ಯಾರ ಸರಕಾರ: ಇಂದು ಸಿಗಲಿದೆ ಉತ್ತರ-ಮಧ್ಯಾಹ್ನದ ವೇಳೆಗೆ ಫ‌ಲಿತಾಂಶದ ಸ್ಪಷ್ಟ ಚಿತ್ರಣ ಸಾಧ್ಯತೆ


Team Udayavani, May 13, 2023, 7:41 AM IST

BJP CONG JDS KARNATAKA

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮತ ಎಣಿಕೆಗೆ ಕ್ಷಣ ಗಣನೆ ಆರಂಭವಾಗಿದೆ. 36 ಕೇಂದ್ರಗಳಲ್ಲಿ ಶನಿವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಗೊಳ್ಳಲಿದ್ದು, ಮಧ್ಯಾಹ್ನದ ವೇಳೆಗೆ ಫ‌ಲಿತಾಂಶದ ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆಯಿದೆ.

ಮತದಾನೋತ್ತರ ಸಮೀಕ್ಷೆಗಳ ಬಳಿಕ ರಾಜಕೀಯ ನಾಯಕರಲ್ಲಿ ನಾನಾ ರೀತಿಯ ಲೆಕ್ಕಾಚಾರಗಳು/ ವ್ಯಾಖ್ಯಾನಗಳು ನಡೆಯುತ್ತಿದ್ದು, ಅತಂತ್ರವೋ, ಸಮ್ಮಿಶ್ರವೋ, ಸ್ವಂತ ಬಲದ ಸರಕಾರವೋ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.

ಮೂರೂ ಪಕ್ಷಗಳ ನಾಯಕರು ಹಾಗೂ ಅಭ್ಯರ್ಥಿಗಳ ಎದೆ ಬಡಿತ ಹೆಚ್ಚಾಗಿದೆ. ಅಭ್ಯರ್ಥಿಗಳಿಗೆ ಗೆಲ್ಲುವ ಚಿಂತೆಯಾದರೆ, ನಾಯಕರಿಗೆ ಸರಕಾರ ರಚನೆಯ ಚಿಂತೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಶೇ.73.19ರಷ್ಟು ದಾಖಲೆಯ ಮತದಾನವಾಗಿ ಇತಿಹಾಸ ನಿರ್ಮಾಣವಾಗಿದೆ.

ಒಟ್ಟು 5.30 ಕೋಟಿ ಮತದಾರರ ಪೈಕಿ 3.88 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಶೇ.85.56 ರಷ್ಟು ಅತಿ ಹೆಚ್ಚು ಮತದಾನ ಆಗಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಾರಿಗೆ ಲಾಭವಾಗುತ್ತದೆ, ಶೇ.57ರಷ್ಟು ಅತಿ ಕಡಿಮೆ ಮತದಾನ ಆಗಿರುವ ಬೆಂಗಳೂರು ನಗರದಲ್ಲಿ ಯಾರಿಗೆ ನಷ್ಟವಾಗುತ್ತದೆ ಎಂಬುದು ಕಾದು ನೋಡಬೇಕಾಗಿದೆ.

ಬಿರುಸಿನ ಸಭೆ
ಫ‌ಲಿತಾಂಶದ ಬಗ್ಗೆ ಮೂರು ಪಕ್ಷಗಳ ನಾಯಕರು ಶುಕ್ರವಾರ ಸಭೆ ನಡೆಸಿ ಚರ್ಚಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪಕ್ಷದ ನಾಯಕರ ಜತೆ ಚರ್ಚಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ಸಿಂಗ್‌ ಸುರ್ಜೆವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಮುಂದಿನ ತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ದೂರವಾಣಿ ಮೂಲಕ ಮುಖಂಡರ ಜತೆ ಸಮಾಲೋಚಿಸಿದರು. ಜಿ.ಟಿ.ದೇವೇಗೌಡರು ಪದ್ಮನಾಭನಗರ ನಿವಾಸದಲ್ಲಿ ಎಚ್‌.ಡಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದರು.

ಲೆಕ್ಕಾಚಾರಗಳದ್ದೇ ಸಾಮ್ರಾಜ್ಯ
ಮತ ಎಣಿಕೆಗೆ ಮುನ್ನಾ ದಿನವಾದ ಶುಕ್ರವಾರ ಇಡೀ ದಿನ ಮೂರೂ ಪಕ್ಷಗಳ ನಾಯಕರದ್ದು ಲೆಕ್ಕಾಚಾರಗಳದ್ದೇ ಸಾಮ್ರಾಜ್ಯವಾಗಿತ್ತು. ನಮ್ಮದೇ ಬಹುಮತ ಎಂದು ಮೇಲ್ನೋಟಕ್ಕೆ ಹೇಳಿದರೂ ಒಂದೊಮ್ಮೆ ಅಗತ್ಯ ಸಂಖ್ಯಾಬಲ ಸಿಗದಿದ್ದರೆ ಏನು ಮಾಡಬೇಕೆಂಬ ಬಗ್ಗೆ ಚರ್ಚೆಯಲ್ಲೇ ಮುಳುಗಿದ್ದರು. ಬಿಜೆಪಿ ನಾಯಕರು ತಮಗೆ 80ರಿಂದ 85 ಸೀಟು ಸಿಕ್ಕಿ, ಜೆಡಿಎಸ್‌ಗೆ 30ರಿಂದ 35 ಸ್ಥಾನಗಳು ಲಭಿಸಿದರೆ ಜತೆಗೂಡಿ ಸರಕಾರ ರಚಿಸಬಹುದು ಎಂಬ ಲೆಕ್ಕಾಚಾರ ಹಾಕಿಕೊಂಡಿದ್ದಾರೆ. ಕಾಂಗ್ರೆಸ್‌ ಕೂಡ ಕನಿಷ್ಠ 115 ಸ್ಥಾನ ಬಂದೇ ಬರುತ್ತದೆ. ಒಂದೊಮ್ಮೆ ಬಾರದಿದ್ದರೆ ಪಕ್ಷೇತರರ ಬೆಂಬಲ ಪಡೆಯಲು ಮೊದಲು ಪ್ರಯತ್ನ ಮಾಡಬೇಕು. 100ರಿಂದ 105 ಸ್ಥಾನವಷ್ಟೇ ಸಿಕ್ಕಿದರೆ ಜೆಡಿಎಸ್‌ ಜತೆ ಮೈತ್ರಿ ಬಗ್ಗೆ ಮಾತುಕತೆಗೆ ಮುಂದಾಗಬೇಕಾಗುತ್ತದೆ ಎಂಬ ಚಿಂತನೆ ನಡೆಸಿದ್ದಾರೆ. ಜೆಡಿಎಸ್‌ನದು ಬೇರೆಯೇ ಲೆಕ್ಕಾಚಾರವಿದ್ದು, ಫ‌ಲಿತಾಂಶ ಪ್ರಕಟಗೊಂಡ ಬಳಿಕ ಕಾಂಗ್ರೆಸ್‌ ಮತ್ತು ಬಿಜೆಪಿ ಪಡೆಯುವ ಸಂಖ್ಯೆ ನೋಡಿಕೊಂಡು ತೀರ್ಮಾನ ಕೈಗೊಳ್ಳಲು ನಿರ್ಧರಿಸಿದೆ.

ಟಾಪ್ ನ್ಯೂಸ್

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.