ವನಿತಾ ವಿಶ್ವಕಪ್‌: ಭಾರತಕ್ಕೆ ವಿಂಡೀಸ್ ಎದುರು ಅಮೋಘ ಗೆಲುವು; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

ಬ್ಯಾಟಿಂಗ್, ಬೌಲಿಂಗ್ ಬಲ ಪ್ರದರ್ಶಿಸಿದ ವನಿತೆಯರು

Team Udayavani, Mar 12, 2022, 1:45 PM IST

1-sdsada

ಹ್ಯಾಮಿಲ್ಟನ್‌: ವನಿತಾ ವಿಶ್ವಕಪ್‌ ಪಂದ್ಯಾವಳಿಯ “ಲಕ್ಕಿ ಟೀಮ್’ ಆಗಿದ್ದ ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತ ಶನಿವಾರ 155 ರನ್ ಗಳ ಭಾರಿ ಗೆಲುವು ದಾಖಲಿಸಿ ಸಂಭ್ರಮಿಸಿದೆ. ಆಡಿದ 3 ಪಂದ್ಯಗಳಲ್ಲಿ2 ಪಂದ್ಯ ಗೆದ್ದು1 ಪಂದ್ಯ ಸೋತಿರುವ ಮಹಿಳೆಯರು ಅಂಕಪಟ್ಟಿಯಲ್ಲಿ 4 ಅಂಕ ಸಂಪಾದಿಸಿ +1.333 ರನ್ ರೇಟ್ ನೊಂದಿಗೆ ಅಗ್ರ ಸ್ಥಾನಕ್ಕೆ ಏರಿದ್ದಾರೆ.

ಭಾರತದ ಪಾಲಿಗೆ ಪಾಲಿಗೆ ಗೆಲುವು ಅನಿವಾರ್ಯವಾಗಿದ್ದ ವೇಳೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಿಥಾಲಿ ರಾಜ್ ಬಳಗ ವಿಂಡೀಸ್ ಮಹಿಳೆಯರ ದಾಳಿಯನ್ನು ದಂಡಿಸಿ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 317 ರನ್ ಗಳ ಅಮೋಘ ಮೊತ್ತ ಪೇರಿಸಿತ್ತು. ಆರಂಭಿಕ ಆಟಗಾರ್ತಿ ಸ್ಮ್ರತಿ ಮಂಧನ ಆಕರ್ಷಕ ಶತಕ ಸಿಡಿಸಿದರು. 119 ಎಸೆತಗಳಲ್ಲಿ 123 ರನ್ ಗಳಿಸಿದ ಅವರು ತಮ್ಮ ಇನ್ನಿಂಗ್ಸ್ ನಲ್ಲಿ 13 ಬೌಂಡರಿ ಮತ್ತು 2 ಸಿಕ್ಸರ್ ಗಳನ್ನೂ ಹೊಡೆದಿದ್ದರು.

ಮಧ್ಯಮ ಕ್ರಮಾಂಕದಲ್ಲಿ ಆಟಕ್ಕಿಳಿದ ಹರ್ಮ್ ಪ್ರೀತ್ ಕೌರ್ ಅವರು ಭರ್ಜರಿ ಶತಕ ಸಿಡಿಸಿ ತಂಡದ ಭಾರಿ ಮೊತ್ತಕ್ಕೆ ಕಾರಣರಾದರು. 107 ಎಸೆತಗಳಲ್ಲಿ 109 ರನ್ ಗಳಿಸಿದ ಅವರು 10 ಬೌಂಡರಿ ಮತ್ತು 2 ಸಿಕ್ಸರ್ ಗಳನ್ನು ಹೊಡೆದಿದ್ದರು.

ಉಳಿದಂತೆ ಆರಂಭಿಕ ಆರಗಾರ್ತಿ ಯಶ್ತಿಕಾ ಭಾಟಿಯಾ 31, ದೀಪ್ತಿ ಶರ್ಮ 15 , ಪೂಜಾ ವಸ್ತ್ರಾಕಾರ್ 10 ರನ್ ಕೊಡುಗೆ ಸಲ್ಲಿಸಿದರು.

ಬೃಹತ್ ಗುರಿ ಬೆನ್ನಟ್ಟಿದ ವಿಂಡೀಸ್ ಮಹಿಳೆಯರು 40.3 ಓವರ್ ಆಗುವಷ್ಟರಲ್ಲಿ 162 ರನ್ ಗಳಿಸಿ ತನ್ನ ಎಲ್ಲಾ ವಿಕೆಟ್ ಗಳನ್ನ ಕಳೆದುಕೊಂಡು ಭಾರತೀಯ ನಾರಿಯರಿಗೆ ಶರಣಾದರು.

ಭಾರತದ ಬೌಲಿಂಗ್ ನಲ್ಲಿ ಸ್ನೇಹ ರಾಣಾ 9.3 ಓವರ್ ಎಸೆದು 1 ಮೇಡನ್ ಓವರ್ ನೊಂದಿಗೆ 22 ರನ್( 2.3 ) ಬಿಟ್ಟು ಕೊಟ್ಟು 3 ವಿಕೆಟ್ ಪಡೆದು ಗಮನ ಸೆಳೆದರು. ರಾಜೇಶ್ವರಿ ಗಾಯಕ್ವಾಡ್ ಅವರು 10 ಓವರ್ ಎಸೆದು 3 ಮೇಡನ್ ಓವರ್ ಗಳೊಂದಿಗೆ ಒಂದು ವಿಕೆಟ್ ಪಡೆದರು. ಮೇಘನಾ ಸಿಂಗ್ 2 ವಿಕೆಟ್ ಪಡೆದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.