![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 12, 2022, 1:45 PM IST
ಹ್ಯಾಮಿಲ್ಟನ್: ವನಿತಾ ವಿಶ್ವಕಪ್ ಪಂದ್ಯಾವಳಿಯ “ಲಕ್ಕಿ ಟೀಮ್’ ಆಗಿದ್ದ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಶನಿವಾರ 155 ರನ್ ಗಳ ಭಾರಿ ಗೆಲುವು ದಾಖಲಿಸಿ ಸಂಭ್ರಮಿಸಿದೆ. ಆಡಿದ 3 ಪಂದ್ಯಗಳಲ್ಲಿ2 ಪಂದ್ಯ ಗೆದ್ದು1 ಪಂದ್ಯ ಸೋತಿರುವ ಮಹಿಳೆಯರು ಅಂಕಪಟ್ಟಿಯಲ್ಲಿ 4 ಅಂಕ ಸಂಪಾದಿಸಿ +1.333 ರನ್ ರೇಟ್ ನೊಂದಿಗೆ ಅಗ್ರ ಸ್ಥಾನಕ್ಕೆ ಏರಿದ್ದಾರೆ.
ಭಾರತದ ಪಾಲಿಗೆ ಪಾಲಿಗೆ ಗೆಲುವು ಅನಿವಾರ್ಯವಾಗಿದ್ದ ವೇಳೆ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಿಥಾಲಿ ರಾಜ್ ಬಳಗ ವಿಂಡೀಸ್ ಮಹಿಳೆಯರ ದಾಳಿಯನ್ನು ದಂಡಿಸಿ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 317 ರನ್ ಗಳ ಅಮೋಘ ಮೊತ್ತ ಪೇರಿಸಿತ್ತು. ಆರಂಭಿಕ ಆಟಗಾರ್ತಿ ಸ್ಮ್ರತಿ ಮಂಧನ ಆಕರ್ಷಕ ಶತಕ ಸಿಡಿಸಿದರು. 119 ಎಸೆತಗಳಲ್ಲಿ 123 ರನ್ ಗಳಿಸಿದ ಅವರು ತಮ್ಮ ಇನ್ನಿಂಗ್ಸ್ ನಲ್ಲಿ 13 ಬೌಂಡರಿ ಮತ್ತು 2 ಸಿಕ್ಸರ್ ಗಳನ್ನೂ ಹೊಡೆದಿದ್ದರು.
ಮಧ್ಯಮ ಕ್ರಮಾಂಕದಲ್ಲಿ ಆಟಕ್ಕಿಳಿದ ಹರ್ಮ್ ಪ್ರೀತ್ ಕೌರ್ ಅವರು ಭರ್ಜರಿ ಶತಕ ಸಿಡಿಸಿ ತಂಡದ ಭಾರಿ ಮೊತ್ತಕ್ಕೆ ಕಾರಣರಾದರು. 107 ಎಸೆತಗಳಲ್ಲಿ 109 ರನ್ ಗಳಿಸಿದ ಅವರು 10 ಬೌಂಡರಿ ಮತ್ತು 2 ಸಿಕ್ಸರ್ ಗಳನ್ನು ಹೊಡೆದಿದ್ದರು.
ಉಳಿದಂತೆ ಆರಂಭಿಕ ಆರಗಾರ್ತಿ ಯಶ್ತಿಕಾ ಭಾಟಿಯಾ 31, ದೀಪ್ತಿ ಶರ್ಮ 15 , ಪೂಜಾ ವಸ್ತ್ರಾಕಾರ್ 10 ರನ್ ಕೊಡುಗೆ ಸಲ್ಲಿಸಿದರು.
ಬೃಹತ್ ಗುರಿ ಬೆನ್ನಟ್ಟಿದ ವಿಂಡೀಸ್ ಮಹಿಳೆಯರು 40.3 ಓವರ್ ಆಗುವಷ್ಟರಲ್ಲಿ 162 ರನ್ ಗಳಿಸಿ ತನ್ನ ಎಲ್ಲಾ ವಿಕೆಟ್ ಗಳನ್ನ ಕಳೆದುಕೊಂಡು ಭಾರತೀಯ ನಾರಿಯರಿಗೆ ಶರಣಾದರು.
ಭಾರತದ ಬೌಲಿಂಗ್ ನಲ್ಲಿ ಸ್ನೇಹ ರಾಣಾ 9.3 ಓವರ್ ಎಸೆದು 1 ಮೇಡನ್ ಓವರ್ ನೊಂದಿಗೆ 22 ರನ್( 2.3 ) ಬಿಟ್ಟು ಕೊಟ್ಟು 3 ವಿಕೆಟ್ ಪಡೆದು ಗಮನ ಸೆಳೆದರು. ರಾಜೇಶ್ವರಿ ಗಾಯಕ್ವಾಡ್ ಅವರು 10 ಓವರ್ ಎಸೆದು 3 ಮೇಡನ್ ಓವರ್ ಗಳೊಂದಿಗೆ ಒಂದು ವಿಕೆಟ್ ಪಡೆದರು. ಮೇಘನಾ ಸಿಂಗ್ 2 ವಿಕೆಟ್ ಪಡೆದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.