿದ್ದರೆ ಹಾಕಿಕೊಳ್ಳಿ

Team Udayavani, Feb 17, 2022, 11:12 AM IST

ಮನೆಯಲ್ಲಿ ಹಿಜಾಬ್ ಧರಿಸಿ…ಆದರೆ ಸಾರ್ವಜನಿಕ ಸ್ಥಳದಲ್ಲಿ ಧರಿಸಿದರೆ ಸಹಿಸಲ್ಲ: ಪ್ರಜ್ಞಾ ಸಿಂಗ್

ಭೋಪಾಲ್: ಹಿಜಾಬ್ ಧರಿಸಿ ಕಾಲೇಜಿಗೆ ತೆರಳುವಂತಿಲ್ಲ ಎಂಬ ಕರ್ನಾಟಕ ಸರಕಾರದ ಆದೇಶದ ವಿರುದ್ಧ ಮುಸ್ಲಿಮ್ ವಿದ್ಯಾರ್ಥಿನಿಯರು ಹಲವೆಡೆ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಸಾರ್ವಜನಿಕವಾಗಿ ಹಿಜಾಬ್ ಧರಿಸುವುದನ್ನು ಸಹಿಸಿಕೊಳ್ಳುವುದಿಲ್ಲ ಎಂದು ವಿವಾದಿತ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಹಿಜಾಬ್ ವಿವಾದಕ್ಕೆ ದ್ರೌಪದಿ ವಸ್ತ್ರಾಪಹರಣ ತುಲನೆ: ಸ್ವರಾ ಭಾಸ್ಕರ್ ಸಿಕ್ಕಾಪಟ್ಟೆ ಟ್ರೋಲ್

ಪ್ರಜ್ಞಾ ಸಿಂಗ್ ಠಾಕೂರ್ ಮಾಲೇಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಜಾಮೀನಿನ ಮೇಲೆ ಹೊರಗಿರುವುದಾಗಿ ವರದಿ ಹೇಳಿದೆ. ಈಗಿನ ಸನ್ನಿವೇಶದಲ್ಲಿ ಹಿಜಾಬ್ ಧರಿಸಬೇಕಾದ ಅಗತ್ಯವಿಲ್ಲ, ಯಾಕೆಂದರೆ ಹಿಂದೂಗಳು ಮಹಿಳೆಯನ್ನು ಪೂಜಿಸುತ್ತಾರೆ. ಆದರೆ ಯಾರಿಗೆ ತಮ್ಮ ಮನೆಯಲ್ಲಿ ಸುರಕ್ಷಿತವಲ್ಲ ಎಂಬ ಭಾವನೆ ಇದೆಯೋ ಅವರು ಮಾತ್ರ ಹಿಜಾಬ್ ಧರಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿರುವುದಾಗಿ ವರದಿ ತಿಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ಧರಿಸಬೇಕಾದ ಅಗತ್ಯವಿಲ್ಲ. ಯಾರಿಗೆ ತಮ್ಮ ಮನೆಯಲ್ಲಿ ಸುರಕ್ಷಿತವಲ್ಲ ಎಂಬ ಭಯ ಇದೆಯೋ ಅವರು ಧರಿಸಲಿ. ನಿಮಗೆ ಮದರಸಾ ಇದೆ, ಒಂದು ವೇಳೆ ಅಲ್ಲಿ ಬೇಕಾದರೆ ಹಿಜಾಬ್ ಧರಿಸಬೇಕೆಂದಿದ್ದರೆ ಹಾಕಿಕೊಳ್ಳಿ, ಅದಕ್ಕೆ ನಮ್ಮ ತಕರಾರಿಲ್ಲ. ಹೊರಗಡೆ ಇದು ಹಿಂದು ಸಮಾಜ, ಇಲ್ಲಿ ಹಿಜಾಬ್ ಅಗತ್ಯವಿಲ್ಲ ಎಂದು ಮಧ್ಯಪ್ರದೇಶದ ಭೋಪಾಲ್ ನ ದೇವಾಲಯದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಈ ಹೇಳಿಕೆ ನೀಡಿರುವುದಾಗಿ ವರದಿ ವಿವರಿಸಿದೆ.

ಹಿಜಾಬ್ ಎಂಬುದು ಪರ್ದಾ. ನಿಮ್ಮನ್ನು ಕೆಟ್ಟ ದೃಷ್ಟಿಯಿಂದ ನೋಡುವವರ ವಿರುದ್ಧ ಪರ್ದಾ ಬಳಸುವಂತಾದ್ದು, ಆದರೆ ಹಿಂದೂಗಳು ಮಹಿಳೆಯರನ್ನು ಪೂಜ್ಯ ಭಾವನೆಯಿಂದ ನೋಡುವುದರಿಂದ ನಿಮ್ಮನ್ನು ಕೆಟ್ಟ ದೃಷ್ಟಿಯಿಂದ ನೋಡುವುದಿಲ್ಲ. ನೀವು ಮನೆಯಲ್ಲೇ ಹಿಜಾಬ್ ಧರಿಸಿ ಎಂದು ಪ್ರಜ್ಞಾ ಠಾಕೂರ್ ತಿಳಿಸಿರುವುದಾಗಿ ವರದಿ ಹೇಳಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.