ತಪ್ಪೇನಿದೆ ?: ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಡಾ.ಯತೀಂದ್ರ
ಕೆಲ ಮಾಧ್ಯಮಗಳು ಮತ್ತು ಬಿಜೆಪಿ ಐಟಿ ಸೆಲ್ ವಿವಾದ ಮಾಡುತ್ತಿದೆ
Team Udayavani, Mar 26, 2022, 3:10 PM IST
ಮೈಸೂರು : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸ್ವಾಮೀಜಿಗಳ ಶಿರವಸ್ತ್ರದ ಕುರಿತು ನೀಡಿದ ಹೇಳಿಕೆಯನ್ನು ಅವರ ಪುತ್ರ ವರುಣಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದು,ಜನ ಸಾಮಾನ್ಯರಿಗೆ ಅರ್ಥವಾಗಲಿ ಎಂದು ಆ ರೀತಿ ಹೇಳಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
ತಲೆ ಮೇಲೆ ಬಟ್ಟೆ ಹಾಕುವುದು ತಪ್ಪಲ್ಲ,ಇದನ್ನು ಹೇಳಲು ಆ ಹೋಲಿಕೆ ನೀಡಿದ್ದಾರೆ. ದುಪ್ಪಟವನ್ನು ಸ್ವಾಮೀಜಿಗಳ ಶಿರವಸ್ತ್ರಕ್ಕೆ ಹೋಲಿಸಿಲ್ಲ.ಸಿದ್ದರಾಮಯ್ಯ ಅವರು ಸ್ವಾಮೀಜಿಗಳಿಗೆ ಅವಮಾನ ಮಾಡುವ ರೀತಿ ಹೇಳಿಕೆ ಕೊಟ್ಟಿಲ್ಲ.ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಹೇಳಿಕೆ ನೀಡಿದ್ದಾರೆ. ವಿದ್ಯಾರ್ಥಿಗಳು ಹಿಜಾಬ್ ಇಲ್ಲದೆ ಪರೀಕ್ಷೆಗೆ ಬರುತ್ತಿಲ್ಲ. ಹಿಜಾಬ್ ಬದಲು ದುಪ್ಪಟಕ್ಕೆ ಅವಕಾಶ ಕೊಡಿ ಅಂತಾ ಕೇಳಿದ್ದಾರೆ. ಇದನ್ನು ವಿಧಾನಸಭೆಯಲ್ಲೂ ಅವರು ಹೇಳಿದ್ದರು.ಇದರಲ್ಲೀ ತಪ್ಪೇನಿದೆ ? ಅವರು ನಿನ್ನೆ ಹಿಜಾಬ್ ಬಗ್ಗೆ ಮಾತನಾಡಿಲ್ಲ.ಇದರಲ್ಲಿ ವಿವಾದ ಮಾಡುವಂತದ್ದು ಏನಿದೆ? ಎಂದು ಪ್ರಶ್ನಿಸಿದರು.
ದುಪ್ಪಟ ಬಗ್ಗೆ ಮಾತನಾಡುವಾಗ ಹಿಂದೂ, ಜೈನ್ ಮಹಿಳೆಯರು ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದಿದ್ದಾರೆ.ನಮ್ಮ ನಾಯಕಿ ಇಂದಿರಾಗಾಂಧಿ ಅವರೂ ಕೂಡ ತಲೆಗೆ ಸೆರಗು ಹಾಕುತ್ತಿದ್ದರು.ಅವರು ಹಿಜಾಬ್ಗೂ ಕಾವಿ ಬಟ್ಟೆಗೂ ಹೋಲಿಕೆ ಮಾಡಿಲ್ಲ.ಸ್ವಾಮೀಜಿಗಳು ತಲೆ ಮೇಲೆ ಕಾವಿ ಹಾಕುವುದು ಸತ್ಯ ಅಲ್ವಾ ? ಎಲ್ಲಾ ಧರ್ಮಗಳಲ್ಲೂ ತಲೆ ಮೇಲೆ ಬಟ್ಟೆ ಹಾಕುವ ಸಂಸ್ಕೃತಿ ಇದೆ ಎಂಬುದನ್ನು ತಿಳಿಸಿದ್ದಾರೆ. ಹಿಜಾಬ್ಗೂ ಸ್ವಾಮೀಜಿಗಳ ಕಾವಿ ಒಂದೇ ಅಂತ ಹೇಳಿಲ್ಲ. ಇದನ್ನು ವಿವಾದ ಮಾಡುವಂತದ್ದು ಏನಿದೆ ?ಕೆಲ ಮಾಧ್ಯಮಗಳು ಹಾಗೂ ಬಿಜೆಪಿ ಐಟಿ ಸೆಲ್ ಈ ರೀತಿ ಮಾಡುತ್ತಿದೆ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Theft; ಗಂಗೊಳ್ಳಿ ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು?
HIV vaccine; ಎಚ್ಐವಿ ತಡೆಗೆ 2 ಡೋಸ್ ಲಸಿಕೆ ಅಭಿವೃದ್ಧಿ: ಎಂಐಟಿ
Bullet Train; ಬೆಂಗಳೂರಿನಲ್ಲೇ ತಯಾರಾಗಲಿದೆ ದೇಶದ ಮೊದಲ ಬುಲೆಟ್ ರೈಲು?
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.